Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

5 ವರ್ಷದಲ್ಲಿ ರಾಜ್ಯ ಸರ್ಕಾರ ಸಾಲ 10 ಲಕ್ಷ ಕೋಟಿಗೆ ಏರಲಿದೆ : ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

Facebook
Twitter
Telegram
WhatsApp

ಹಾಸನ: ಮಾಜಿ ಸಿಎಂ ಕುಮಾರಸ್ವಾಮಿ ಅವರು ಇಂದು ಹಾಸನಾಂಬೆ ದರ್ಶನ ಪಡೆದು, ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ‌. ಇನ್ನೂ ಐದು ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇದ್ದರೆ ಸಾಲ ಜಾಸ್ತಿಯಾಗುತ್ತದೆ. ಐದು ವರ್ಷದಲ್ಲಿ ಹತ್ತು ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಬಹುದು ಎಂದಿದ್ದಾರೆ.

 

ವಿಶ್ವಮಾನ್ಯತೆ ಪಡೆದ ನಮ್ಮ ವಿತ್ತ ತಜ್ಞರು, ನಮ್ಮ ಮುಖ್ಯಮಂತ್ರಿಗಳು. ಅವರ ಸರ್ಕಾರದಲ್ಲಿಯೇ ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆಯಾಗಿದೆ. ರಾಜ್ಯ ಆರ್ಥಿಕವಾಗಿ ಅಪಾಯದ ಪರಿಸ್ಥಿತಿ ಎದುರಿಸುತ್ತಿದೆ. ಅಸಮರ್ಪಕ ನಿರ್ವಹಣೆಯಿಂದ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ದೊಡ್ಡ ಪ್ರಮಾಣದ ಸುಳಿಗೆ ಸಿಲುಕಿಸುವ ಅಪಾಯವಿದೆ ಎಂದಿದ್ದಾರೆ. 135 ಸ್ಥಾನ ಸಿಕ್ಕಿದರು ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ನಗಬೇಕೋ, ಅಳಬೇಕೋ ಗೊತ್ತಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೆ ವೇಳೆ ಗ್ಯಾರಂಟಿ ಬಗ್ಗೆ ಮಾತನಾಡಿ, ಒಂದು ಗ್ಯಾರಂಟಿ ಜಾರಿಯಾಗಿಲ್ಲ. ಜಾರಿಯಾಗಿರುವ ಗ್ಯಾರಂಟಿಗಳಿಂದ ಜನರಿಗೆ ಉಪಯೋಗವಾಗುತ್ತಿಲ್ಲ. ಪ್ರಚಾರದಲ್ಲಿ ಈ ಸರ್ಕಾರ ಕಾಲ ಕಳೆಯುತ್ತಿದೆ. ಹಾಸನದಲ್ಲಿ ಗೃಹಲಕ್ಷ್ಮೀ ಯೋಜನೆ ಹಾಸನದಲ್ಲಿ 90% ಮಹಿಳೆಯರಿಗೆ ತಲುಪಿಲ್ಲ ಎಂದು ಸಿದ್ದರಾಮಯ್ಯ ಅವರು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದಾರೆ. ನನ್ನ ಎದೆ ಬಗೆದರೆ ಸಿದ್ದರಾಮಯ್ಯ ಮಾತ್ರ ಕಾಣುವುದು ಎಂದು ಹೇಳುವ ಶಿವಲಿಂಗೇಗೌಡ ಅವರ ಅರಸೀಕೆರೆ ಕ್ಷೇತ್ರದಲ್ಲಿಯೇ ಈ ಯೋಜನೆ ತಲುಪಿಲ್ಲ ಎಂದು ಸ್ವತಃ ಸಿಎಂ ಅವರೇ ಚರ್ಚೆ ನಡೆಸಿದ್ದಾರೆ. ಈ ಗ್ಯಾರಂಟಿಗಳ ಹಣೆಬರಹ ಏನಾಗಿದೆ ಎಂಬುದು ಇದರಿಂದಾನೇ ತಿಳಿಯುತ್ತದೆ. ಶಕ್ತಿ ಯೋಜನೆಗೆ ಹಣ ಒದಗಿಸಬೇಕಾದ ಜವಬ್ದಾರಿ ಸರ್ಕಾರದ ಮೇಲಿದೆ. ಆದರೆ ಈಗಾಗಲೇ ಹಣವೆಲ್ಲಾ ಸ್ವಾಹವಾಗಿದೆ ಎಂದು ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!