Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಮೊಗ್ಗದಿಂದ ರಾಜ್ಯ ಸರ್ಕಾರಿ ನೌಕರರ ಅಧ್ಯಕ್ಷ ಷಡಕ್ಷರಿ ವರ್ಗಾವಣೆ..!

Facebook
Twitter
Telegram
WhatsApp

 

ಶಿವಮೊಗ್ಗ: ಅಧಿಕಾರ ದುರ್ಬಳಕೆ ಆರೋಪ ಕೇಳಿ ಬಂದ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಅಧ್ಯಕ್ಷ ಷಡಕ್ಷರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಆರೋಪ ಕೇಳಿ ಬಂದ ಕೂಡಲೇ ಶಿವಮೊಗ್ಗ ಜಿಲ್ಲಾಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸಿ.ಎಸ್.ಷಡಕ್ಷರಿಯವರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು. ಅದರಂತೆ ಇದೀಗ .ಷಡಕ್ಷರಿಯವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲಾಗಿದೆ.

ಷಡಕ್ಷರಿ ಅವರ ಅಧಿಕಾರ ದುರ್ಬಳಕೆ ಬಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಾರ್ಯಪಾಲಕ, ಇಂಜಿನಿಯರ್ ವರದಿ ನೀಡಿದ್ದಾರೆ. ರಾಯಲ್ಟಿ ಪಾವತಿಸದೆ ಶಿವಮೊಗ್ಗದ ಅಬ್ಬಲಗೆರೆಯ ಕೆರೆಯಿಂದ ಮಣ್ಣು ಸಾಗಿಸಿದ್ದಾರೆ. ಈ ಮೂಲಕ ಸರ್ಕಾರದ ಖಜಾನೆಗೆ 71,45,920 ನಷ್ಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಕರ್ತವ್ಯ ಸ್ಥಾನದಲ್ಲಿರದೇ ಬೆಂಗಳೂರಿನಲ್ಲಿಯೇ ಹೆಚ್ಚು ಸಮಯ ಇರುತ್ತಾರೆ ಎನ್ನುವ ಆರೋಪ ಕೇಳಿಬಂದಿತ್ತು. ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಹೆಚ್ಚು ಕೆಲಸ ಇಲ್ಲದೇ ಇರುವುದರಿಂದ ಶಿವಮೊಗ್ಗದ ಬದಲು ಬೆಂಗಳೂರಿನಲ್ಲಿಯೇ ಸಮಯ ಕಳೆಯುತ್ತಿದ್ದರು ಎಂದು ಹೇಳಲಾಗಿತ್ತು. ಇದನ್ನೂ ಸಹ ಗಂಭೀರವಾಗಿ ಪರಿಗಣಿಸಿದ ಸರ್ಕಾರ, ಇದೀಗ ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾಯಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!