ಬೆಂಗಳೂರು: 2019ರಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದ್ದರು. ಅದೇ ವೇಳೆ ದಾಂಧಲೆ ನಡೆಸಿದ್ದ ಬೆಂಬಲಿಗರ ವಿರುದ್ಧ ಸಾತನೂರು, ಕೋಡಿಹಳ್ಳಿ ಸೇರಿ ರಾಮನಗರ ಜಿಲ್ಲೆಯ ನಾನಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ, ರೈತ ಮುಖಂಡರು, ನಾನಾ ಸಂಘಟನೆಗಳ ಮುಖಂಡರ ವಿರುದ್ಧದ ಮೊಕದ್ದಮೆಗಳನ್ನು ಕೈಬಿಡಲು ಸರ್ಕಾರ ನಿರ್ಧಾರ ಮಾಡಿದೆ.
ಸಿಎಂ ಸಿದ್ದರಾಮಯ್ಯ ಅವರ ಕ್ಯಾಬಿನೆಟ್ ಈ ನಿರ್ಧಾರವನ್ನ ತೆಗೆದುಕೊಂಡಿದೆ. ಡಿಕೆ ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧ ಪ್ರಕರಣ ಸೇರಿ 12 ಪ್ರಕರಣ ಸೇರಿ, 62 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಅದೆಲ್ಲವೂ ಇದೀಗ ಕೈಬಿಡಲಾಗುತ್ತಿದೆ. ಆದರೆ ಇದರ ನಡುವೆ ಕೇಸ್ ವಾಪಾಸ್ ಗೆ ಪೊಲೀಸ್ ಇಲಾಖೆ ಹಾಗೂ ಕಾನೂನು ಇಲಾಖೆಯಿಂದ ವಿರೋಧವಿದೆ. ಆದರೂ ರಾಜ್ಯ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಸಂಪುಟ ಸಭೆಯ ಟಿಪ್ಪಣಿಯಲ್ಲಿ ಎರಡು ಇಲಾಖೆಗಳ ಅಭಿಪ್ರಾಯ ಕೇಳಲಾಗಿತ್ತು. ಈ ವೇಳೆ ಇವರು ವಾಪಾಸ್ ಪಡೆಯಲು ಅರ್ಹವಾದ ಪ್ರಕರಣಗಳಲ್ಲ ಎಂದು ಡಿಜಿ ಮತ್ತು ಐಜಿಪಿ ಅಭಿಪ್ರಾಯ ಪಟ್ಟರೆ, ಸಾರ್ವಜನಿಕ ಹಿತಾಸಕ್ತಿ ಇಲ್ಲ, ಕೇಸ್ ಹಿಂದಕ್ಕೆ ಪಡೆಯಲು ಸೂಕ್ತ ಅಲ್ಲ ಎಂದು ಕಾನೂನು ಇಲಾಖೆ ಅಭಿಪ್ರಾಯ ಪಟ್ಟಿದೆ. ಆದಾಗ್ಯೂ ಎರಡೂ ಇಲಾಖೆಯ ಅಭಿಪ್ರಾಯ ಬದಿಗೊತ್ತಿ ಸಂಪುಟ ಸಭೆಯಲ್ಲಿ ಕೇಸ್ ವಾಪಸ್ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಒಟ್ಟು 62 ಪ್ರಕರಣಗಳನ್ನು ವಾಪಾಸ್ ಪಡೆಯುವುದಕ್ಕೆ ಕ್ಯಾಬಿನೆಟ್ ನಲ್ಲಿ ನಡೆದ ಸಭೆಯಲ್ಲಿಯೇ ನಿರ್ಧಾರ ಮಾಡಲಾಗಿದೆ. ಒಂದಷ್ಟು ವಿರೋಧದ ನಡಿವೆಯೂ ಕ್ರಿಮಿನಲ್ ಪ್ರಜತಣದಿಂದ ಮುಕ್ತರಾಗಲಿದ್ದಾರೆ.





