Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

10 ಸಾವಿರ ಶಿಕ್ಷಕರನ್ನು ನೇಮಿಸಲು ರಾಜ್ಯ ಸರ್ಕಾರ ನಿರ್ಧಾರ : ಯಾವಾಗಿಂದ ಆರಂಭವಾಗಬಹುದು..?

Facebook
Twitter
Telegram
WhatsApp

ಬೆಂಗಳೂರು: ಶಿಕ್ಷಕ ವೃತ್ತಿ ಮಾಡಬೇಕೆಂದುಕೊಂಡವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯ ಸರ್ಕಾರ 10 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ನಿರ್ಧಾರ ಮಾಡಿದೆ‌. ಈ ಸಂಬಂಧ ಈಗಾಗಲೇ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿದೆ. ಜೊತೆಗೆ45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೂ ಸಿದ್ಧತೆ ನಡೆದಿದೆ. ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿಯೇ ಅತಿಥಿ ಶಿಕ್ಷಕರನ್ನು ನೇಮಕ‌ ಮಾಡಿಕೊಳ್ಳಲಾಗುತ್ತದೆ.

ರಾಜ್ಯದಲ್ಲಿ ಕನಿಷ್ಠ 50 ಸಾವಿರ ಪ್ರಾಥಮಿಕ ಶಾಲೆಯಲ್ಲಿ 5 ಸಾವಿರ ಶಿಕ್ಷಕರ ಕೊರತೆ ಇದೆ. ಶಿಕ್ಷಣ ಇಲಾಖೆ ಹೊಸದಾಗಿ 10 ಸಾವಿರ ಶಿಕ್ಷಕರ ನೇಮಕಾತಿ ಕೈಗೊಳ್ಳಲಿದೆ. ರಾಜ್ಯ ಸರ್ಕಾರವೂ ಬಜೆಟ್ ಘೋಷಿಸಿರುವಂತೆ ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ. ಶಿಕ್ಷಣ ಇಲಾಖೆಯೂ ನೇಮಕಾತಿಗೆ ಸಂಬಂಧಿಸಿದಂತ ಪ್ರಕ್ರಿಯೆಗಳನ್ನು ನೋಡಿಕೊಳ್ಳುತ್ತಿದೆ. ಶಿಕ್ಷಕ ವೃತ್ತಿಗೆ ಹೋಗುವ ಆಕಾಂಕ್ಷಿಗಳು ಈ ದಿನಕ್ಕಾಗಿ ಕಾಯುತ್ತಿದ್ದಾರೆ.

ಈಗಾಗಲೇ ಆರ್ಥಿಕ ಇಲಾಖೆಗೆ ಈ ಸಂಬಂಧ ಶಿಕ್ಷಣ ಇಲಾಖೆ ಪ್ರಸ್ತಾವನೆಯನ್ನು ನೀಡಿದೆ. ಈ ಪ್ರಸ್ತಾವನೆಗೆ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕ ಕೂಡಲೇ ರಾಜ್ಯ ಸರ್ಕಾರವೂ ಶಿಕ್ಷಕರ ನೇಮಕಾತಿಯ ಪ್ರಕ್ರಿಯೇಗೆ ಅಸ್ತು ಎನ್ನುತ್ತದೆ. ಅದಕ್ಕೂ ಮುನ್ನ ಪ್ರಕ್ರಿಯೆಯ ಕೆಲಸವನ್ನು ಆರಂಭ ಮಾಡಿದೆ.

ಈ ಬಾರಿ ಹಣಕಾಸು ಇಲಾಖೆ ಪ್ರಸ್ತಾವನೆಯನ್ನು ಸ್ವೀಕರಿಸಿದರೆ ಬರೀ ಶಿಕ್ಷಕರಿಗೆ ಮಾತ್ರವಲ್ಲ, ಅತಿಥಿ ಶಿಕ್ಷಕರಿಗೂ ನೇಮಕಾತಿ ಸಿಗಲಿದೆ. ಅದೆಷ್ಟೋ ಜನ ಮಕ್ಕಳಿಗೆ ಶಿಕ್ಷಣ ನೀಡಬೇಕೆಂಬ ಆಸೆ ಹೊತ್ತು, ಶಿಕ್ಷಕ ವೃತ್ತಿಯೇ ಬೇಕೆಂದು ಕಾದು ಕುಳಿತಿದ್ದಾರೆ. ಅಂಥವರಿಗೆ ಇದು ಸಿಹಿ ಸುದ್ದಿಯೇ ಸರಿ. ಆದಷ್ಟು ಬೇಗ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಒಪ್ಪಲಿ ಎಂದೇ ಆಕಾಂಕ್ಷಿಗಳು ಬೇಡಿಕೊಳ್ಳುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!