Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಪ್ರತಿಭಟನೆ : ಮುಖ್ಯಾಂಶಗಳು…!

Facebook
Twitter
Telegram
WhatsApp

 

ನವದೆಹಲಿ, ಫೆಬ್ರವರಿ 07: ಕೇಂದ್ರ ಸರ್ಕಾರ ಮಲತಾಯಿ ಧೋರಣೆಯಿಂದಾಗಿ 2017-18 ರಿಂದ ಕರ್ನಾಟಕಕ್ಕೆ 1,87,867 ಕೋಟಿ ರೂ.ಗಳ ನಷ್ಟವಾಗಿದ್ದು ಇದರಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಅವಕಾಶವನ್ನು ತಪ್ಪಿಸಿದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕರ್ನಾಟಕ ಮತ್ತು ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ಎಸಗಿರುವ ಆರ್ಥಿಕ ದೌರ್ಜನ್ಯದ ಕೇಂದ್ರ ದ ವಿರುದ್ಧ ಜಂತರ್ ಮಂತರ್ ನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು, ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲಿನ ಹಂಚಿಕೆಯಲ್ಲಿ ಇಳಿಕೆ, ಮೂಲಸೌಕರ್ಯ ಬದ್ಧತೆಗಳ ಈಡೇರಿಕೆಯಲ್ಲಿ ಮತ್ತು ಕೇಂದ್ರ ಸರ್ಕಾರದಿಂದ ವಿಪತ್ತು ನಿರ್ವಹಣೆಗೆ ಅನುದಾನ ಬಿಡುಗಡೆಯಲ್ಲಿನ ವಿಳಂಬದ ಕುರಿತು ಸವಿಸ್ತಾರವಾಗಿ ಮಾತನಾಡಿದ ಅವರು, ಇದು ಕನ್ನಡಿಗರ ಅಸ್ಮಿತೆಯ ಮೇಲಾಗುತ್ತಿರುವ ವ್ಯವಸ್ಥಿತ ದಾಳಿ ಎಂದು ವ್ಯಾಖ್ಯಾನಿಸಿದರು. ಕೇಂದ್ರದ ನಿರ್ಲಕ್ಷ್ಯದಿಂದ ಕನ್ನಡಿಗರಿಗೆ ತೊಂದರೆಯುಂಟಾಗುತ್ತಿರುವುದು ಗಾಬರಿ ಹುಟ್ಟಿಸುವಂತಿದೆ. ಕನ್ನಡಿಗರ ಹಿತಾಸಕ್ತಿಯನ್ನು ಕೇಂದ್ರ ಬಿಜೆಪಿ ನಾಯಕರು ದುರ್ಬಲಗೊಳಿಸುತ್ತಿದ್ದಾರೆ. ಸಂವಿಧಾನದೆಡೆಗೆ ಹಾಗೂ ಮತ್ತು ಸಹಕಾರಿ ಒಕ್ಕೂಟದೆಡೆಗೆ ಅವರ ಬದ್ಧತೆ ಇಲ್ಲವಾಗಿದೆ ಎಂದರು.

 

ಕೇಂದ್ರ ತೆರಿಗೆಯಲ್ಲಿ ಕರ್ನಾಟಕ ರಾಜ್ಯದ ಪಾಲಿನಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸುದೀರ್ಘವಾಗಿ ವಿವರಿಸಿದ ಮುಖ್ಯಮಂತ್ರಿಗಳು, 14 ನೇ ಹಣಕಾಸು ಆಯೋಗದಿಂದ 4.71% ರಿಂದ 15 ನೇ ಹಣಕಾಸು ಆಯೋಗದಲ್ಲಿ 3,64% ಗೆ ಇಳಿಕೆಯಾಗಿರುವುದು ಕಳೆದ 5 ವರ್ಷಗಳಲ್ಲಿ ಅಂದಾಜು ರೂ.62,098 ಕೋಟಿಗಳಷ್ಟು ನಷ್ಟವಾಗಲು ಕಾರಣವಾಗಿದೆ. ವರದಾನವೆಂದೇ ಬಣ್ಣಿಸಲಾದ ಜಿ.ಎಸ್.ಟಿ ಅನುಷ್ಠಾನವು ಜೂನ್ 2022 ರಲ್ಲಿ ನಿಲ್ಲಿಸಲಾದ ಪರಿಹಾರದಿಂದಾಗಿ ಶಾಪವಾಗಿ ಪರಿಣಮಿಸಿದೆ. ಈ ಹಠಾತ್ ನಿಲುಗಡೆಯಿಂದ ನಮ್ಮ ಹಣಕಾಸು ಪರಿಸ್ಥಿತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ನಾವು ಹೆಮ್ಮೆಯಿಂದ ನಿರ್ವಹಿಸುತ್ತಿದ್ದ ಶೇ 15% ಬೆಳವಣಿಗೆ ದರವನ್ನು ನಿರ್ವಹಿಸುವುದನ್ನು ಕಷ್ಟಕರವಾಗಿದೆ. ಜಿ.ಎಸ್.ಟಿ ಯ ಅವೈಜ್ಞಾನಿಕ ಅನುಷ್ಠಾನದಿಂದಾಗಿ ಕರ್ನಾಟಕ 59,274 ಕೋಟಿ ರೂ.ಗಳ ನಷ್ಟವನ್ನು ಅನುಭವಿಸಿದೆ ಎಂದರು.

 

ಜಿ.ಎಸ್.ಟಿ ಪರಿಹಾರದ ಕುರಿತು ಮಾಹಿತಿ ಕೋರಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಮೂರು ಪತ್ರಗಳನ್ನು ರಾಜ್ಯ ಸರ್ಕಾರ ಬರೆದಿದೆ. ಆದರೆ ದುರದೃಷ್ಟವಶಾತ್ ಅವರಿಂದ ಯಾವುದೇ ಉತ್ತರ ಬಂದಿಲ್ಲ. ಪ್ರತಿ ವರ್ಷ 4,30,000 ಕೋಟಿ ರೂ.ಗಳ ತೆರಿಗೆ ರಾಜಸ್ವವನ್ನು ಸಂದಾಯ ಮಾಡುತ್ತಿದ್ದರೂ, ಕೇಂದ್ರ ಸರ್ಕಾರದಿಂದ ರೂ. 50,000 ಕೋಟಿ ರೂ.ಗಳನ್ನು ಮಾತ್ರ ಪಡೆಯುತ್ತಿದ್ದೇವೆ ಎಂದರು.

 

ದುರದೃಷ್ಟವಶಾತ್ , ಕರ್ನಾಟಕ ನೀಡುವ ಪ್ರತಿ 100 ರೂ.ಗಳಿಗೆ ಕೇವಲ 12- 13 ರೂ.ಗಳನ್ನು ಮಾತ್ರ ಪಡೆಯುತ್ತಿದೆ.ಈ ಅಸಮಾನ ಹಂಚಿಕೆಯಿಂದಾಗಿ ನಮ್ಮ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳಿಗೆ ನಾವೇ ಅನುದಾನ ಹೊಂದಿಸಿಕೊಳ್ಳಲು ನೇರ ಹೊಡೆತ ಕೊಟ್ಟಂತಾಗಿದೆ ಎಂದರು. ಕೇಂದ್ರ ಸರ್ಕಾರದ ಆಯವ್ಯಯವು ಕಳೆದ 5 ವರ್ಷಗಳಲ್ಲಿ ದುಪ್ಪಟ್ಟಾಗಿದ್ದರೂ ಕರ್ನಾಟಕದ ಹಂಚಿಕೆ ಮಾತ್ರ ಅರ್ಧದಷ್ಟಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ 24, 42,213 ಕೋಟಿ ರೂ.ಗಳಾಗಿದ್ದರೆ , ಕರ್ನಾಟಕಕ್ಕೆ 46,288 ಕೋಟಿ ರೂ.ಗಳ ಒಟ್ಟು ಅನುದಾನ ದೊರಕಿತು. 2023-24 ರಲ್ಲಿ ಕೇಂದ್ರ ಬಜೆಟ್ 45,03,097 ಕೋಟಿಗಳಷ್ಟಾದರೂ ಕರ್ನಾಟಕಕ್ಕೆ ಮಾತ್ರ 50, 257 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ನ್ಯಾಯ ಎಲ್ಲಿದೆ ? ನ್ಯಾಯವಾಗಿ ನಮಗೆ ಒಂದು ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚು ಮೊತ್ತ ಬರಬೇಕಿದ್ದು , ಆದರೆ ಅದರ ಅರ್ಧದಷ್ಟು ಮಾತ್ರ ದೊರೆತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

    ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

error: Content is protected !!