Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನವರಿ 21ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸರ್ವಧರ್ಮೀಯ  ವಧು ವರರ ಸಮಾವೇಶ

Facebook
Twitter
Telegram
WhatsApp

 

 

ಚಿತ್ರದುರ್ಗ, ಜ, 16, ಚಿತ್ರದುರ್ಗದ ಬಸವೇಶ್ವರ ವಧು ವರರ ಮಾಹಿತಿ ಕೇಂದ್ರದ ವತಿಯಿಂದ ರಾಜ್ಯಮಟ್ಟದ ಸರ್ವಧರ್ಮ ವಧು ವರರ ಸಮಾವೇಶವನ್ನು ಇದೇ ತಿಂಗಳ 21ರಂದು  ಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ಕೇಂದ್ರದ ಸಂಚಾಲಕ ಹಾಗೂ ವ್ಯವಸ್ಥಾಪಕರೂ ಆದ ಜೆ.ಎಂ. ಜಂಬಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ತಿಂಗಳ 22ನೇ ತಾರೀಕು ಬೆಳಿಗ್ಗೆ 11ಗಂಟೆಗೆ ಭಾನುವಾರ ಬೆಂಗಳೂರಿನ ಗಾಂಧಿನಗರದ, ಎರಡನೇ ಮುಖ್ಯ ರಸ್ತೆಯಲ್ಲಿರುವ ಮಹಾರಾಷ್ಟ್ರ ಮಂಡಳದ ಸಭಾಂಗಣದಲ್ಲಿ ನಡೆಯಲಿದೆ.  ಸಮಾವೇಶದ ದಿವ್ಯ ಸಾನಿಧ್ಯವನ್ನು ಬೆಂಗಳೂರು ಸರ್ಪ ಭೂಷಣ ಶಿವಯೋಗಿಗಳ ಮಠದ  ಶ್ರೀ ಮಲ್ಲಿಕಾರ್ಜುನ  ಮಸ್ವಾಮಿಗಳವರು ಹಾಗೂ ಬೆಳಗಾವಿ ಜಿಲ್ಲೆ ಶಿರಸಂಗಿ ಮಹಲಿಂಗೇಶ್ವರಮಠದ ಶ್ರೀಬಸವ ಮಹಾಂತ ಮಹಾಸ್ವಾಮಿಗಳು ವಹಿಸಲಿದ್ದಾರೆಂದು ತಿಳಿಸಿದ್ದಾರೆ.

ಈ ಮಾಹಿತಿ ಕೇಂದ್ರವು ಕಳೆದ 1996-97ನೇ ಇಸವಿಯಿಂದ ಪ್ರಾರಂಭಗೊಂಡು ಇಲ್ಲಿಯವರೆಗೂ ಇಂತಹ ಸಮಾವೇಶಗಳನ್ನು ರಾಜ್ಯದ ವಿವಿಧಡೆ ನಡೆಸಿ ಹಲವರಿಗೆ  ಸಹಕಾರಿಯಾಗಿದೆ ಎಂದಿರುವ ಅವರು ಒಂದು ಜಾತಿ,
,ಜನಾಂಗ, ಧರ್ಮದವರಿಗೆ ಮಾತ್ರ  ಸೀಮಿತವಾಗಿರದೆ ಎಲ್ಲರನ್ನೊಳಗೊಂಡ ವಧು ಹಾಗೂ ವರರ, ಪರಸ್ಪರ, ಭೇಟಿ ಚರ್ಚೆ ನಡೆದು ಮುಂದೆ ಒಪ್ಪಿಕೊಂಡು ಕಲ್ಯಾಣ ಮಹೋತ್ಸವಗಳು ನಡೆಯಲು ಒಂದು ವೇದಿಕೆಯಾಗಿದೆ. ಎಷ್ಟೋ ಮದುವೆಗಳು ಈಗಾಗಲೇ ನಡೆದಿವೆ.ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಲು ಮನವಿ ಮಾಡಿದ್ದಾರೆ.

ಹೆಚ್ಚಿನ‌ ಮಾಹಿತಿಗಾಗಿ ಜೆ.ಎಂ.ಜಂಬಯ್ಯ, ಸಂಚಾಲಕರು, ಮೊಬೈಲ್ 9980658625 ಸಂಪರ್ಕಿಸಲು ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!