Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಾಳೆ ರಾಜ್ಯ ಮಟ್ಟದ ಶೋಷಿತರ ಜಾಗೃತಿ ಸಮಾವೇಶ : 5 ಲಕ್ಷ ಜನ ಸೇರುವ ನಿರೀಕ್ಷೆ  : ಕೆ.ಎಂ.ರಾಮಮದ್ರಪ್ಪ ಹೇಳಿಕೆ

---Advertisement---

 

ಸುದ್ದಿಒನ್, ಚಿತ್ರದುರ್ಗ. ಜನವರಿ.27  : ನಾಳೆ ನಡೆಯಲಿರುವ  ಶೋಷಿತ ಸಮುದಾಯಗಳ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರುಗಳು ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಸುಮಾರು 5 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಕೆಎಂ ರಾಮಚಂದ್ರಪ್ಪ ತಿಳಿಸಿದರು.

ನಗರದ ಹೊರವಲಯದ ಸಮಾವೇಶ ನಡೆಯುವ ಸ್ಥಳದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಸಮಾವೇಶದಲ್ಲಿ ಸಿಎಂ ಡಿಸಿಎಂ, ಶೋಷಿತ ಸಮುದಾಯದ ಹಾಲಿ, ಮಾಜಿ ಸಚಿವರು, ಶಾಸಕರು ಸೇರಿದಂತೆ ರಾಜ್ಯದ ಪ್ರತೀ ಮೂಲೆ ಮೂಲೆಗಳಿಂದ ಜನತೆ, 10 ಸಾವಿರಕ್ಕೂ ಹೆಚ್ಚು ವಾಹನಗಳಲ್ಲಿ ಜನ ಬರುವ ನಿರೀಕ್ಷೆ ಇದೆ ಎಂದರು.

ಕಾರ್ಯಕ್ರಮಕ್ಕೆ 5 ಲಕ್ಷ ಜನ ಸೇರುವ ನಿರೀಕ್ಷೆ ಇದ್ದು, 3 ಲಕ್ಷ ಜನತೆಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಸಮಾವೇಶ ವೇದಿಕೆ‌ ಮೇಲೆ 200 ಹೆಚ್ಚು ಆಸನ ವ್ಯವಸ್ಥೆ ಮಾಡಲಾಗಿದ್ದು, 3 ಲಕ್ಷಕ್ಕೂ ಅಧಿಕ ಜನರಿಗೆ ಊಟದ ವ್ಯವಸ್ಥೆ ಮಾಡಿದೆ. ಸಮಾವೇಶಕ್ಕೆ‌ ಬರುವವರಿಗೆ ವೆಜ್ ಮತ್ತು ನಾನ್ ವೆಜ್ ಊಟ ಸಿದ್ದಪಡಿಸಲಾಗುತ್ತಿದೆ.

ಈ ಸಮಾವೇಶದ ತರುವಾಯ ಶೋಷಿತರು ನಿರ್ಣಯ, ಸರಕಾರಕ್ಕೆ ಮನವಿ ಸಲ್ಲಿಸಲಿದ್ದೇವೆ. ಶೋಷಿತ ಸಮುದಾಯದ ಜನರಲ್ಲಿ ಜಾಗೃತಿ ಇಲ್ಲ, ಮೇಲ್ವರ್ಗದ ಜನರ ಗುಲಾಮಗಿರಿಗೆ ಒಳಗಾಗಿದ್ದಾರೆ. ಶೋಷಿತರನ್ನು ಗುಲಾಮಗಿರಿಯಿಂದ ಹೊರತರಬೇಕಾಗಿದೆ ಎಂದರು.

ಎಂಪಿ ಚುನಾವಣೆಗೆ ಪ್ರತಿಕ್ರಿಯೆ : ಲೋಕಸಭಾ ಚುನಾವಣೆ ದೃಷ್ಟಿಯಿಂದ ಈ  ಸಮಾವೇಶ ಆಯೋಜನೆ ಮಾಡಲಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ ಕೆಲವರು ತಾವೇ ಸರಕಾರ ಮಾಡುವುದಾಗಿ ಹೇಳಿದ್ರು, ರಾಜ್ಯದಲ್ಲಿ‌ ನಾವೂ ಇದೀವಿ ಅಂತಾ ಅವರಿಗೆ ತೋರಿಸಬೇಕು.

ಜಾತಿ ಜನಗಣತಿ ವರದಿ‌ ಜಾರಿ ಮುಖ್ಯ ಉದ್ದೇಶ ನಮ್ಮ‌ಜಾತಿ ಸದಸ್ಯರ ಸಂಖ್ಯೆ ನಿಖರವಾಗಿ ಮಮಗೆ ಗೊತ್ತಾಗಬೇಕು. ಹಾಗಾಗಿ ಕಾಂತರಾಜ ವರದಿ ತ್ವರಿತವಾಗಿ ಜಾರಿ ಆಗಬೇಕು ಎಂದರು. ಸಮಾವೇಶ ಮೂಲಕ ಜಾರಿ ಆಗಬೇಕು ಅಂತಾ ಒತ್ತಡ ಹಾಕಲಾಗುವುದು. ದೇಶದಲ್ಲಿ ಸಂಪತ್ತು ಕೆಲವೇ ಕೆಲವು ಮೇಲ್ಜಾತಿಗಳಿಗೆ ಜಾತಿಗೆ ಸೀಮಿತವಾಗಿದೆ. ಕಾಂತರಾಜ್ ವರದಿ ಜಾರಿಯಾದ್ರೆ ಕೆಲವರಿ ಯಾಕೆ ನೋವು…? ಕಾಂತರಾಜ್ ವರದಿ ಜಾರಿ ಆಗಲೇಬೇಕು ಅಂತಾ ಒತ್ತಾಯ ಮಾಡ್ತೀವಿ ಎಂದರು.

ಕೆಲವರು ಕಾಂತರಾಜ್ ವರದಿ ಕಳುವಾಗಿದೆ ಅಂತಿದಾರೆ. ಮಾಜಿ ಸಿಎಂ ಒಬ್ಬರು ಕಳುವಾಗಿದೆ ಅಂತಾ ಹೇಳಿದ್ದಾರೆ. ಆದ್ರೆ ನಮಗೆ ಅವರ ಮೇಲೇ ಸಂಶಯ ಇದೆ. ಎಲ್ಲಾ ಪಕ್ಷಗಳ ನಾಯಕರಿಗೂ ಸಮಾವೇಶಕ್ಕೆ ಆಹ್ವಾನ ಕೊಟ್ಟಿದೀವಿ, ಆದ್ರೆ ಅವರಿಗೆ ಬರೋಕೆ ಭಯ ಇರಬಹುದು
ವಿರೋಧ ಪಕ್ಷದವರೆಲ್ಲ‌ ನಾವೂ ಬೆಂಬಲ ಕೊಡ್ತೀವಿ ಅಂದಿದ್ದಾರೆ. ನಾವು ಯಾವುದೇ ರಾಜಕೀಯ ಪಕ್ಷಗಳಿಗೆ ಅಂಟಿಕೊಂಡಿಲ್ಲ. ಸಂಘಟನೆಗಳಿಂದ ನಾವಿಂದು ಹೋರಾಟ ಮಾಡುತ್ತಿದ್ದೇವೆ ಎಂದರು.

ಚುನಾವಣೆಗೂ ಸಮಾವೇಶಕ್ಕೂ ಯಾವುದೇ ಸಂಬಂಧವಿಲ್ಲ, ಈಗಾಗಲೇ ರಾಜ್ಯಾದ್ಯಂತ ಓಡಾಡಿ ಶೋಷಿತರ ಸಂಘಟನೆ ಬಲಪಡಿಸಿದ್ದೇವೆ, ಸರ್ಕಾರದ ಸಂಪುಟ ಸಹೋದ್ಯೋಗಿಗಳು ವರದಿ ಸ್ವೀಕಾರದ ಬಗ್ಗೆ ನಕಾರ ಮಾಡ್ತಿದ್ದಾರೆ. ಹಾಗಾಗಿ ಅವರಿಗೂ ಚುರುಕು ಮುಟ್ಟಿಸಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಒಂದು ವೇಳೆ ವರದಿ ಸ್ವೀಕಾರಕ್ಕೆ ಇಷ್ಟ ಇರದಿದ್ರೆ ಸಮಾವೇಶದಲ್ಲಿ ಸ್ಪಸ್ಟಪಡಿಸಲಿ ಎಂದು ಆಗ್ರಹಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...