Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿ. 29ಕ್ಕೆ ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಪ್ರಥಮ “ವೈಜ್ಞಾನಿಕ ಸಮ್ಮೇಳನ” : ನಾಗರಾಜ್ ಸಂಗಂ

Facebook
Twitter
Telegram
WhatsApp

ವರದಿ ಮತ್ತು ಫೋಟೋ : ಸುರೇಶ್ ಪಟ್ಟಣ್

ಚಿತ್ರದುರ್ಗ,(ಡಿ.27) : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಡಿ. 29ರಂದು ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ರಾಜ್ಯಮಟ್ಟದ ಪ್ರಥಮ “ವೈಜ್ಞಾನಿಕ ಸಮ್ಮೇಳನ”, ವಿಶ್ವಮಾನವ ದಿನಾಚರಣೆ, ರಾಜ್ಯಮಟ್ಟದ “ಎಚ್.ಎನ್.ಪ್ರಶಸ್ತಿ” ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್‍ನ ಜಿಲ್ಲಾಧ್ಯಕ್ಷರಾದ ನಾಗರಾಜ್ ಸಂಗಂ ತಿಳಿಸಿದ್ದಾರೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಡಿ. 29ರಂದು ಸಮಾಜಮುಖಿ ಚಿಂತಕರ ಜತೆಗೂಡಿ ಆರಂಭಿಸಿದ ಸಂಸ್ಥೆಯು ಒಂದು ವರ್ಷ ಪೂರೈಸುತ್ತಿರುವ ವಿಶೇಷ ಸಂದರ್ಭದಲ್ಲಿ ರಾಜ್ಯಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು, ರಾಜ್ಯಾದ್ಯಂತ ಜಿಲ್ಲಾ ಹಾಗೂ ತಾಲೂಕು ಸಮಿತಿ ಹೊಂದಿರುವ ಪರಿಷತ್‍ನಲ್ಲಿ ಐವತ್ತು ಸಾವಿರಕ್ಕೂ ಹೆಚ್ಚಿನ ಸದಸ್ಯರು ಇದ್ದಾರೆ ಎಂದರು.

ಇದೇ ಮೊದಲ ಬಾರಿಗೆ ರಾಜ್ಯಮಟ್ಟದಲ್ಲಿ “ಹೆಚ್.ಎನ್” ಪ್ರಶಸ್ತಿ ನೀಡಲಾಗುತ್ತಿದೆ. ಚಿತ್ರದುರ್ಗ ಮುರುಘಾಮಠದ ಡಾ. ಶಿವಮೂರ್ತಿ ಶರಣರು ಹಾಗೂ ಮರಣೋತ್ತರವಾಗಿ ಪುನಿತ್ ರಾಜ್‍ಕುಮಾರ್ ಅವರಿಗೆ ನೀಡಲಾಗುತ್ತಿದೆ. ಶೈಕ್ಷಣಿಕ ಜಿಲ್ಲಾವಾರು ಎಚ್.ಎನ್.ಪ್ರಶಸ್ತಿ ನೀಡಲಾಗುತ್ತಿದ್ದು ಚಿತ್ರದುರ್ಗ ಜಿಲ್ಲೆಯಿಂದ ಹೆಚ್.ಎಸ್.ಟಿ.ಸ್ವಾಮಿಯವರಿಗೆ ಪ್ರಧಾನ ಮಾಡಲಾಗುವುದು ಎಂದು ನಾಗರಾಜ್ ಸಂಗಂ ತಿಳಿಸಿದರು.

ಜನಸಾಮಾನ್ಯರಲ್ಲಿ ವ್ಶೆಜ್ಞಾನಿಕ ಹಾಗೂ ವೈಚಾರಿಕ ಚಿಂತನೆಗಳ ಜಾಗೃತಿ ಮೂಡಿಸುವುದು, ಮೌಢ್ಯವನ್ನು ದೂರ ಮಾಡುವುದು, ವಿಜ್ಞಾನ, ಸಾಮಾಜಿಕ, ಸಾಂಸ್ಕøತಿಕ, ಸಾಹಿತ್ಯ ಶಿಕ್ಷಣ ಹೀಗೆ ಹತ್ತು ಹಲವಾರು ಜನಪರ ಕಾರ್ಯಯೋಜನೆಗಳೊಂದಿಗೆ ವಿಶ್ವ ಗಮನ ಸೆಳೆಯುವ “ವಿಜ್ಞಾನ ಗ್ರಾಮ” ನಿರ್ಮಾಣ ಮಾಡುವ ಕನಸು ಹೊತ್ತ ಸಂಸ್ಥೆಗೆ ಅನೇಕರು ಕೈ ಜೋಡಿಸಿದ್ದಾರೆ. ರಾಜ್ಯ ಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನ ಶಿವಮೊಗ್ಗ ಜಿಲ್ಲೆಯಿಂದ ಆರಂಭವಾಗುತ್ತಿರುವುದು ವಿಶೇಷ ಎಂದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ದೊಡ್ಡಣ್ಣ, ಸಮಾಜ ಸೇವಕ ಡಾ. ಶ್ರೀಧರ್ ಕುಮಾರ್ ತಿಪಟೂರು, ಪದ್ಮನಾಭ ಗೌಡ ಬೆಂಗಳೂರು, ಜಿ.ಡಿ.ನಂದಿನಿ ಮೋಹನ್‍ಕುಮಾರ್ ತುಮಕೂರು, ವೈದ್ಯ ಡಾ. ಟಿ.ಹೆಚ್.ಆಂಜನಪ್ಪ ಬೆಂಗಳೂರು, ತುಮಕೂರಿನ ದಿಲೀಪ್ ಕುಮಾರ್ ಅವರಿಗೆ “ರಾಜ್ಯ ಮಟ್ಟದ ಸಾಧನಾ ಪ್ರಶಸ್ತಿ” ನೀಡಿ ಗೌರವಿಸಲಾಗುವುದು.

ಸಿಎಂ ಉದ್ಘಾಟನೆ: ಡಿ. 29ರ ಬೆಳಗ್ಗೆ 10ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮೇಳನ ಉದ್ಘಾಟಿಸುವರು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ್ ದಾಸ್ ಆಶಯ ನುಡಿಗಳನ್ನಾಡುವರು. ಇಸ್ರೋ ಮಾಜಿ ಅಧ್ಯಕ್ಷ, ವಿಜ್ಞಾನಿ ಡಾ. ಎ.ಎಸ್.ಕಿರಣ್ ಕುಮಾರ್ ಸಮ್ಮೇಳನದ ಸರ್ವಾಧ್ಯಕ್ಷರ ನುಡಿಗಳನ್ನಾಡುವರು. ಬೆಕ್ಕಿನ ಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಜ್ಞಾನ ಸಿರಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಂಸ್ಥೆಯ ಸದಸ್ಯತ್ವ ಅಪ್ಲಿಕೇಷನ್ ಬಿಡುಗಡೆ ಮಾಡುವರು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು 2022ರ ದಿನಚರಿ ಬಿಡುಗಡೆಗೊಳಿಸುವರು. ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಅವರು ವಿಜ್ಞಾನ ಗ್ರಾಮಕ್ಕೆ ಚಾಲನೆ ನೀಡುವರು. ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಪರಿಷತ್‍ನ ವೆಬ್‍ಸೈಟ್ ಲೋಕಾರ್ಪಣೆಗೊಳಿಸಲಿದ್ದಾರೆ ಎಂದರು.

ರಾಜ್ಯ ಮಟ್ಟದ ವಿಚಾರಗೋಷ್ಠಿ: ಮಧ್ಯಾಹ್ನ 2ಕ್ಕೆ ವಿಶ್ವ ಕವಿ ಕುವೆಂಪು ಹಾಗೂ ಎಚ್.ನರಸಿಂಹಯ್ಯ ಅವರ ಕುರಿತ ರಾಜ್ಯಮಟ್ಟದ ವಿಚಾರಗೋಷ್ಠಿ ಆಯೋಜಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಉದ್ಘಾಟಿಸುವರು. ನೆಲದ ಕವಿ ಕುವೆಂಪು ಹಾಗೂ ಎಚ್.ಎನ್ ಕುರಿತು ಸಾಹಿತಿ ಡಾ. ಕುಂ.ವೀರಭದ್ರಪ್ಪ ಮಾತನಾಡುವರು. ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ ಅಧ್ಯಕ್ಷತೆ ಸಹಿಸುವರು. ಸಂಜೆ 4ಕ್ಕೆ ರಾಜ್ಯ ಮಟ್ಟದ ಮಹಾ ಅಧಿವೇಶನ ನಡೆಯಲಿದೆ.

ರಾಜ್ಯಮಟ್ಟದ ಪ್ರಥಮ “ವೈಜ್ಞಾನಿಕ ಸಮ್ಮೇಳನ”ದ ಸಮಾರೋಪ ಸಮಾರಂಭ ಡಿ. 29ರ ಸಂಜೆ 5ಕ್ಕೆ ನಡೆಯಲಿದೆ. ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾಶರಣರು ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನಿಲ್‍ಕುಮಾರ್ ಅವರು ರಾಜ್ಯಮಟ್ಟದ “ಎಚ್.ಎನ್” ಪ್ರಶಸ್ತಿ ಪ್ರದಾನ ಮಾಡುವರು. ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಸಮಾರೋಪ ನುಡಿಗಳನ್ನಾಡುವರು.

ಸಂಜೆ 6ಕ್ಕೆ ಹರಟೆ ಖ್ಯಾತಿ ಇಂದುಮತಿ ಸಾಲಿಮಠ ಅವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ಆಯೋಜಿಸಿದೆ. ಡಿ. 29ರ ಬೆಳಗ್ಗೆ ಕುಪ್ಪಳ್ಳಿಯಲ್ಲಿ ಕುವೆಂಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ರಾಮಾಯಣ ದರ್ಶನಂ ಕೃತಿಯೊಂದಿಗೆ ವ್ಶೆಜ್ಞಾನಿಕ ಜಾತಾ ಆಗಮಿಸಲಿದೆ.

ಗೋಷ್ಟಿಯಲ್ಲಿ ಉಪಾಧ್ಯಕ್ಷರಾದ ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶೀ ಲೋಕೇಶ್, ಸಂಘಟನಾ ಕಾರ್ಯದರ್ಶೀ ರಂಗಪ್ಪ, ಪದಾಧಿಕಾರಿಗಳಾದ ಲವಕುಮಾರ್, ಹಾಲ ಸಿದ್ದಪ್ಪ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!