ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ.09 : ಹೊಸದುರ್ಗದಲ್ಲಿ ಕಳೆದ 7 ರಂದು ನಡೆದ ಸಾಯಿ ಕಪ್ ಜ-2024 ರಾಜ್ಯ ಮಟ್ಟದ ಟೇಕ್ವಾಂಡೋ ಚಾಂಪಿಯನ್ಶಿಪ್ ಪಂದ್ಯಾವಳಿಯಲ್ಲಿ ನಾಲ್ವರು ಪದಕಗಳನ್ನು ಗಳಿಸಿದ್ದಾರೆ.
ಬಿಜೆಪಿ. ಜಿಲ್ಲಾಧ್ಯಕ್ಷ ಎ.ಮುರಳಿರವರ ಪುತ್ರ ಎಂ.ಧನುಶ್ ಚಿನ್ನದ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಪ್ರಣೀಲ್ ಜಿ. ಚಿನ್ನದ ಪದಕ, ದೀಪಾಲಿ ಬೆಳ್ಳಿ ಪದಕ ಹಾಗೂ ಮೋಹಿತ್ ಆರ್. ಕಂಚಿನ ಪದಕ ಗಳಿಸಿದ್ದಾರೆ. ಕೊರಿಯಾ ದೇಶದ ಆತ್ಮರಕ್ಷಣೆ ಕಲೆಯಾಗಿರುವ ಟೇಕ್ವಾಂಡೋದಲ್ಲಿ ಕಾಲು ಮತ್ತು ಕೈಚಳಕ ಹಾಗೂ ನಿರಾಯುಧದಿಂದ ಎದುರಾಳಿಯನ್ನು ಸಮರ್ಥವಾಗಿ ಮಣಿಸಬಹುದು.
ಶಿಸ್ತುಬದ್ದವಾದ ಟೇಕ್ವಾಂಡೋದಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಗಳಿಸಿರುವ ಸ್ಪರ್ಧಾಳುಗಳು ಪೋಷಕರು ಹಾಗೂ ಚಿತ್ರದುರ್ಗ ಜಿಲ್ಲಾ ಟೇಕ್ವಾಂಡೋ ಅಮೆಚೂರ್ ಸೆಂಟರ್ಗೆ ಕೀರ್ತಿ ತಂದಿದ್ದಾರೆ.
ಟೇಕ್ವಾಂಡೋ ಮುಖ್ಯ ತರಬೇತುದಾರ ಫಸ್ಟ್ ಡಾನ್ ಬ್ಲಾಕ್ ಬೆಲ್ಟ್ ಕೆ.ರಂಗನಾಥ್ ಸಂಸ್ಥೆಗೆ ಕೀರ್ತಿ ತಂದಿರುವ ಸ್ಪರ್ಧಾಳುಗಳನ್ನು ಅಭಿನಂದಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…