ಚಿತ್ರದುರ್ಗದಲ್ಲಿ ಡಿ. 17 ರಿಂದ 21ರವರೆಗೆ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಹೊನಲು-ಬೆಳಕಿನ ಕ್ರಿಕೆಟ್ ಟೂರ್ನಮೆಂಟ್

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಡಿ. 16 : ದುರ್ಗಾ ಇಲೆವೆನ್ ಕ್ರಿಕೇಟರ್ಸ್‍ವತಿಯಿಂದ 4ನೇ ಬಾರಿಗೆ ರಾಜ ವೀರ ಮದಕರಿ ನಾಯಕ ಕಪ್ 2025 ಲೀಗ್ ಕಮ್ ನಾಕೌಟ್ ಪಂದ್ಯಾವಳಿಯೂ ನಗರದ ಹಳೇ ಮಾದ್ಯಮಿಕ ಶಾಲಾ ಅವರಣದಲ್ಲಿ ಡಿ. 17 ರಿಂದ 21ರವರೆಗೆ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಹೊನಲು-ಬೆಳಕಿನ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ ಎಂದು ಕಾರ್ಯಕ್ರಮದ ಸಂಯೋಜಕರಾದ ಸಿ.ಬಿ.ನಾಗರಾಜ್ ತಿಳಿಸಿದ್ದಾರೆ.

ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಮಂಗಳವಾರ ಸಂಜೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಸ್ನೇಹಜೀವಿ ಬಳಗದವತಿಯಿಂದ ಇದು ನಾಲ್ಕನೇ ಬಾರಿ ಟೂರ್ನಮೆಂಟ್ ನಡೆಯುತ್ತಿದ್ದು, ಇದರಲ್ಲಿ ಪ್ರಥಮ ಬಹುಮಾನ 2,00,001 ರೂ, ದ್ವೀತೀಯ ಬಹುಮಾನ 1,00,001 ರೂ. ಹಾಗೂ ತೃತೀಯ ಬಹುಮಾನ 50,001 ರೂ ಹಾಗೂ ಆಕರ್ಷಕ ಟ್ರೋಫಿಯನ್ನು ನೀಡಲಾಗುವುದು, ಇದ್ದಲ್ಲದೆ ಉತ್ತಮ ಬ್ಯಾಟ್ಸ್‍ಮನ್ ಹಾಗೂ ಬೌಲರ್‍ಗೆ ಟ್ರೋಫಿಯನ್ನು ನೀಡಲಾಗುವುದು, ಸರಣಿ ಶ್ರೇಷ್ಠ ಪಡೆದವರಿಗೆ ಎಲ್‍ಇಡಿ ಟಿ.ವಿ.ಯನ್ನು ನೀಡಲಾಗುವುದು ಎಂದರು.

 

ಇದು ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಆಗಿದ್ದು ರಾಜ್ಯದ ವಿವಿಧೆಡೆಗಳಿಂದ 43 ತಂಡಗಳು ಭಾಗವಹಿಸಲಿದ್ದು, 5 ದಿನಗಳಲ್ಲಿ ಇವುಗಳು 115 ಮ್ಯಾಚ್‍ಗಳನ್ನು ಆಡಲಿದ್ದಾರೆ. ಹೂರ ಜಿಲ್ಲೆಗಳಿಂದ 17 ತಂಡ ಹಾಗೂ ಚಿತ್ರದುರ್ಗ ಜಿಲ್ಲೆಯಿಂದ 26 ತಂಡಗಳು ಭಾಗವಹಿಸಲಿವೆ, ಕ್ರೀಡಾಪಟುಗಳಿಗೆ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಡಿ.17ರ ಬೆಳಿಗ್ಗೆ 8 ಗಂಟೆಗೆ ಡಾ. ಬಸವಕುಮಾರ್ ಶ್ರೀಗಳು ಪಂದ್ಯಾವಳಿಯನ್ನು ಉದ್ಘಾಟನೆಯನ್ನು ಮಾಡಲಿದ್ದಾರೆ ಎಂದರು.

ಗೋಷ್ಟಿಯಲ್ಲಿ ಗೋಪಾಲಸ್ವಾಮಿ ನಾಯಕ್, ರಾಜೀವ, ನಾಗರಾಜ್, ಹನೀಫ್, ರಾಮು, ಅರ್ಜುನ್, ಕೃಪಾಕರ, ಲಕ್ಷ್ಮೀಕಾಂತ, ಬಾಬು ಎನ್.ಕೆ.ಗಾಂಧಿ ಭಾಗವಹಿಸಿದ್ದರು.

Share This Article