Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಗೆ ನಾಳೆಯಿಂದ ಮೂರು ದಿನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

---Advertisement---

 

ದಾವಣಗೆರೆ ಏ.14  ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಏಪ್ರಿಲ್ 15, 16 ಮತ್ತು 17 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳುವರು.

ಏಪ್ರಿಲ್ 14 ರಂದು ರಾತ್ರಿ 8.30 ಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಏಪ್ರಿಲ್ 15 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಯದೇವ ವೃತ್ತದ ಬಳಿ ಬ್ರಾಹ್ಮಣ ಹಾಸ್ಟೆಲ್ ಮುಂಭಾಗದಲ್ಲಿ ದಲಿತ ಸಂರಕ್ಷಣಾ ಸಮಿತಿಯಿಂದ ಹಮ್ಮಿಕೊಂಡಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮಲ್ಲಿ ಭಾಗವಹಿಸುವರು. ಮ.1.30 ಕ್ಕೆ ಆವರಗೊಳ್ಳ ಗ್ರಾಮ ವ್ಯಾಪ್ತಿಯ ಕೇಂದ್ರೀಯ ವಿದ್ಯಾಲಯ ಹಿಂಭಾಗದಲ್ಲಿ ವಾಸಿಸುತ್ತಿರುವ ಕುಟುಂಬಗಳ ಸ್ಥಳಕ್ಕೆ ಭೇಟಿ ನೀಡುವರು. ನಂತರ ಸಂಜೆ 5 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಮಹಿಳಾ ವಸತಿ ನಿಲಯಕ್ಕೆ ಭೇಟಿ ನೀಡಿ ವಾಸ್ತವ್ಯ ಮಾಡುವರು.

 

ಏಪ್ರಿಲ್ 16 ರಂದು ಬೆಳಿಗ್ಗೆ 10.30ಕ್ಕೆ ಜಗಳೂರು ತಾಲ್ಲೂಕು ಆಸ್ಪತ್ರೆ ಹಾಗೂ ತಾಲ್ಲೂಕು ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 12 ಗಂಟೆಗೆ ಜಗಳೂರು ತಾಲ್ಲೂಕಿನ ಹನುಮಂತಪುರ ಗೊಲ್ಲರಹಟ್ಟಿ ಗ್ರಾಮಕ್ಕೆ ಭೇಟಿ ನೀಡುವರು. ನಂತರ ಮ.3 ರಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆಗೆ ಸಂಬಂಧಿಸಿದಂತೆ ಜಾರಿಯಾದ ಪ್ರಕರಣ, ಅಂಕಿಅಂಶಗಳ ಚರ್ಚೆ, ಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯ ಹಾಗೂ ಆಂತರಿಕ ದೂರು ಸಮಿತಿ ಬಗ್ಗೆ ಪರಿಶೀಲನೆ, ಮಹಿಳಾ ದೌರ್ಜನ್ಯ ಪ್ರಕರಣಗಳ ಬಗ್ಗೆ ಚರ್ಚೆ, ಮಹಿಳಾ ಮೀಸಲು, ಕಾಲೇಜು ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಜಿಲ್ಲಾಡಳಿತ ಕೈಗೊಂಡ ಕ್ರಮದ ಬಗ್ಗೆ ಚರ್ಚಿಸುವರು. ನಂತರ 4 ಗಂಟೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸಂಜೆ 6 ಗಂಟೆಗೆ ದಾವಣಗೆರೆಯಲ್ಲಿ ಬಾಲಕಿಯರ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಭೇಟಿ ನೀಡಿ ವಾಸ್ತವ್ಯ ಹೂಡುವರು.
ಏಪ್ರಿಲ್ 17 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿಗೆ ಪ್ರಯಾಣಿಸುವರು.

ಅಹವಾಲು ಸ್ವೀಕಾರ :
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿಚೌಧರಿ ಅವರು ಏಪ್ರಿಲ್ 16 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಎಸ್‍ಹೆಚ್‍ಡಬ್ಲ್ಯೂ ಜಿಲ್ಲೆಯಲ್ಲಿ ಜಾರಿಯಾದ ಬಗ್ಗೆ ಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯ ಹಾಗೂ ಅಂತರಿಕ ದೂರು ಸಮಿತಿ, ಮಹಿಳಾ ದೌರ್ಜನ್ಯ ಪ್ರಕರಣ, ಮಹಿಳಾ ಮೀಸಲಾತಿ, ಕಾಲೇಜು ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸುರಕ್ಷತೆಯ ಕುರಿತಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment