ಚಿತ್ರದುರ್ಗ. ಜೂನ್. 29: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌಧರಿ ಅವರು ಇದೇ ಜೂನ್ 30ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಜೂನ್ 30ರಂದು ಬೆಳಿಗ್ಗೆ 8ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 11ಕ್ಕೆ ಹಿರಿಯೂರಿಗೆ ಆಗಮಿಸಿ, ಹಿರಿಯೂರಿನ ದೇವಗಿರಿ ನಗರದ ವಾಣಿ ವಿಲಾಸ ಕಾಲೇಜು ಹತ್ತಿರದ ಗಣಿ ಟ್ರಸ್ಟ್ ನೂತನ ಕಚೇರಿ ಮತ್ತು ಗ್ರಂಥಾಲಯದ ಉದ್ಘಾಟನೆ ಹಾಗೂ ಕಾಡುಗೊಲ್ಲ ಬುಡಕಟ್ಟು ಮಹಿಳಾ ಜಾಗೃತಿ ಕಾರ್ಯಕ್ರಮ ಉದ್ಘಾಟಿಸುವರು. ನಂತರ ಮಧ್ಯಾಹ್ನ 2ಕ್ಕೆ ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡುವರು. ಸಂಜೆ 4ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

