ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು : ವಿಧಾನಸಭೆಯಲ್ಲೂ ಅಶ್ವತ್ಥ್ ನಾರಾಯಣ್ ಹೇಳಿಕೆ ಪ್ರತಿಧ್ವನಿಸಿದೆ. ಇಂದಿನ ಸದನದಲ್ಲಿ ಕಾಂಗ್ರೆಸ್ ನಾಯಕರು ಈ ವಿಚಾರಕ್ಕೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸದನದಲ್ಲಿಯೇ ಅಶ್ವತ್ಥ್ ನಾರಾಯಣ್ ಈ ಬಗ್ಗೆ ಮಾತನಾಡಿದ್ದಾರೆ. ನಾನು ಸಿದ್ದರಾಮಯ್ಯ ಅವರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ಆಡು ಭಾಷೆಯಲ್ಲಿ ಮಾತನಾಡಿದ್ದೇನೆ ಎಂದು ಸದನದಲ್ಲಿ ತಮ್ಮ ಮಾತಿಗೆ ಸಮರ್ಥನೆ ಮಾಡಿಕೊಂಡ ಅಶ್ವತ್ಥ್ ನಾರಾಯಣ್ ಅವರ ಮಾತಿಗೆ ಕೆಂಡಾಮಂಡಲರಾದ ಕಾಂಗ್ರೆಸ್ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ಮಾಡಿದ್ದಾರೆ.
ಈ ವೇಳೆ ಸ್ಪೀಕರ್ ಕೆಂಡಾಮಂಡಲರಾಗಿದ್ದಾರೆ. ನಾನು ಈಗ ಅಧಿಕಾರವನ್ನು ಚಲಾಯಿಸಿ, ನಿಮ್ಮನ್ನು ಸದನದಿಂದ ಹೊರಗೆ ಕಳುಹಿಸಬೇಕಾಗುತ್ತದೆ ಎಂದು ಸ್ಪೀಕರ್ ಹೇಳಿದ್ದಾರೆ. ಆದರೂ ಕಾಂಗ್ರೆಸ್ ನಾಯಕರು ಸ್ಪೀಕರ್ ಮಾತನ್ನು ಕೇಳುವುದಕ್ಕೆ ಹೋಗಿಲ್ಲ.
ಸ್ಪೀಕರ್ ಮಾತಿಗೆ ಸಿಟ್ಟಿಗೆದ್ದು ಸದನದ ಬಾವಿಗಿಳಿದ ಈಶ್ವರ್ ಖಂಡ್ರೆ ಮತ್ತು ಕಾಂಗ್ರೆಸ್ ನಾಯಕರು ಬೆಂಚು ಬಡಿದು ವಿರೋಧ ವ್ಯಕ್ತಪಡಿಸಿದ್ದಾರೆ. ಇಡೀ ಸದನದಲ್ಲಿ ಅಶ್ವತ್ಥ್ ನಾರಾಯಣ್ ಹೇಳಿದ ಹೇಳಿಕೆಯೇ ಸದ್ದು ಮಾಡಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್