Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸದನದಲ್ಲೂ ಸದ್ದು ಮಾಡಿದೆ ‘ಹೊಡೆದು ಹಾಕಿ’ ಹೇಳಿಕೆ : ಅಶ್ವತ್ಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ನಾಯಕರ ಆಕ್ರೋಶ..!

Facebook
Twitter
Telegram
WhatsApp

 

ಬೆಂಗಳೂರು : ವಿಧಾನಸಭೆಯಲ್ಲೂ ಅಶ್ವತ್ಥ್ ನಾರಾಯಣ್ ಹೇಳಿಕೆ ಪ್ರತಿಧ್ವನಿಸಿದೆ. ಇಂದಿನ ಸದನದಲ್ಲಿ ಕಾಂಗ್ರೆಸ್‌ ನಾಯಕರು ಈ ವಿಚಾರಕ್ಕೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸದನದಲ್ಲಿಯೇ ಅಶ್ವತ್ಥ್ ನಾರಾಯಣ್ ಈ ಬಗ್ಗೆ ಮಾತನಾಡಿದ್ದಾರೆ. ನಾನು ಸಿದ್ದರಾಮಯ್ಯ ಅವರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ಆಡು ಭಾಷೆಯಲ್ಲಿ ಮಾತನಾಡಿದ್ದೇನೆ ಎಂದು ಸದನದಲ್ಲಿ ತಮ್ಮ ಮಾತಿಗೆ ಸಮರ್ಥನೆ ಮಾಡಿಕೊಂಡ ಅಶ್ವತ್ಥ್ ನಾರಾಯಣ್ ಅವರ ಮಾತಿಗೆ ಕೆಂಡಾಮಂಡಲರಾದ ಕಾಂಗ್ರೆಸ್ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ಮಾಡಿದ್ದಾರೆ.

ಈ ವೇಳೆ ಸ್ಪೀಕರ್ ಕೆಂಡಾಮಂಡಲರಾಗಿದ್ದಾರೆ. ನಾನು ಈಗ ಅಧಿಕಾರವನ್ನು ಚಲಾಯಿಸಿ, ನಿಮ್ಮನ್ನು ಸದನದಿಂದ ಹೊರಗೆ ಕಳುಹಿಸಬೇಕಾಗುತ್ತದೆ ಎಂದು ಸ್ಪೀಕರ್ ಹೇಳಿದ್ದಾರೆ. ಆದರೂ ಕಾಂಗ್ರೆಸ್ ನಾಯಕರು ಸ್ಪೀಕರ್ ಮಾತನ್ನು ಕೇಳುವುದಕ್ಕೆ ಹೋಗಿಲ್ಲ.

ಸ್ಪೀಕರ್ ಮಾತಿಗೆ ಸಿಟ್ಟಿಗೆದ್ದು ಸದನದ ಬಾವಿಗಿಳಿದ ಈಶ್ವರ್ ಖಂಡ್ರೆ ಮತ್ತು ಕಾಂಗ್ರೆಸ್ ನಾಯಕರು ಬೆಂಚು ಬಡಿದು ವಿರೋಧ ವ್ಯಕ್ತಪಡಿಸಿದ್ದಾರೆ. ಇಡೀ ಸದನದಲ್ಲಿ ಅಶ್ವತ್ಥ್ ನಾರಾಯಣ್ ಹೇಳಿದ ಹೇಳಿಕೆಯೇ ಸದ್ದು ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!