ಬೆಂಗಳೂರು: ರಾಜ್ಯಾದ್ಯಂತ ಇಂದು ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರು ನಗರವೊಂದರಲ್ಲಿಯೇ 11 ಕಡೆ ಹಾಗೂ ಚಿತ್ರದುರ್ಗ ಹಾಸನ, ರಾಯಚೂರು, ಕಲಬುರಗಿ, ಬೆಳಗಾವಿಯಲ್ಲೂ ದಾಳಿ ನಡೆದಿದೆ.
ಬೆಂಗಳೂರಿನಲ್ಲಿ ಕಾರ್ಮಿಕ ಇಲಾಖೆ ಡೆಪ್ಯೂಟಿ ಡೈರೆಕ್ಟರ್ ಶ್ರೀನಿವಾಸ್ ಮನೆ ಮೇಲೆ, ಅಸಿಸ್ಟೆಂಟ್ ರೆವಿನ್ಯೂ ಆಫೀಸರ್ ಚಂದ್ರಪ್ಪ ಬೀರಜ್ಜನವರ್ ಮನೆ ಮೇಲೆ ಹಾಗೂ ಚಂದ್ರಪ್ಪಗೆ ಸೇರಿದ ಬಿಬಿಎಂಪಿ ವಾರ್ಡ್ ಆರ್ ಆರ್ ನಗರದ ಆರ್ ಟಿ ಒ ಮನೆ ಮೇಲೆ, ಕೆ ಆರ್ ಪುರಂನಲ್ಲಿರುವ ಆರ್ ಟಿ ಒ ಮನೆ ಮೇಲೂ ದಾಳಿಯಾಗಿದೆ.
ಹಾಸನದ ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ ಮನೆ ಮೇಲೂ ದಾಳಿಯಾಗಿದೆ. ಹಾಸನದ ಹೊರವಲಯದಲ್ಲಿರುವ ಬೊಮ್ಮನಾಯಕನಹಳ್ಳಿ ನಾರಾಯಣ ನಿವಾಸ ಹಾಗೂ ಗೋರೂರಿನಲ್ಲಿರುವ ಕಚೇರಿ ಮೇಲೂ ದಾಳಿಯಾಗಿದೆ. ರಾಯಚೂರಿನ ನಿರ್ಮಿತಿ ಕೇಂದ್ರ, ಕ್ಯಾಷೋಟೆಕ್ ಯೋಜನಾ ನಿರ್ದೇಶಕನ ಮನೆ ಮೇಲೆ ದಾಳಿಯಾಗಿದೆ. ಶರಣಬಸವ ಪಟ್ಟೇದ್ ದಾಳಿಗೊಳಗಾದ ಅಧಿಕಾರಿ. ರಾಯಚೂರು ಲೋಕಾಯುಕ್ತ ಎಸ್ಪಿ ಡಾ. ರಾಮ್. ಎಲ್. ಅರಸಿದ್ದಿ ನೇತೃತ್ವದಲ್ಲಿ ದಾಳಿಯಾಗಿದೆ.
ಕಲಬುರಗಿಯಲ್ಲಿ ಎರಡು ಕಡೆ ಲೋಕಾಯುಕ್ತ ದಾಳಿಯಾಗಿದೆ. ಬೀದರ್ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಹಾಗೂ ದೇವದುರ್ಗದ KBJNL ಇಇ ತಿಪ್ಪಣ್ಣ ಅನ್ನದಾನಿ ಮನೆ ಮೇಲೂ ದಾಳಿಯಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












