Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರಿನ ಐಮಂಗಲ ಹೋಬಳಿಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಕ್ರಮ : ಸಚಿವ ಡಿ ಸುಧಾಕರ್

---Advertisement---

ಸುದ್ದಿಒನ್, ಹಿರಿಯೂರು, ಜುಲೈ. 19 : ತಾಲ್ಲೂಕಿನ ಐಮಂಗಲ ಹೋಬಳಿಯ ಗೋಕಟ್ಟೆಗಳು ಹಾಗೂ 61ಕೆರೆಗಳು ಒಳಗೊಂಡಂತೆ ಧರ್ಮಪುರ ಹೋಬಳಿಯ 4 ಕೆರೆಗಳು ಸೇರಿದಂತೆ ಒಟ್ಟು 65 ಕೆರೆಗಳಿಗೆ ನೀರು ತುಂಬಿಸುವ ಜೊತೆಗೆ 37644 ಹೆಕ್ಟೇರ್ ಪ್ರದೇಶಕ್ಕೆ ಹನಿ ನೀರಾವರಿ ಮೂಲಕ ನೀರು ಉಣಿಸುವ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಸಿರು ನಿಶಾನೆ ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ತಿಳಿಸಿದರು.

ನಗರದ ನಗರಸಭೆ ಕಾರ್ಯಾಲಯ ಸಭಾಂಗಣದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಮಾಹಿತಿ ನೀಡಿದರು.

ಈ ಕಾಮಗಾರಿಯ ಶೇಕಡಾ 90% ಕೆಲಸ ಮುಕ್ತಾಯ ಹಂತ ತಲುಪಿದೆ. ಕಾಮಗಾರಿ ಅನುಷ್ಠಾನ ಹಂತದಲ್ಲಿ ಗ್ರಾಮಿಟಿ ಮುಖಾಂತರ ನೀರು ಹರಿಸಲು ಸಾಧ್ಯವಿರುವ ಹಾಗೂ ಮೂಲ ಡಿಪಿಆರ್ ನಲ್ಲಿ ಕೈಬಿಟ್ಟ ಐಮಂಗಲ ಹೋಬಳಿಯ 49 ಕೆರೆಗಳು ಹಾಗು ಗೋಕಟ್ಟೆಗಳನ್ನು ಸೇರ್ಪಡೆಗೊಳಿಸಿ ಒಟ್ಟಾರೆಯಾಗಿ ನೀರು ತುಂಬಿಸುವ ಯೋಜನೆಗೆ ಕ್ರಮ ಕೈಗೊಳ್ಳಲಾಗಿದ್ದು, ಐಮಂಗಲ ಹೋಬಳಿಯ ಚಿಕ್ಕಸಿದ್ದವ್ವನಹಳ್ಳಿ ಕೆರೆಗೆ ನೀರು ತುಂಬಿಸುವ ಯೋಜನೆಯಲ್ಲಿ ಗ್ರಾಮಿಟಿ ಮುಖಾಂತರ ತುಂಬಿಸಲು ಸಾಧ್ಯವಿಲ್ಲದ ಕಾರಣದಿಂದ ಈ ಕೆರೆಯನ್ನು ಈ ಟೆಂಡರ್ ಕಾಮಗಾರಿ ಕೆಲಸದಲ್ಲಿ ಸೇರ್ಪಡೆಗೊಳಿಸುವ ಸಂಬಂಧ ಈಗಾಗಲೇ ವಿಶ್ವೇಶ್ವರ ಜಲ ನಿಗಮದ ಅಧಿಕಾರಿಗಳು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಲಾಗಿದ್ದು ಕಾಮಗಾರಿ ಅನುಷ್ಠಾನ ವೇಳೆ ಯಾವುದಾದರು ಮೂಲದಲ್ಲಿ ಸೇರ್ಪಡೆಗೊಳಿಸಿ ಕಾಮಗಾರಿ ಅನುಷ್ಠಾನಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ವಿವರಿಸಿದರು.

ವಿಶ್ವೇಶ್ವರ ಜಲ ನಿಗಮ ಮುಖಾಂತರ 4 ಪ್ಯಾಕೇಜ್ ಗಳಲ್ಲಿ ಹಿರಿಯೂರು ತಾಲೂಕು ವ್ಯಾಪ್ತಿಗೆ 1421 ಕೋಟಿಗಳ ಟೆಂಡರ್ ಕರೆಯಲಾಗಿದೆ. ಹಿರಿಯೂರು ಕ್ಷೇತ್ರಕ್ಕೆ ಕಳೆದ ಎರಡೂವರೆ ವರ್ಷಗಳಲ್ಲಿ 1400ಕೋಟಿ ರೂಪಾಯಿ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಇದೇ ತಿಂಗಳ ಕೊನೆ ವಾರದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಚಿತ್ರದುರ್ಗ ನಗರಕ್ಕೆ ಭೇಟಿ ನೀಡಲಿದ್ದು, ಅಂದು ಭದ್ರಾ ಕಾಮಗಾರಿ ವೀಕ್ಷಣೆ ಮಾಡಲಿದ್ದಾರೆ ಎಂದು ಸಚಿವರು ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...