ದಾವಣಗೆರೆ ಬಳಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ..!

suddionenews
1 Min Read

 

ದಾವಣಗೆರೆ: ಇತ್ತಿಚೆಗಷ್ಟೇ ಬೆಂಗಳೂರು – ಧಾರವಾಡ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ‌ ನೀಡಿದ್ದರು. ಆದರೆ ಈಗ ಆ ರೈಲಿಗೆ ದಾವಣಗೆರೆ ಬಳಿ ಕಲ್ಲು ತೂರಿದ್ದಾರೆ. ಹರಿಹರ ರಸ್ತೆಯಲ್ಲಿರುವ ಜೆಎಂಐಟಿ ಕಾಲೇಜಿನ ಹಿಂಭಾಗದಲ್ಲಿ ಕಲ್ಲು ತೂರಾಟ ಮಾಡಿದ್ದಾರೆ.

ಚಲಿಸುತ್ತಿದ್ದ ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರ ಪರಿಣಾಮ ಕಿಟಕಿಯ ಗಾಜುಗಳು ಪುಡಿಪುಡಿಯಾಗಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ನೈರುತ್ಯ ರೈಲ್ವೇ ಅಧಿಕಾರಿಗಳು ಈ ಘಟನೆಯ ವರದಿಯನ್ನು ಆರ್ಪಿಎಫ್ ಸಿಬ್ಬಂದಿಗೆ ನೀಡಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಅಪರಿಚಿತರ ಬಗ್ಗೆ ದೂರು ದಾಖಲಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಸಿ4 ಕೋಚ್ ಗೆ ಮಾತ್ರ ಹಾನಿಯಾಗಿದೆ. ಬೆಂಗಳೂರಿನಿಂದ ಧಾರವಾಡಕ್ಕೆ ರೈಲು ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *