ದತ್ತಪೀಠಕ್ಕೆ ಹೊರಟ ಮಾಲಾದಾರಿಗಳಿದ್ದ ಬಸ್ ಮೇಲೆ ಕಲ್ಲು ತೂರಾಟ..!

suddionenews
1 Min Read

ಕೋಲಾರ: 24 ಮಾಲಾದಾರಿಗಳು ದತ್ತಪೀಠಕ್ಕೆಂದು ಹೊರಟಿದ್ದರು. ಈ ವೇಳೆ ಮಾಲಾದಾರಿಗಳಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆಯೂ ನಡೆದಿದೆ. ನಗರದ ಎಂಬಿ ರಸ್ತೆಯ ವಿಶಾಲ್ ಮಾರ್ಟ್ ಎದುರು ನಡೆದಿದೆ.

ಕಲ್ಲು ತೂರಾಟ ನಡೆದ ಪರಿಣಾಮ ಬಸ್ ನ ಹಿಂಬದಿಯ ಗಾಜು ಪುಡಿ ಪುಡಿಯಾಗಿದೆ. ಹಿಂದೆ ಕುಳಿತಿದ್ದ ಇಬ್ಬರು ಮಾಲಾದಾರಿಗಳು ಇದರಿಂದ ತೀವ್ರ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಘಟನೆ ಖಂಡಿಸಿ ಹಿಂದೂ ಪರ ಸಂಘಟನೆಗಳು ನಗರ ಪೊಲೀಸ್ ಠಾಣೆ ಎದುರು ಮಧ್ಯರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸುವಂತೆ ಭಜರಂಗದಳ, ಶ್ರೀರಾಮ ಸೇನೆ ಹಾಗೂ ಮಾಲಾದಾರಿಗಳು ಪಟ್ಟು ಹಿಡಿದಿದ್ದಾರೆ. ಬಳಿಕ ಪ್ರತಿಭಟನಾಕಾರರನ್ನು ಸಮಾಧಾನಗೊಳಿಸಿದ ಡಿವೈಎಸ್ಪಿ ಗಿರಿ, ಮಾಲಾಧಾರಿಗಳಿಗೆ ಬೇರೊಂದು ಬಸ್ ವ್ಯವಸ್ಥೆ ಮಾಡಿ ದತ್ತ ಪೀಠಕ್ಕೆ ಕಳುಹಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *