Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

NEET ಅಕ್ರಮ ಎಸಗಿದವರ ವಿರುದ್ಧ ಕಠಿಣ ಕ್ರಮ: ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸಲು ಪ್ರಧಾನಿ ಮೋದಿ ಅಭಯ

---Advertisement---

ದೆಹಲಿ.ಜುಲೈ.21: ನೀಟ್ (NEET) ಪರೀಕ್ಷೆಯ ಅಕ್ರಮಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಲು ಬಿಡುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಎನ್ ಡಿಎ (NDA) ಸಂಸದೀಯ ಪಕ್ಷದ ‘ಮಂಗಳ ಮಿಲನ್’ ಸಭೆಯಲ್ಲಿ ಪ್ರಧಾನಿಯವರು ಮಾತನಾಡಿದ್ದು, ಯುವಜನರ ಭವಿಷ್ಯಕ್ಕೆ ಧಕ್ಕೆಯಾಗಲು ನಾವು ಎಂದಿಗೂ ಬಿಡುವುದಿಲ್ಲ. ಪರೀಕ್ಷಾ ಅಕ್ರಮಗಳಿಗೆ ಕಾರಣರಾದ ಪ್ರತಿಯೊಬ್ಬರಿಗೂ ಕಠಿಣ ಶಿಕ್ಷೆಯಾಗಲಿದ್ದು, ಅವರನ್ನು ಜೈಲಿಗೆ ಅಟ್ಟಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ಸಭೆಯ ಬಳಿಕ ಮಾಧ್ಯಮಗಳಿಗೆ ವಿವರಣೆ ನೀಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ನೀಟ್ ಪತ್ರಿಕೆ ಸೋರಿಕೆ ವರದಿಯಾದ ತಕ್ಷಣವೇ ಸರ್ಕಾರ ಕ್ಷಿಪ್ರವಾಗಿ ಸ್ಪಂದಿಸಿದೆ ಎಂದಿದ್ದಾರೆ. “ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ 13 ಜನರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಯಿತು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮರುಪರೀಕ್ಷೆಗೆ ಹೆಚ್ಚಿನ ಆದ್ಯತೆ ನೀಡಿ, ಅದನ್ನು ಯಶಸ್ವಿಯಾಗಿ ನಡೆಸಿ ಫಲಿತಾಂಶವನ್ನೂ ವಿಳಂಬವಿಲ್ಲದೆ ಪ್ರಕಟಿಸಲಾಗಿದೆ” ಎಂದು ರಿಜಿಜು ತಿಳಿಸಿದರು.

ಮುಂಬರುವ ದಿನಗಳಲ್ಲಿ ಇಂತಹ ಪರೀಕ್ಷಾ ಅಕ್ರಮಗಳು ಮರುಕಳಿಸದಂತೆ ತಡೆಯಲು ಬಲವಾದ ಕಾನೂನು ಕ್ರಮಗಳ ಅಗತ್ಯವನ್ನು ಪ್ರಧಾನಿ ಪ್ರತಿಪಾದಿಸಿದ್ದಾರೆ. ಅಕ್ರಮ ಎಸಗಿದ ಆರೋಪಿಗಳಿಗೆ ಕಠಿಣಾತಿಕಠಿಣ ಶಿಕ್ಷೆಯಾಗುವಂತೆ ಮಾಡಲು ದೇಶದ ಉನ್ನತ ವಕೀಲರನ್ನು ನಿಯೋಜಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇದೇ ಸಭೆಯಲ್ಲಿ ದೇಶದ ಆರ್ಥಿಕ ಪ್ರಗತಿ ಮತ್ತು ಮುಕ್ತ ವ್ಯಾಪಾರ ಒಪ್ಪಂದಗಳ (FTA) ಕುರಿತಾಗಿಯೂ ಪ್ರಧಾನಿ ಮಾತನಾಡಿದರು. ವಿದೇಶಗಳೊಂದಿಗೆ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳುವಾಗ ಭಾರತದ ರೈತರ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಬಲಿ ಕೊಡುವುದಿಲ್ಲ ಮತ್ತು ರೈತರ ಕಲ್ಯಾಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಕೃಷ್ಣಪ್ಪ ಆಯ್ಕೆ

ಚಿತ್ರದುರ್ಗ : ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮನ್ನಣೆ ನೀಡುವಂತೆ ನೀರಾವರಿ ಹೋರಾಟ ಸಮಿತಿ ಮನವಿ : ಅನುದಾನ ಬಿಡುಗಡೆಗೆ ಆಗ್ರಹಿಸಿ ಸಂಸದರಿಗೆ ಪತ್ರ

ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಕಾಣಿಸಿಕೊಳ್ಳುವುದು ಗಂಭೀರ ಆರೋಗ್ಯ ಸಮಸ್ಯೆಯ ಮುನ್ಸೂಚನೆಯಾಗಿರಬಹುದು!

ಆಸ್ಪತ್ರೆಯಲ್ಲಿ ಲಂಚ, ಕೃಷಿ ಹೊಂಡ ಗೋಲ್ ಮಾಲ್ : ಅಧಿಕಾರಿಗಳ ಬೆಂಡೆತ್ತಿದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ!

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜನ್ಮದಿನ : ಚಿತ್ರದುರ್ಗದಲ್ಲಿ ಕೇಕ್ ಕತ್ತರಿಸಿ ಶುಭಹಾರೈಸಿದ ಕಾಂಗ್ರೆಸ್ ಮುಖಂಡರು

ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ಡಾ.ಸಿ.ಶಿವಲಿಂಗಪ್ಪ ಒತ್ತಾಯ