Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಶುರಾಂಪುರ ಹೋಬಳಿ ತಾಲ್ಲೂಕು ಕೇಂದ್ರಕ್ಕಾಗಿ ಮುಷ್ಕರ ; ರೈತರ ಮನವೊಲಿಸಿದ ತಹಶೀಲ್ದಾರ್

Facebook
Twitter
Telegram
WhatsApp

ಚಳ್ಳಕೆರೆ : ಪರಶುರಾಂಪುರ ಹೋಬಳಿಯನ್ನು ತಾಲ್ಲೂಕು ಕೇಂದ್ರವಾಗಿ ಪರಿಗಣಿಸುವಂತೆ ಜನಜಾಗೃತಿ ವೇದಿಕೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಪರಶುರಾಂಪುರ ಶಾಖೆ ಅನಿರ್ದಿಷ್ಟ ಕಾಲ ಮುಷ್ಕರ ಹೂಡಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿ ತಹಶೀಲ್ದಾರ್ ರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಜೂನ್.01 ರಂದು ಬೆಳಿಗ್ಗೆ 10:00 ಗಂಟೆಗೆ ಮುಷ್ಕರ ಹಮ್ಮಿಕೊಂಡ ಸಂಘಟನೆಯವರು, ಕಳೆದ 20 ವರ್ಷದಿಂದ ಈ ಬೇಡಿಕೆಯನ್ನು ನಿರಂತರವಾಗಿ ಶಾಸಕರು ಮಂತ್ರಿಗಳು ಹಾಗೂ ಅಧಿಕಾರಿಗಳಿಗೆ ಸಲ್ಲಿಸುತ್ತಾ ಬಂದಿದ್ದೇವೆ ಇದಲ್ಲದೆ ತಾಲೂಕಿನಲ್ಲಿರುವ ರೈತರಿಗೆ ಬೆಳೆ ವಿಮೆ ಸಂದಾಯವಾಗಿಲ್ಲ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೂ ಮುಷ್ಕರವನ್ನು ಕೈಬಿಡುವುದಿಲ್ಲ ವೆಂದು ಪಟ್ಟು ಹಿಡಿದರು ಸ್ಥಳಕ್ಕೆ ಆಗಮಿಸಿದ ತಹಶಿಲ್ದಾರ್ ರಘುಮೂರ್ತಿ ಸರ್ಕಾರದ ಮಟ್ಟದಲ್ಲಿ ಪರಶುರಾಂಪುರ ತಾಲೂಕು ಕೇಂದ್ರವನ್ನಾಗಿ ಪರಿಗಣಿಸಲು ಪರಿಶೀಲನೆ ಹಂತದಲ್ಲಿದೆ.

ಬೆಳೆ ವಿಮೆಗೆ  ಸಂಬಂಧಿಸಿದಂತ ಈಗಾಗಲೇ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಸಂಬಂಧಿಸಿದ ಕಂಪನಿಯ ಜನರೊಂದಿಗೆ ಮಾತನಾಡಿ ಹಾಗೂ ಸಭೆ ಮಾಡಿ ಒಂದು ತಿಂಗಳ ಒಳಗಾಗಿ ಹಣವನ್ನು ರೈತರ ಖಾತೆಗೆ ಹಾಕುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಯಾವುದೇ ರೈತರು ಆತಂಕಗೊಳ್ಳುವ ಅಗತ್ಯವಿಲ್ಲ.

ರೈತರಿಗೋಸ್ಕರ ತಾಲೂಕಿನಲ್ಲಿ ಈಗಾಗಲೇ 67 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ಪರಿಹಾರ ನೀಡಲಾಗಿದೆ. ದಾರಿ, ಸ್ಮಶಾನ ಮುಂತಾದ ಸಮಸ್ಯೆಗಳನ್ನು ನೇರವಾಗಿ ಗ್ರಾಮಕ್ಕೆ ಹೋಗಿ ಬಗೆಹರಿಸಲಾಗುತ್ತಿದೆ. ಅತಿ ಮಳೆಯಿಂದ ನಷ್ಟವಾಗದಂತೆ ಎಲ್ಲಾ ರೈತರಿಗೂ ಈಗಾಗಲೇ ಪರಿಹಾರ ನೀಡಲಾಗಿದೆ ತಾಲೂಕಿನಲ್ಲಿರುವ ಎಲ್ಲಾ ಗ್ರಾಮಗಳನ್ನು ಮನೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಸಮಸ್ಯೆ ಮುಕ್ತ  ಗ್ರಾಮಗಳನ್ನಾಗಿ 40 ಗ್ರಾಮಗಳನ್ನು ಮಾಡಲಾಗಿದೆ.

ಉಳಿದಂತೆ ಎಲ್ಲಾ ಗ್ರಾಮಗಳನ್ನು ಕೂಡ ಸಮಸ್ಯೆ ಮುಕ್ತ ಗ್ರಾಮಗಳನ್ನಾಗಿ ಮಾಡಲಾಗುತ್ತಿದೆ. ರೈತರ ಹಿತಕಾಯುವ ದೃಷ್ಟಿಯಲ್ಲಿ ತಾಲೂಕಾಡಳಿತ ರೈತರೊಂದಿಗೆ ಉದ್ದೇಶಿತ ಮುಷ್ಕರವನ್ನು ಕೈ ಬಿಡುವಂತೆ ಮನವಿ ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

error: Content is protected !!