ಕೇಸರಿ ಶಾಲು ಧರಿಸಿದ್ದಕ್ಕೆ ಹಲ್ಲೆ : ನ್ಯಾಯ ಸಿಕ್ಕಿಲ್ಲವೆಂದು ವಿಷ ಕುಡಿದ ವಿದ್ಯಾರ್ಥಿ..!

suddionenews
1 Min Read

ಮಡಿಕೇರಿ: ಹಿಜಾಬ್ ವಿರೋಧಿಸಿ, ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಶಾಲೆಗೆ ಹೋಗುತ್ತಿದ್ದಾರೆ. ಈ ಬೆನ್ನಲ್ಲೆ ಕೇಸರಿ ಶಾಲು ಧರಿಸಿದ್ದನೆಂದು ವಿದ್ಯಾರ್ಥಿ ಮೇಲೆ ಹಾಸ್ಟೇಲ್ ನಲ್ಲಿ ಹಲ್ಲೆ ಮಾಡಿರುವ ಘಟನೆ ನಡೆದಿತ್ತು. ಈ ಘಟನೆಯಿಂದ ನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಂತೋಣಿ ಪ್ರಜ್ವಲ್ ಆತ್ಮಹತ್ಯೆಗೆ ಯತ್ನಿಸಿರುವ ವಿದ್ಯಾರ್ಥಿ. ಅಂತೋಣಿ‌ ಮೇಲೆ ಹಲ್ಲೆ ನಡೆದಿದ್ದರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಮಂದಿಯಲ್ಲಿ ಒಬ್ಬನ ವಿಚಾರಣೆ ಮಾತ್ರ ಮಾಡಲಾಗಿತ್ತು. ಇದರಿಂದ ಮನನೊಂದ ಆಂತೋಣಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ತನಗೆ ಸರಿಯಾದ ನ್ಯಾಯ ಸಿಕ್ಕಿಲ್ಲವೆಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಕುಡಿದು ಸ್ನೇಹಿತರಿಗೆ ಕಾಲ್ ಮಾಡಿದ್ದನಂತೆ. ಸ್ನೇಹಿತರೆಲ್ಲ ತಕ್ಷಣ ಬಂದು ಆಸ್ಪತ್ರೆಗೆ ಸೇರಿಸಿದ್ದಾರೆ. ಹಾಸ್ಟೇಲ್ ನಲ್ಲಿ ಅನ್ಯ ಕೋಮಿನವರಿಂದ ಭಯದ ವಾತಾವರಣವಿದೆ‌ ವಾರ್ಡ್ ನಿಂದಲೂ ತಾರತಮ್ಯ ಬೆದರಿಕೆ ಇದೆ ಎಂಬ ಆರೋಪಗಳಿವೆ. ಸದ್ಯ ಈ ಸಂಬಂಧ ಕುಶಾಲನಗರ ಪೊಲೀಸರಿಂದ ವಿಚಾರಣೆ ನಡೆಯುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *