ಚಿತ್ರದುರ್ಗ : ಪುಂಡರ ಪುಂಡಾಟಿಕೆಗೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ !

suddionenews
1 Min Read

 

ಚಿತ್ರದುರ್ಗ, (ಡಿ.21): ಪುಂಡರ ಕಾಟಕ್ಕೆ ಬೇಸತ್ತು 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಶೀರನಕಟ್ಟೆಯ ಕೋಡಿಹಳ್ಳಿಹಟ್ಟಿ ಗ್ರಾಮದ ಪ್ರಥಮ ಪಿಯುಸಿ ವಿದ್ಯಾರ್ಥಿನಿ  ಕಾಲೇಜಿಗೆ ಹೋಗಿ ಬರುವಾಗ ಕೆಲವರು ಕಿರುಕುಳ ನೀಡುತ್ತಿದ್ದರು, ಆಕೆಯ ಜಡೆ ಹಿಡಿದು ಎಳೆದು ಅಶ್ಲೀಲವಾಗಿ ಮಾತನಾಡುತ್ತಿದ್ದರಂತೆ. ಇದರಿಂದ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಸಂಬಂಧ ಆರೋಪಿಗಳ ವಿರುದ್ಧ ಪೋಷಕರು ಹೊಸದುರ್ಗ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪೋಷಕರು ಪ್ರತಿಭಟನೆ ನಡೆಸಿದರು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಎಸ್ಪಿ ಜಿ ರಾಧಿಕಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ತನ್ನ ಮಗಳ ಭವಿಷ್ಯಕ್ಕೆ ತುಂಬಾ ಕಷ್ಟ ಪಡುತ್ತಿದ್ದೆ. ಕೂಲಿನಾಲಿ ಮಾಡಿ ಮಗಳಿಗೆ ಉನ್ನತ ಶಿಕ್ಷಣ ಕೊಡಿಸುವ ಆಸೆ ಇತ್ತು. ನನ್ನ ಮಕ್ಕಳನ್ನು ತುಂಬಾ ಭಯದಿಂದ ಸಾಕಿದ್ದೆ. ಪುಂಡರ ಕಿರುಕುಳಕ್ಕೆ ಮಗಳು ಇಂತಹ ನಿರ್ಧಾರ ಕೈಗೊಂಡಿದ್ದಾಳೆ ನೋವು ತೋಡಿಕೊಂಡಿದ್ದಾರೆ. ಹೊಸದುರ್ಗ ತಾಲೂಕಿನ ಶೀರನಕಟ್ಟೆಯ ಕೆಲವು ಪುಂಡರ ವಿರುದ್ಧ ಕಿರುಕುಳದ ಆರೋಪ ಮಾಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *