ಸುದ್ದಿಒನ್, ಚಿತ್ರದುರ್ಗ, ಜುಲೈ. 14 : ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟವಾದ ಗುರು ಮತ್ತು ಗುರಿ ಹೊಂದಿ ಶಿಕ್ಷಣ ಹಾಗೂ ಉತ್ತಮ ಸಂಸ್ಕಾರವನ್ನು ಅಳವಡಿಸಿಕೊಂಡರೆ ಅವರ ಜೀವನ ಸಾರ್ಥಕವಾಗುವುದಲ್ಲದೆ, ಸಮಾಜವೂ ಅಭಿವೃದ್ಧಿಯತ್ತ ಸಾಗುತ್ತದೆ ಎಂದು ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಸ್ವಾಮೀಜಿ ಅಭಿಪ್ರಾಯಪಟ್ಟರು.
ಚಿತ್ರದುರ್ಗ ಜಿಲ್ಲಾ ವೀರಶೈವ ಸಮಾಜದ ವತಿಯಿಂದ ಆಯೋಜಿಸಿದ್ದ ಪ್ರಸಕ್ತ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಬಸವಾದಿ ಶರಣರ ತತ್ವ-ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪರಿಶುದ್ಧ ಜೀವನ ನಡೆಸಬೇಕು. ಸಂಸ್ಕಾರಯುತ ಶಿಕ್ಷಣದೊಂದಿಗೆ ಸತ್ಯ, ಶುದ್ಧ ಕಾಯಕ ಮತ್ತು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಸಮಾಜ ಮತ್ತಷ್ಟು ಶ್ರೀಮಂತವಾಗುತ್ತದೆ ಎಂದು ಹೇಳಿದರು.ವಿದ್ಯಾರ್ಥಿಗಳು ಪೋಷಕರು ಹಾಗೂ ಗುರು-ಹಿರಿಯರ ಮಾರ್ಗದರ್ಶನದಲ್ಲಿ ತಮ್ಮ ಪ್ರತಿಭೆಯನ್ನು ಬೆಳೆಸಿಕೊಂಡು ದೇಶಕ್ಕೆ ಪ್ರಜ್ಞಾವಂತ ನಾಗರಿಕರಾಗಿ ಹೊರಹೊಮ್ಮಬೇಕು ಎಂದು ಕರೆ ನೀಡಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಆತ್ಮವಿಶ್ವಾಸ, ಛಲ ಹಾಗೂ ಪ್ರಾಮಾಣಿಕ ಪ್ರಯತ್ನವನ್ನು ಜೀವನದ ಮೂಲಮಂತ್ರವಾಗಿಸಿಕೊಳ್ಳಬೇಕು ಎಂದರು. ಪೋಷಕರ ಕನಸು-ಆಕಾಂಕ್ಷೆಗಳನ್ನು ಈಡೇರಿಸುವ ಜೊತೆಗೆ ಧರ್ಮ, ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಗೌರವ ಬೆಳೆಸಿಕೊಂಡು ಸಮಾಜಕ್ಕೆ ಉತ್ತಮ ಹೆಸರನ್ನು ತರಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿತ್ರದುರ್ಗ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಹೆಚ್.ಎಸ್. ತಿಪ್ಪೇಸ್ವಾಮಿ ಮಾತನಾಡಿ, ಸಮಾಜ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸದೃಢವಾದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಆಧುನಿಕ ಶಿಕ್ಷಣವನ್ನು ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜದ ಪ್ರಗತಿಗೆ ವಿದ್ಯಾರ್ಥಿಗಳು ತಮ್ಮ ಕೊಡುಗೆ ನೀಡಬೇಕು ಎಂದು ಹೇಳಿದರು.
ಸಮಾಜದ ಕಾರ್ಯದರ್ಶಿ ಪಿ. ವೀರೇಂದ್ರ ಕುಮಾರ್ ಹಾಗೂ ಸಹಕಾರ್ಯದರ್ಶಿ ಜಿತೇಂದ್ರ ಹುಲಿಕುಂಟೆ ಸಮಾಜದ ಕಾರ್ಯಯೋಜನೆ, ಸಂಘಟನಾ ಚಟುವಟಿಕೆಗಳು ಹಾಗೂ ಭವಿಷ್ಯದ ಯೋಜನೆಗಳ ಕುರಿತು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಸಮಾಜದ ನಿರ್ದೇಶಕರಾದ ಎಸ್. ಷಡಕ್ಷರಯ್ಯ, ಶ್ರೀಮತಿ ಟಿ.ಕೆ. ಲತಾ ಉಮೇಶ್, ಸಿದ್ದವ್ವನಹಳ್ಳಿ ಎಸ್. ಪರಮೇಶ್, ಡಿ.ಎಸ್. ಮಲ್ಲಿಕಾರ್ಜುನ, ಡಿ.ವಿ.ಎಸ್. ಪ್ರದೀಪ್, ಟಿ. ಜಯ್ಯಪ್ಪ, ಜಿ.ಎಂ. ಪ್ರಕಾಶ್, ನಿರಂಜನ್ ದೇವರಮನೆ, ಎಂ. ಸಿದ್ದಪ್ಪ ಸೇರಿದಂತೆ ಹಲವು ಗಣ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







