ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ

1 Min Read

 

ಸುದ್ದಿಒನ್, ಚಿತ್ರದುರ್ಗ, ಜನವರಿ.25 : ನಗರದ ಪ್ರತಿಷ್ಠಿತ ಶಾಲೆಯಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಯು  ರಾಜ್ಯ ಮಟ್ಟದ, “ಚಿತ್ರದುರ್ಗ ಡಿಸ್ಟ್ರಿಕ್ ಅಥ್ಲೆಟಿಕ್ ಅಸೋಸಿಯೇಷನ್” ಇವರು ಆಯೋಜಿಸಿದ್ದ “ಚಿತ್ರದುರ್ಗ ಜಿಲ್ಲಾ ಡಿಸ್ಟ್ರಿಕ್ ಅಥ್ಲೆಟಿಕ್  ಮೀಟ್ 2024” ರಲ್ಲಿ ನೌಮನ್ ಅಹಮ್ಮದ್ ಷರೀಫ್ 9ನೇ ತರಗತಿ. ಇವರು ರಾಜ್ಯ ಮಟ್ಟದ 60 ಮೀಟರ್ ಓಟದ ಸ್ಪರ್ಧೆಯಲ್ಲಿ ಅಂಡರ್ 16 ವಿಭಾಗದಲ್ಲಿ  ಭಾಗವಹಿಸಿ, ವಿಜೇತರಾಗಿ ಫೆಬ್ರವರಿ.14.2024ರಂದು ಗುಜರಾತಿನ ಅಹಮದಾಬಾದಿನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ “ಆಥ್ಲೆಟಿಕ್ ಪೆಢರೇಷನ್ ಆಫ್ ಇಂಡಿಯಾ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಶಾಲೆಗೆ ಕೀರ್ತಿ ತಂದ  ಈ ಕ್ರೀಡಾಪಟುವಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ .ಬಿ.ವಿಜಯ್ ಕುಮಾರ್ ಸಂಸ್ಥೆಯ ನಿರ್ದೇಶಕರಾದ ಎಸ್.ಎಂ ಪೃಥ್ವೀಶ್, ಹಾಗೂ ಶ್ರೀಮತಿ ಸುನಿತಾ.ಪಿ.ಸಿ, ಸಂಸ್ಥೆಯ  ಅಕಾಡೆಮಿಕ್ ಅಡ್ಮಿನಿಸ್ಟ್ರೇಟರ್ ಡಾ|| ಸ್ವಾಮಿ ಕೆ.ಎನ್, ಮುಖ್ಯ ಶಿಕ್ಷಕರಾದ ಸಂಪತ್ ಕುಮಾರ್.ಸಿ.ಡಿ, ಐಸಿಎಸ್‍ಇ ಪ್ರಿನ್ಸಿಪಾಲರಾದ ಬಸವರಾಜಯ್ಯ.ಪಿ ಮತ್ತು ಎಲ್ಲಾ ಶಿಕ್ಷಕ/ಶಿಕ್ಷಕೇತರ  ವೃಂದದವರು ಶ್ಲಾಘಸಿ ಅಭಿನಂದಿಸಿದ್ದಾರೆ.
ವಂದನೆಗಳೊಂದಿಗೆ,

 

Share This Article
Leave a Comment

Leave a Reply

Your email address will not be published. Required fields are marked *