Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2015ರಲ್ಲಿ ವಿದ್ಯಾರ್ಥಿ ಯಲ್ಲಾಲಿಂಗಾ ಸಾವು ಕೇಸ್ : 9 ಆರೋಪಿಗಳು ಖುಲಾಸೆ..!

---Advertisement---

ಕೊಪ್ಪಳ ಜಿಲ್ಲೆಯ ಯಲ್ಲಾಲಿಂಗಾ ಕೊಲೆ 2015ರಲ್ಲಿ ನಡೆದಿತ್ತು. ಕೊಪ್ಪಳ ಜಿಲ್ಲೆಯ ರೈಲ್ವೆ ನಿಲ್ದಾಣದಲ್ಲಿ ಯಲ್ಲಾಲಿಂಗ ಶವ ಪತ್ತೆಯಾಗಿತ್ತು. ಈ ಕೊಲೆ ಸಂಬಂಧ ಅರೆಸ್ಟ್ ಆಗಿದ್ದ 9 ಜನರನ್ನು ಖುಲಾಸೆ ಮಾಡಿದೆ. ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ತೀರ್ಪನ್ನ ನೀಡಿದೆ. ಶಿವರಾಜ್ ತಂಗಡಗಿ ಆಪ್ತ ಹನುಮೇಶ್ ನಾಯಕ್ ಸೇರಿ 9 ಜನರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿತ್ತು. ಇದೀಗ ಕೋರ್ಟ್ ತೀರ್ಪು ನೀಡಿದ್ದು, ಖುಲಾಸೆ ಮಾಡಿದೆ.

ಹನುಮೇಶ್ ನಾಯಕ್ ಪುತ್ರ ಮಹಾಂತೇಶ್ ನಾಯಕ್, ಮನೋಜ್ ಪಾಟೀಲ್, ಬಾಳನಗೌಡ, ಕಾಡ ಮಂಜ, ನಂದೀಶ್, ಪರಶುರಾಮ್, ಯಮನೂರಪ್ಪ ಸೇರಿದಂತೆ 9 ಜನರ ವಿರುದ್ಧ ಕೇಸ್ ದಾಖಲಾಗಿತ್ತು. ಜೊತೆಗೆ ಎಲ್ಲರೂ ಜಾಮೀನಿನ ಮೇಲೆ ಹೊರಗೆ ಇದ್ದರು. ಜಿಲ್ಲಾ ನ್ಯಾಯಾಧೀಶರಾದ ಚಂದ್ರಶೇಖರ್ ತೀರ್ಪು ಪ್ರಕಟಿಸಿ, ಖುಲಾಸೆಗೊಳಿಸಿದ್ದಾರೆ. ಕೊಲೆ ಅಲ್ಲ ಆತ್ಮಹತ್ಯೆ ಎಂಬುದು ತಿಳಿದು ಬಂದಿದೆ.

ತೀರ್ಪಿನ ಬಳಿಕ ಆರೋಪಿಗಳ ಪರ ವಕೀಲ ಗಂಗಾಧರ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ಆತ್ಮಹತ್ಯೆಯ ಪ್ರಕರಣ ಎಂದು ಕೋರ್ಟ್ ತೀರ್ಪು ನೀಡಿದೆ. ನ್ಯಾಯಾಲಯ ಆರೋಪಿಗಳನ್ನು ನಿರಪರಾಧಿಗಳೆಂದು ಬಿಡುಗಡೆಗೊಳಿಸಿದೆ. 76 ಸಾಕ್ಷಿಗಳು ಈ ಕೇಸ್ ನಲ್ಲಿದ್ದರು. ಹಲವು ಸಾಕ್ಷಿಗಳು ನಿರಾಧಾರವಾಗಿದ್ದವು. ಈ ಕೇಸ್ ನಲ್ಲಿ ಹನುಮೇಶ್ ನಾಯಕ ಹಾಗೂ ಅವರ ಕುಟುಂಬದ ಪಾತ್ರವಿಲ್ಲ. ಯಲ್ಲಾಲಿಂಗ ಕೇಸದ ಆತ್ಮಹತ್ಯೆ ಎಂದು ಪರಿಗಣಿಸಲಾಗಿದೆ. ರೈಲ್ವೆ ಪೋಸ್ಟ್ ಮಾರ್ಟಮ್ ವರದಿಯಲ್ಲೂ ರೈಲ್ವೆ ಗಾಯದಿಂದ ಸಾವು ಸಂಭವಿಸಿದೆ ಎಂಬ ವರದಿ ಬಂದಿದೆ. ಇದೊಂದು ರಾಜಕೀಯ ಷಡ್ಯಂತ್ರ ಎಂದು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now