Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮುರುಡೇಶ್ವರದಲ್ಲಿ ವಿದ್ಯಾರ್ಥಿಗಳು ಸಾವು : ಉಳಿದವರನ್ನು ಸುರಕ್ಷಿತವಾಗಿ ಕೋಲಾರಕ್ಕೆ ಕಳುಹಿಸಿದ ಪೊಲೀಸರು..!

---Advertisement---

ಕಾರಾವಾರ: ಕೋಲಾರ ಜಿಲ್ಲೆಯ ಮುಳುಬಾಗಿಲು ಮೊರಾರ್ಜಿ ವಸತಿ ಶಾಲೆಯ ಮಕ್ಕಳನ್ನು ಕರೆದುಕೊಂಡು ಶಾಲಾ ಶಿಕ್ಷಕರು ಪ್ರವಾಸಕ್ಕೆಂದು ಬಂದಿದ್ದರು. ಮುರುಡೇಶ್ಚರ ತಲುಪಿದ ಕೂಡಲೇ ಆ ಸಮುದ್ರದ ಅಲೆ ಕಂಡು ಮಕ್ಕಳು ಖುಷಿಯಾಗಿದ್ದಾರೆ. ಆದರೆ ಆ ಖುಷಿಯೇ ಮಕ್ಕಳನ್ನು ಬಲಿ ಪಡೆದಿದೆ. ಸಮುದ್ರದ ಅಲೆಗೆ ಸಿಲುಕು ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ನಿನ್ನೆ ಈ ಘಟನೆ ನಡೆದಿದ್ದು, ಇಂದು ಶವಗಳು ಸಿಕ್ಕಿವೆ.

ಕೊತ್ತೂರಿನ ಮೊರಾರ್ಜಿ ಶಾಲೆಯಿಂದ ಪ್ರವಾಸ ಆಯೋಜನೆ ಮಾಡಲಾಗಿತ್ತು. ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 57 ಮಂದಿ ಪ್ತವಾಸಕ್ಕೆಂದು ಬಂದಿದ್ದರು‌. ಮುರುಡೇಶ್ವರ ಬೀಚ್ ನಲ್ಲಿ ಆಟವಾಡುವಾಗ ಏಳು ಮಂದಿ ನಾಪತ್ತೆಯಾಗಿದ್ದರು. ಆದರೆ ನಿನ್ನೆಯೇ ಮೂರು ಮಂದಿಯನ್ನು ರಕ್ಷಣೆ‌ ಮಾಡಲಾಗಿತ್ತು. ಆದರೆ ಇಂದು ಮೂವರ ಶವ ಪತ್ತೆಯಾಗಿದೆ. 15 ವರ್ಷದ ದೀಕ್ಷಾ, ಲಾವಣ್ಯ, ವಙದನಾ, ಶ್ರಾವಂತಿ ಶವವಾಗಿ ಸಿಕ್ಕಿದ್ದಾರೆ. ಪೋಸ್ಟ್ ಮಾಟಂಗೆ ಮೃತದೇಹಗಳನ್ನು ಕಳುಹಿಸಲಾಗಿದ್ದು, ಬಳಿಕ ಪೋಷಕರಿಗೆ ಹಸ್ತಾಂತರ ಮಾಡಲಾಗುತ್ತದೆ.

ಘಟನೆಯ ಬಳಿಕ ಮುರುಡೇಶ್ವರ ಬೀಚ್ ನಲ್ಲಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಉಳಿದ ಶಿಕ್ಷಕರು, ವಿದ್ಯಾರ್ಥಿಗಳ ಸುರಕ್ಷತೆಯ ಕಡೆಗೆ ಗಮನ ಹರಿಸಿದ ಪೊಲೀಸರು, ಇಂದು ಅವರನ್ನೆಲ್ಲ ಸುರಕ್ಷಿತವಾಗಿ ಕೋಕಾರಕ್ಕೆ ಕಳುಹಿಸಿದ್ದಾರೆ. ವಿದ್ಯಾರ್ಥಿಗಳ ಸಾವಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಘೋಷಣೆ‌ ಮಾಡಲಾಗಿದೆ. ಮಕ್ಕಳನ್ನು ಪ್ರವಾಸಕ್ಕೆಂದು ಕರೆದುಕೊಂಡು ಹೋದಾಗ ಅಥವಾ ಮಕ್ಕಳೆ ಈ ರೀತಿ ಬೀಚ್ ಕಡೆಗೆಲ್ಲ ಹೋದಾಗ ಸುರಕ್ಷಿತವಾಗಿರಬೇಕಾಗುತ್ತದೆ. ವಿದ್ಯಾರ್ಥಿನಿಯರ ಸಾವು ಉಳಿದ ವಿದ್ಯಾರ್ಥಿನಿಯರಿಗೂ ದುಃಖವನ್ನುಂಟು ಮಾಡಿದೆ. ಖುಷಿಯಾಗಿರಲು ಹೋದವರು ಮಸಣ ಸೇರಿದ್ದು ದುರಂತವೆ ಸರಿ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment