Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾರ್ಥಿಗಳೇ ಸ್ವಯಂ ರಜೆ ಪಡೆಯಿರಿ : ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಗರಂ

---Advertisement---

ಉಡುಪಿ: ಅಯೋಧ್ಯೆಯಲ್ಲಿ ನಾಳೆ ರಾಮಮಂದಿರ ಉದ್ಘಾಟನೆಯಾಗಲಿದೆ. ಈ ಸುಸಂದರ್ಭದಲ್ಲಿ ಎಲ್ಲರು ಭಾಗಿಯಾಗಬೇಕೆಂಬುದು ಅಭಿಪ್ರಾಯ. ಹೀಗಾಗಿ ಶಾಲಾ-ಕಾಲೇಜಿಗೂ ರಜೆ ಘೋಷಣೆ ಮಾಡಿ, ಮಕ್ಕಳು ರಾಮನ ಜಪದಲ್ಲಿ ಭಾಗಿಯಾಗಲಿ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಲಾಗಿದೆ. ಆದರೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಬಗ್ಗೆ ಸರ್ಕಾರ ಇನ್ನು ಯಾವುದೇ ನಿರ್ಧಾರಕ್ಕೆ ಬಂದಿಲ್ಲ.

ಸರ್ಕಾರಿ ಶಾಲಾ-ಕಾಲೇಜುಗಳನ್ನು ಹೊರತುಪಡಿಸಿ ಈಗಾಗಲೇ ಕೆಲ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ಬಿಜೆಪಿಯ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಸ್ವಯಂ ಪ್ರೇರಿತವಾಗಿ ರಜೆಯನ್ನು ಪಡೆಯಿರಿ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ವಿದ್ಯಾರ್ಥಿಗಳೇ, ಜನವರಿ 22 ರಂದು ಸ್ವಯಂ ರಜೆ ಪಡೆದು ರಾಮೋತ್ಸವದಲ್ಲಿ ಪಾಲ್ಗೊಳ್ಳಿ. ಸಿದ್ದರಾಮಯ್ಯ ಸರ್ಕಾರ ಐತಿಹಾಸಿಕ ದಿನದಂದು ರಜೆ ಘೋಷಣೆ ಮಾಡದೇ ಸಮಸ್ತ ಹಿಂದೂ ಸಮಾಜದ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ. ಸ್ವಯಂ ರಜೆ ಪಡೆದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಶಿಕ್ಷಣ ಸಂಸ್ಥೆ ಕ್ರಮ ಕೈಗೊಂಡರೆ ಶಾಸಕನಾಗಿ ವಿದ್ಯಾರ್ಥಿಗಳ ಜೊತೆ ನಿಂತು ನ್ಯಾಯ ಒದಗಿಸಲು ನಾನು ಸಿದ್ದ ಎಂದು ಟ್ವೀಟ್ ಮಾಡಿದ್ದಾರೆ.

ದೇಶಾದ್ಯಂತ ರಾಮಜಪ ಜೋರಾಗಿದೆ. ಕಣ್ಣು ಹಾಯಿಸಿದಲ್ಲೆಲ್ಲಾ ರಾಮನ ಫೋಟೋ, ಬ್ಯಾನರ್ ಕಟ್ಟಲಾಗಿದೆ. ರಾಮ ಮಂದಿರಗಳೆಲ್ಲಾ ಅಲಂಕಾರಗೊಂಡಿವೆ. ಎಲ್ಲಾ ದೇವಸ್ಥಾನಗಳಲ್ಲೂ ವಿಶೇಷ ಅಲಂಕಾರ ಮಾಡಿದ್ದು, ಭಜನೆ, ಜಪಕ್ಕೆ ತಯಾರಿ ನಡೆದಿದೆ. ಎಲ್ಲೆಲ್ಲೂ ರಾಮ ಧ್ಯಾನ ಮಾಡುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment