ಸುದ್ದಿಒನ್, ಚಿತ್ರದುರ್ಗ, (ಜೂ, 2) : ವಿದ್ಯಾರ್ಥಿಗಳ ಮನೋಭೂಮಿಕೆಯನ್ನು ಹದ ಮಾಡಿ ಅದರಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಕಡಗೆ ಗಮನ ಹರಿಸಿ ಪಾಠವನ್ನು ಮಾಡುವಂತಹ ಯಾವುದೇ ಅಧ್ಯಾಪಕ ಅವರ ಮನಸ್ಸಲ್ಲಿ ಸದಾ ಉಳಿಯುತ್ತಾರೆ ಎಂದು ಎಸ್.ಜೆ.ಎಮ್ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಚಾರ್ಯ ಉಮೇಶ್ ವಿ. ತುಪ್ಪದ ಅವರು ಅಭಿಪ್ರಾಯಪಟ್ಟರು.
ಅವರು ನಗರದ ಎಸ್.ಜೆ.ಎಂ. ಪಾಲಿಟೆಕ್ ನಲ್ಲಿ ಮೇ 31ರಂದು ನಿವೃತ್ತಿ ಹೊಂದಿದ ಆಯ್ಕೆ ಶ್ರೇಣಿ ಉಪನ್ಯಾಸಕರಾದ ಚನ್ನಕೇಶವ ಅವರಿಗೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಬಿಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ನಂತರ ನಿವೃತ್ತ ಪ್ರಾಚಾರ್ಯರುಗಳಾದ ಸಿ.ಜಿ. ರೇವಣಸಿದ್ದಪ್ಪ ಮತ್ತು ಡಿ.ವಿ .ಮುರುಗೇಶ್ ಅವರುಗಳು ಮಾತನಾಡಿ ಖಡಕ್ ಮಾತು ಮತ್ತು ಹಿಡಿದ ಕೆಲಸವನ್ನು ಮಾಡದೆ ಬಿಡದ ಛಲ ಹೊಂದಿದ್ದವರು ನಮ್ಮ ಚನ್ನಕೇಶವ ಅವರು ಎಂದು ಹೇಳಿದರು. ವಿವಿಧ ವಿಭಾಗಗಳ ಮುಖ್ಯಸ್ಥರುಗಳಾದ ಮಮ್ತಾಜ್ ಬೇಗಂ, ನಳಿನಾಕ್ಷಿ, ಮೋಹನ್.ಎಸ್. ಪಿ.ಡಿ.ಧರ್ಮೇಂದ್ರ ಮತ್ತಿತರರು ಮಾತನಾಡಿದರು.
ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದ ಚನ್ನಕೇಶವ ಅವರು ನನಗೆ ಮೂರು ದಶಕಗಳ ಕಾಲ ಈ ಸಂಸ್ಥೆಯು ಕರ್ತವ್ಯ ಮಾಡಲು ಅವಕಾಶ ಮಾಡಿಕೊಟ್ಟಿದೆ ಅದಕ್ಕೆ ನಾನು ಋಣಿ. ಸಹದ್ಯೋಗಿಗಳ ಒಡನಾಟ ಉತ್ತಮ ಸೇವೆ ಸಲ್ಲಿಸಲು ಅವಕಾಶವಾಯಿತು ಎಂದು ಹೇಳಿದರು.
ಚನ್ನಕೇಶವ ಅವರ ಶ್ರೀಮತಿ ಶಶಿಕಲಾ ಎಂ.ಎಸ್ ಅವರು ಸಹ ಮಾತನಾಡಿದರು. ಸಿವಿಲ್ ವಿಭಾಗದಲ್ಲಿ ಸಹ ಬೋಧಕರಾಗಿ ಕರ್ತವ್ಯ ನಿರ್ವಹಿಸಿದ ಎಂ.ಮುರುಗೇಶ್ ಮತ್ತು ದಂಪತಿಯನ್ನು ಗೌರವಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಎಸ್. ವಿ. ರವಿಶಂಕರ್ ಅವರು ವಹಿಸಿ ಮಾತನಾಡಿದರು. ಸಮಾರಂಭದ ಆರಂಭಕ್ಕೆ ಟಿ .ಎನ್. ಲಿಂಗರಾಜು ಪ್ರಾರ್ಥನೆ ಮಾಡಿ ಕಾರ್ಯಕ್ರಮ ನಿರ್ವಹಿಸಿದರು. ಬೋಧಕರಾದ ಕೆ. ಸುರೇಶ್ ಸ್ವಾಗತಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










