ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆ

1 Min Read

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ  ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಕ್ರೀಡಾ ಕೂಟದಿಂದ ವಿವಿಧ ಸ್ಪರ್ಧೆಗಳಲ್ಲಿ  ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆ”
ಬಾಲಕರ ವಿಭಾಗ (ಹಿರಿಯ ಪ್ರಾಥಮಿಕ ಶಾಲೆ)
• ಶಟಲ್ ಬ್ಯಾಡ್ಮಿಂಟನ್ ಪ್ರಥಮ  ಸ್ಥಾನ
• ಟೇಬಲ್ ಟೆನ್ನಿಸ್ ಪ್ರಥಮ ಸ್ಥಾನ

ಬಾಲಕೀಯರ ವಿಭಾಗ (ಹಿರಿಯ ಪ್ರಾಥಮಿಕ ಶಾಲೆ)
•ಶಟಲ್ ಬ್ಯಾಡ್ಮಿಂಟನ್ ಪ್ರಥಮ  ಸ್ಥಾನ
• ಟೇಬಲ್ ಟೆನ್ನಿಸ್ ಪ್ರಥಮ ಸ್ಥಾನ

ಬಾಲಕರ ವಿಭಾಗ ( ಪ್ರೌಢ ಶಾಲೆ)
• ಶಟಲ್ ಬ್ಯಾಡ್ಮಿಂಟನ್ ದ್ವಿತೀಯ  ಸ್ಥಾನ
• ಟೇಬಲ್ ಟೆನ್ನಿಸ್ ಪ್ರಥಮ ಸ್ಥಾನ

ಬಾಲಕೀಯರ ವಿಭಾಗ ( ಪ್ರೌಢ ಶಾಲೆ)
•ಶಟಲ್ ಬ್ಯಾಡ್ಮಿಂಟನ್ ಪ್ರಥಮ  ಸ್ಥಾನ
• ಟೇಬಲ್ ಟೆನ್ನಿಸ್ ಪ್ರಥಮ ಸ್ಥಾನ

•ವೈಯಕ್ತಿಕ ವಿಭಾಗದಲ್ಲಿ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶಾಲೆಗೆ ಕೀರ್ತಿ ತಂದ  ಕ್ರೀಡಾಪಟುಗಳಿಗೆ  ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ.ಬಿ.ವಿಜಯ್ ಕುಮಾರ್ ಸಂಸ್ಥೆಯ  ಅಕಾಡೆಮಿಕ್ ಅಡ್ಮಿನಿಸ್ಟ್ರೇಟರ್ ಡಾ|| ಸ್ವಾಮಿ ಕೆ.ಎನ್. ಮುಖ್ಯ ಶಿಕ್ಷಕರಾದ ಸಂಪತ್ ಕುಮಾರ್.ಸಿ.ಡಿ, ಐಸಿಎಸ್‍ಇ ಪ್ರಿನ್ಸಿಪಾಲರಾದ ಬಸವರಾಜಯ್ಯ.ಪಿ ಸಂಸ್ಥೆಯ ನಿರ್ದೇಶಕರಾದ ಶ್ರೀ.ಎಸ್.ಎಂ ಪೃಥ್ವೀಶ್, ಹಾಗೂ ಶ್ರೀಮತಿ ಸುನಿತಾ.ಪಿ.ಸಿ ಮತ್ತು ಎಲ್ಲಾ ಶಿಕ್ಷಕ/ಶಿಕ್ಷಕೇತರ  ವೃಂದದವರು ಶ್ಲಾಘಸಿ ಅಭಿನಂದಿಸಿದ್ದಾರೆ ಎಂದು ಮುಖ್ಯೋಪಾಧ್ಯಾಯರಾದ ಸಿ.ಡಿ. ಸಂಪತ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *