ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಮೇ.21 : ಪದವಿ ಶಿಕ್ಷಣ ಕಲಿಕೆಯ ಹಂತದಲ್ಲೆ ಕಲೆ, ಸಾಹಿತ್ಯ ಹಾಗೂ ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಪ್ರಾಂಶುಪಾಲ ಪ್ರೊ.ಬಿ.ಎಸ್.ಮಂಜುನಾಥ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಬೆಂಗಳೂರು ಕಾಲೇಜು ಶಿಕ್ಷಣ ಇಲಾಖೆ ಹಾಗೂ ದಾವಣಗೆರೆ ವಿಶ್ವವಿದ್ಯಾಲಯ ಕಲಿಕೆ ಜೊತೆ ಕೌಶಲ್ಯ ಕಾರ್ಯಕ್ರಮದಡಿಯಲ್ಲಿ ನಗರದ ಎಚ್ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಮಾಧ್ಯಮ ಮತ್ತು ಸಿನಿಮಾ’ ತಯಾರಿಕೆ ಕುರಿತ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಲಿಕೆ ಜೊತೆ ನಾಟಕ, ಚಲನಚಿತ್ರ, ದಾರವಾಹಿ, ಕಿರು ಚಿತ್ರ ನಿರ್ಮಾಣ ಸೇರಿದಂತೆ ವಿವಿಧ ಕೌಶಲ್ಯ ವೃದ್ಧಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಮಾದರಿ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರೊಫೆಸರ್ ಕೆ.ಚಿತ್ತಯ್ಯ ಮಾತನಾಡಿನಾನು ಸಹ ವಿದ್ಯಾರ್ಥಿ ಆಗಿನಿಂದಲೂ ನೀನಾಸಂ ತರಬೇತಿಗೆ ಹೋಗಲು ಪ್ರಯತ್ನ ಪಡುತ್ತಿದ್ದೇನೆ ಅಲ್ಲಿಂದ ಇಲ್ಲಿವರೆಗೂ ಆಗುತ್ತಿಲ್ಲ ಆ ಸಂದರ್ಭದಲ್ಲಿ ಹೋಗಲಿಕ್ಕೆ ಹಣ ಇರಲಿಲ್ಲ ಈಗ ಸಮಯ ಸಿಗುತ್ತಿಲ್ಲ.
ಆದರೆ ನಿಮಗೀಗ ಇಂತಹ ಸುವರ್ಣಾವಕಾಶ ದೊರೆತು ಬಂದಿದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಪ್ರೊ.ಕೃಷ್ಣಮೂರ್ತಿ, ಮಾತನಾಡಿ ಕಥೆ ಹೇಳುವ ಕಲೆ ಉತ್ಸಾಹ ಮತ್ತು ಸೃಜನಶೀಲತೆಯಿಂದ ಬರುತ್ತದೆ. ಆದರೆ ಚಲನಚಿತ್ರ ತಯಾರಿಕಾ ಕಲೆ ತರಬೇತಿಯಿಂದಲೇ ಪಡೆದುಕೊಳ್ಳಬೇಕು ಎಂದು ಹೇಳಿದರು.
ಸಮಾಜಶಾಸ್ರ್ತ ವಿಭಾಗದ ಮುಖ್ಯಸ್ಥ ಪ್ರೊ.ಎಂ.ಕೆ.ದೇವಪ್ಪ, ಮಾತನಾಡಿ ,ಮನುಷ್ಯ ತನ್ನ ಬದುಕಿನಲ್ಲಿ ರೂಢಿಸಿಕೊಂಡ ಕಲೆಗಳು ಕೆಲವೊಮ್ಮೆ ಅವನ ಜೀವನೋಪಾಯಕ್ಕೂ ನೆರವಾಗುತ್ತವೆ. ಹಾಗಾಗಿ ನಾಟಕ, ಸಿನಿಮಾ ಕಲೆ ಕಲಿಕೆಯಲ್ಲಿ ವಿದ್ಯಾರ್ಥಿಗಳು ನಿರಾಸಕ್ತಿ ತೋರಬಾರದು ಎಂದು ಹೇಳಿದರು.
ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ರಾಜಕುಮಾರ್ ಮಾತನಾಡಿದರು. ಚಲನಚಿತ್ರ ತರಬೇತುದಾರ ದಾವಣಗೆರೆ ಮಹೇಶ್, ಮಂಜುನಾಥ್, ವೆಂಕಟೇಶ್, ಐಕ್ಯೂಎಸಿ ಸಂಚಾಲಕ ಪ್ರೊ.ಎಚ್.ತಿಪ್ಪೇಸ್ವಾಮಿ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಚನ್ನಕೇಶ, ಎ.ಪವನ್ಕುಮಾರ್ ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












