Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು: ಪ್ರೊ.ಬಿ.ಎಸ್.ಮಂಜುನಾಥ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಮೇ.21  :  ಪದವಿ ಶಿಕ್ಷಣ ಕಲಿಕೆಯ ಹಂತದಲ್ಲೆ ಕಲೆ, ಸಾಹಿತ್ಯ ಹಾಗೂ ಸಂಗೀತದ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಪ್ರಾಂಶುಪಾಲ ಪ್ರೊ.ಬಿ.ಎಸ್.ಮಂಜುನಾಥ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಬೆಂಗಳೂರು ಕಾಲೇಜು ಶಿಕ್ಷಣ ಇಲಾಖೆ ಹಾಗೂ ದಾವಣಗೆರೆ ವಿಶ್ವವಿದ್ಯಾಲಯ ಕಲಿಕೆ ಜೊತೆ ಕೌಶಲ್ಯ ಕಾರ‍್ಯಕ್ರಮದಡಿಯಲ್ಲಿ ನಗರದ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಮಾಧ್ಯಮ ಮತ್ತು ಸಿನಿಮಾ’ ತಯಾರಿಕೆ ಕುರಿತ ತರಬೇತಿ ಕಾರ‍್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಲಿಕೆ ಜೊತೆ ನಾಟಕ, ಚಲನಚಿತ್ರ, ದಾರವಾಹಿ, ಕಿರು ಚಿತ್ರ ನಿರ್ಮಾಣ ಸೇರಿದಂತೆ ವಿವಿಧ ಕೌಶಲ್ಯ ವೃದ್ಧಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಮಾದರಿ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರೊಫೆಸರ್ ಕೆ.ಚಿತ್ತಯ್ಯ ಮಾತನಾಡಿನಾನು ಸಹ ವಿದ್ಯಾರ್ಥಿ ಆಗಿನಿಂದಲೂ ನೀನಾಸಂ ತರಬೇತಿಗೆ ಹೋಗಲು ಪ್ರಯತ್ನ ಪಡುತ್ತಿದ್ದೇನೆ ಅಲ್ಲಿಂದ ಇಲ್ಲಿವರೆಗೂ ಆಗುತ್ತಿಲ್ಲ ಆ ಸಂದರ್ಭದಲ್ಲಿ ಹೋಗಲಿಕ್ಕೆ ಹಣ ಇರಲಿಲ್ಲ ಈಗ ಸಮಯ ಸಿಗುತ್ತಿಲ್ಲ.
ಆದರೆ ನಿಮಗೀಗ ಇಂತಹ ಸುವರ್ಣಾವಕಾಶ ದೊರೆತು ಬಂದಿದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಪ್ರೊ.ಕೃಷ್ಣಮೂರ್ತಿ, ಮಾತನಾಡಿ ಕಥೆ ಹೇಳುವ ಕಲೆ ಉತ್ಸಾಹ ಮತ್ತು ಸೃಜನಶೀಲತೆಯಿಂದ ಬರುತ್ತದೆ. ಆದರೆ ಚಲನಚಿತ್ರ ತಯಾರಿಕಾ ಕಲೆ ತರಬೇತಿಯಿಂದಲೇ ಪಡೆದುಕೊಳ್ಳಬೇಕು ಎಂದು ಹೇಳಿದರು.

ಸಮಾಜಶಾಸ್ರ್ತ ವಿಭಾಗದ ಮುಖ್ಯಸ್ಥ ಪ್ರೊ.ಎಂ.ಕೆ.ದೇವಪ್ಪ, ಮಾತನಾಡಿ ,ಮನುಷ್ಯ ತನ್ನ ಬದುಕಿನಲ್ಲಿ ರೂಢಿಸಿಕೊಂಡ ಕಲೆಗಳು ಕೆಲವೊಮ್ಮೆ ಅವನ ಜೀವನೋಪಾಯಕ್ಕೂ ನೆರವಾಗುತ್ತವೆ. ಹಾಗಾಗಿ ನಾಟಕ, ಸಿನಿಮಾ ಕಲೆ ಕಲಿಕೆಯಲ್ಲಿ ವಿದ್ಯಾರ್ಥಿಗಳು ನಿರಾಸಕ್ತಿ ತೋರಬಾರದು ಎಂದು ಹೇಳಿದರು.

ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ರಾಜಕುಮಾರ್ ಮಾತನಾಡಿದರು. ಚಲನಚಿತ್ರ ತರಬೇತುದಾರ ದಾವಣಗೆರೆ ಮಹೇಶ್, ಮಂಜುನಾಥ್, ವೆಂಕಟೇಶ್, ಐಕ್ಯೂಎಸಿ ಸಂಚಾಲಕ ಪ್ರೊ.ಎಚ್.ತಿಪ್ಪೇಸ್ವಾಮಿ,  ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಚನ್ನಕೇಶ, ಎ.ಪವನ್‌ಕುಮಾರ್ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ

ಚಿತ್ರದುರ್ಗ | ಐಎಂಎ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಭಾರತೀಯ ವೈದ್ಯಕೀಯ ಸಂಘ (ಐಎಮ್‌ಎ) ಚಿತ್ರದುರ್ಗ ಶಾಖೆಯ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಎಲ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಗರದ ಐಎಂಎ

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ

error: Content is protected !!