Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರಿನ ನವೋದಯ ಶಾಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ : ಪೋಷಕರಿಂದ ದೂರು ದಾಖಲು

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.28 : ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 8 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಂಪ್ಯೂಟರ್ ಶಿಕ್ಷಕಿ ಪ್ರಿಯಾಂಕಾ ವಿರುದ್ಧ ಪೋಷಕರು, ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಂಗಳವಾರ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಸೆ.28) ವಿದ್ಯಾರ್ಥಿಗಳ ಪೋಷಕರಲ್ಲಿ ಒಬ್ಬರಾದ ಕೃಷ್ಣಮೂರ್ತಿ ಎನ್ನುವವರು ದೂರು ನೀಡಿದ್ದಾರೆ.

ದೂರಿನಲ್ಲಿ ‘ದಿನಾಂಕ 27ರಂದು ಬೆಳಿಗ್ಗೆ ನನ್ನ ಮಗ ಹಾಗೂ ಇತರ ವಿದ್ಯಾರ್ಥಿಗಳಿಗೆ ಆರೋಗ್ಯ ಸರಿ ಇಲ್ಲದೆ ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂಬ  ವಿಚಾರ ತಿಳಿದು ಸರ್ಕಾರಿ ಆಸ್ಪತ್ರೆಗೆ ಹೋಗಿ ನೋಡಿದಾಗ ನನ್ನ ಮಗನಿಗೆ ವಾಂತಿ, ಸುಸ್ತಾಗಿತ್ತು.  ಅವನಿಗೆ ವಿಚಾರ ಮಾಡಿದಾಗ ದಿನಾಂಕ 26ರಂದು ಬೆಳಿಗ್ಗೆ 9:00ಗೆ ತಿಂಡಿಗೆ ಹೋಗಲು ಹೊರಟಾಗ ನಮ್ಮ ಶಾಲೆಯ ಕಂಪ್ಯೂಟರ್ ಶಿಕ್ಷಕಿಯಾದ ಪ್ರಿಯಾಂಕಾ ಅವರು ನನಗೆ ಮತ್ತು ತಿಪ್ಪೇಸ್ವಾಮಿ,ಪ್ರಜ್ವಲ್,  ಚಿರಂತ್, ಭಾರತ್, ರೋಹಿತ್ ಸುದರ್ಶನ್ ನಾಯಕ್,  ಮನೋಜ್ ರವರಿಗೆ ಕೊಕೊನಟ್ ವಾಟರ್ ಲೋಟದಲ್ಲಿ ಹಾಕಿ ಕುಡಿಸಿರುತ್ತಾರೆ. ಕೊಕೊನೆಟ್ ವಾಟರ್ ಕುಡಿದ ಸ್ವಲ್ಪ ಸಮಯದ ನಂತರ ವಾಕರಿಕೆ, ವಾಂತಿ, ಹೊಟ್ಟೆ ನೋವು ಇತ್ಯಾದಿ ಸಮಸ್ಯೆಗಳು ಕಂಡು ಬಂದಿದ್ದು, ಈ ವಿಚಾರವನ್ನು ಶ್ರೀಮತಿ ಅವರಿಗೆ ತಿಳಿಸಿದ್ದು ಆದರೆ ಅವರು ಗಮನಕ್ಕೆ ತೆಗೆದುಕೊಳ್ಳಲಿಲ್ಲ ಸಂಜೆಯ ಹೊತ್ತಿಗೆ ಮೇಲ್ಕಂಡ ಎಲ್ಲರಿಗೂ ಪೂರ್ತಿ ಸುಸ್ತಾದಾಗ ಉಪ ಪ್ರಾಂಶುಪಾಲರು ಸಂಜೆ 7:00ಗೆ ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆಗೆ ದಾಖಲಿಸಿದ್ದಾರೆಂಬ ವಿಚಾರ ತಿಳಿಸಿದನು.

ಸದರಿ ಶಾಲೆಯ ಉಪ ಪ್ರಾಂಶುಪಾಲರಾದ ಕೆ. ಶ್ರೀಮತಿ ಅವರು ಸದರಿ ಶಿಕ್ಷಕಿ ಪ್ರಿಯಾಂಕ ಅವರನ್ನು ರಾತ್ರೋರಾತ್ರಿ ಯಾರಿಗೂ ವಿಷಯ ತಿಳಿಸದೆ ಬೆಂಗಳೂರಿಗೆ ಕಳಿಸಿರುತ್ತಾರೆ. ನವೋದಯ ಶಾಲೆಯ ಕಂಪ್ಯೂಟರ್ ಶಿಕ್ಷಕಿಯಾದ ಪ್ರಿಯಾಂಕ ಎಂಬವರು ಮತ್ತು ಬರುವ ಅನಾರೋಗ್ಯಕರವಾದ ಪದಾರ್ಥವನ್ನು ಬೆರೆಸಿ, ನನ್ನ ಮಗನಾದ ಲಿಖಿತ್ ರಾಜ್ ಹಾಗೂ ಇತರೆ ವಿದ್ಯಾರ್ಥಿಗಳಿಗೆ ಕೊಕೊನಟ್ ವಾಟರ್ ನಲ್ಲಿ ಯಾವುದೋ ಮತ್ತು ಬರುವ ಅನಾರೋಗ್ಯಕರವಾದ ಪದಾರ್ಥವನ್ನು ಬೆರೆಸಿ ನನ್ನ ಮಗನಾದ ಲಿಖಿತ್ ರಾಜ್ ಹಾಗೂ ಇತರೆ ವಿದ್ಯಾರ್ಥಿಗಳಿಗೆ ಒತ್ತಾಯ ಪೂರ್ವಕವಾಗಿ ಕುಡಿಸಿದ್ದರಿಂದ ಮಕ್ಕಳ ಆರೋಗ್ಯಕ್ಕೆ ಹಾನಿ ಮತ್ತು ಗಾಯ ಉಂಟಾಗುತ್ತದೆ ಎಂದು ತಿಳಿದು ಉದ್ದೇಶಪೂರ್ವಕವಾಗಿ ಕೊಕೊನಟ್ ವಾಟರ್ ಕುಡಿಸಿರುತ್ತಾರೆ. ಸದರಿ ಶಿಕ್ಷಕಿ ಪ್ರಿಯಾಂಕ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ವಿದ್ಯಾರ್ಥಿಗಳನ್ನು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ವಿದ್ಯಾರ್ಥಿಗಳಿಗೆ ಮಕ್ಕಳ ತಜ್ಞರಾದ ಡಾ. ಶ್ರೀರಂಗೇಗೌಡ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದರು. ಈ ಘಟನೆ ಬಗ್ಗೆ ಸ್ಥಳೀಯ ವ್ಯಕ್ತಿ ನಾಗೇಶ್ ಎಂಬುವರು ಮಾತನಾಡಿ ಕೇವಲ ಎಂಟು ಜನ ವಿದ್ಯಾರ್ಥಿಗಳಿಗೆ ಮಾತ್ರ ಈ ರೀತಿ ಘಟನೆ ಆಗಿದ್ದು ಅನುಮಾನಸ್ಪದವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಇದೀಗ ಶಿಕ್ಷಕಿ ವಿರುದ್ಧ ದೂರು ಕೂಡ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!