ಅಧ್ಯಯನ ಉತ್ತಮ ವ್ಯಕ್ತಿತ್ವವನ್ನು ರೂಪಿಸುತ್ತದೆ : ಎಸ್.ಸಂದೀಪ್

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 22 : ತಕ್ಷಣದ ನಿರ್ಧಾರಗಳು ಶಿಕ್ಷಣದ ಬದುಕಿಗೆ ಹಾನಿಕಾರಕ. ವಿಷಯಕ್ಕೆ ಅನುಗುಣವಾಗಿ ಆಕರ ಗ್ರಂಥಗಳನ್ನು ಪರಾಮರ್ಶಿಸಬೇಕು. ದಾರ್ಶನಿಕರ ನುಡಿಮುತ್ತುಗಳನ್ನು ಅವಲೋಕಿಸಬೇಕು ಆಗಮಾತ್ರ ತೆಗೆದುಕೊಂಡ ನಿರ್ಧಾರಗಳಿಗೆ ಅರ್ಥ ಸಿಗುತ್ತದೆ. ಆಳವಾದ ಅಧ್ಯಯನ ಉತ್ತಮ ವ್ಯಕ್ತಿತ್ವವನ್ನು ರೂಪಿಸುತ್ತದೆ ಎಂದು ಬಾಪೂಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಸಂದೀಪ್ ತಿಳಿಸಿದರು.

ನಗರದ ಕಾಮನಬಾವಿ ಬಡಾವಣೆಯಲ್ಲಿರುವ ಬಾಪೂಜಿ ವಿದ್ಯಾಸಂಸ್ಥೆಯ ಶ್ರೀಮತಿ ಹೇಮಾವತಿ ಕುವೆಂಪು ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯ ವಾಕ್ಯದೊಂದಿಗೆ ರಂಗಸೌರಭ ರಂಗೋತ್ಸವ -2024 ನಾಡಗೀತೆ, ರಾಷ್ಟ್ರಗೀತೆ, ರೈತಗೀತೆ ಪ್ರಾಯೋಗಿಕ ತರಬೇತಿ ಕನ್ನಡ ಗೀತಗಾಯನ, ಯೋಗ ತರಬೇತಿ ಮತ್ತು ಕವಿಕಾವ್ಯ ಪರಿಚಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡ ಭಾಷೆ ಅನ್ನದ ಭಾಷೆಯಾಗಿದೆ. ಪ್ರಶಿಕ್ಷಣಾರ್ಥಿಗಳು ಸಾಹಿತ್ಯದ ಒಲವನ್ನು ಬೆಳೆಸಿಕೊಳ್ಳಬೇಕು. ನೈಜ ಇತಿಹಾಸವನ್ನು ಅಧ್ಯಯನ ಮಾಡಿ ಪಠ್ಯದಲ್ಲಿ ಅಳವಡಿಸಿಕೊಂಡು ಪಠ್ಯಾಧಾರಿತ ವಿಷಯಗಳ ಬಗ್ಗೆ ಅರಿವನ್ನು ಮೂಡಿಸಿಕೊಳ್ಳಬೇಕು. ಸ್ಪಷ್ಟ ಓದು ಹಾಗೂ ಶುದ್ಧ ಬರವಣಿಗೆಯ ಮೂಲಕ ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ರೂಪಿಸಬೇಕು ಎಂದರು.

ಚಲನಚಿತ್ರ ಹಾಸ್ಯನಟ ಮೈಸೂರು ರಮಾನಂದ ಅಧ್ಯಕ್ಷತೆ ವಹಿಸಿ ಮಾತನಾಡಿ ಚಿತ್ರದುರ್ಗ ಜಿಲ್ಲೆಯು ಡಾ.ರಾಜ್‍ಕುಮಾರ್‍ರವರು ಚಿತ್ರದುರ್ಗದಲ್ಲಿ ಇದ್ದಾಗಲೇ ಚಲನಚಿತ್ರ ಪ್ರವೇಶಕ್ಕೆ ಕರೆಬಂದ ವಿಷಯವನ್ನು ಮೆಲುಕು ಹಾಕಿದರು. ಸಾಹಸಸಿಂಹ ವಿಷ್ನುವರ್ಧನ್, ದತ್ತಣ್ಣ, ಅಶೋಕ ಬಾದರದಿನ್ನಿ ಮುಂತಾದ ಸಿನಿಮಾ ಹಾಗೂ ರಂಗಭೂಮಿ ಕಲಾವಿದರಿಗೆ ಬದುಕನ್ನು ಕಲ್ಪಿಸಿದೆ. ರಂಗಸೌರಭ ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ನನ್ನಂತಹ ಅನೇಕ ಕಲಾವಿದರು, ಸಾಹಿತಿಗಳು, ಚಿಂತಕರು ಭಾಗವಹಿಸಿದ್ದಾರೆ.

ರಂಗಸೌರಭ ಕಲಾ ಸಂಘದ ಅಧ್ಯಕ್ಷ ಡಾ.ಕೆ.ಮೋಹನ್‍ಕುಮಾರ್ ಮಾತನಾಡಿ ಸಂಘವು ಹದಿನೈದು ವರ್ಷಗಳಿಂದ ನಿರಂತರವಾಗಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ. ರಾಜ್ಯಾದ್ಯಂತ ರಂಗಭೂಮಿ ತರಬೇತಿ ಕಾರ್ಯಗಾರ, ಶಿಕ್ಷಣದಲ್ಲಿ ರಂಗಕಲೆ ಕಾರ್ಯಕ್ರಮಗಳನ್ನು ನಡೆಸಿದೆ. ಅನೇಕ ಹಿರಿಯ ರಂಗಭೂಮಿ ಕಲಾವಿದರನ್ನು, ಸಾಹಿತಿಗಳನ್ನು ಹಾಗೂ ರಂಗತಂತ್ರಜ್ಞರನ್ನು ಗೌರವಿಸಿದೆ. ಉಪನ್ಯಾಸಕರಾದ ಡಾ.ಪಿ.ರಾಧಮ್ಮ, ಡಾ.ಎಂ.ಎಸ್.ಲಕ್ಷ್ಮೀದೇವಿ, ಟಿ.ತಿಪ್ಪೇರುದ್ರಯ್ಯ, ಬಿ.ಪಾತಲಿಂಗಪ್ಪ, ಬಿ.ಹೇಮಲತ, ಎಂ.ಉಷಾಕಿರಣ, ರಂಗನಟ ಅಮಿತಾನಂದ ಮುಖ್ಯಅತಿಥಿಗಳಾಗಿ ಉಪಸ್ಥಿತರಿದ್ದರು.

ಕಂಡಕ್ಟರ್ ಗಂಗರಾಜು ವಿರಚಿತ ಮೈಸೂರು ರಮಾನಂದ ನಿರ್ದೇಶನದಲ್ಲಿ ಬೆಂಗಳೂರಿನ ಗೆಜ್ಜೆಹೆಜ್ಜೆ ರಂಗತಂಡದವರು ರಂಗಯ್ಯನ ರಾದ್ಧಾಂತ ಹಾಸ್ಯನಾಟಕ ಪ್ರದರ್ಶನಗೊಂಡಿತು. ಶಾಲಾಮಕ್ಕಳಿಗೆ ಸರ್ಕಾರ ನಿಗಧಿಪಡಿಸಿದ ನಾಡಗೀತೆ, ರಾಷ್ಟ್ರಗೀತೆ, ರೈತಗೀತೆ, ಹುಯಿಲುಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ವಿರಚಿತ ಎಲ್ಲಾದರು ಇರು ಎಂತಾದರು ಇರು, ದ.ರಾ.ಬೇಂದ್ರೆ ಅವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ಧಯ್ಯ ಪುರಾಣಿಕ್ ಬರೆದ ಹೊತ್ತಿತೋ ಹೊತ್ತಿತೂ ಕನ್ನಡದ ದೀಪ, ಚನ್ನವೀರ ಕಣವಿಯವರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡದ ಧ್ವನಿಮುದ್ರಿತ ಗೀತೆಗಳೊಂದಿಗೆ ಯೋಗಚಿಕಿತ್ಸಕ ಎಂ.ಬಿ.ಮುರುಳಿ ಹಾಗೂ ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ತರಬೇತಿ ನೀಡಿದರು. ಪ್ರಶಿಕ್ಷಣಾರ್ಥಿ ಸಂತೋಷ ಡಿ ಕಲಕಭಂಡಿ ಇವರು ಚಿತ್ರಸಾಹಿತ್ಯ ಕ್ಷೇತ್ರದ ಕಾದಂಬರಿಕಾರ ಡಾ.ಬಿಎಲ್.ವೇಣುರವರ ಕವಿಕಾವ್ಯ ವಾಚನ ಮಾಡಿದರು. ಪ್ರಾಚಾರ್ಯ ಡಾ.ಜಿ.ದಾಸಯ್ಯ ಸ್ವಾಗತಿಸಿದರು. ಉಪನ್ಯಾಸಕಿ ವಂದಿಸಿದರು. ಪ್ರಶಿಕ್ಷಣಾರ್ಥಿಳಾದ ಸೌಮ್ಯ, ಐಶ್ವರ್ಯ, ಪಲ್ಲವಿ ಪಾರ್ತೀಸಿದರು. ಪೂಜಾ ರಜಪೂತ ವಂದಿಸಿದರು. ಆರ್.ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

43 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago