ಉಪ ವರ್ಗಿಕರಣ ಮಸೂದೆಯನ್ನು ಕೂಡಲೇ ಹಿಂಪಡೆಯಬೇಕು : ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಒತ್ತಾಯ

2 Min Read

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 18 : ಮೀಸಲಾತಿಯಲ್ಲಿ ಒಳಮೀಸಲು ವಿಭಜಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿದೆ ಎಂದು ಸುಪ್ರಿಂ ಕೋರ್ಟ್ ನಿರ್ದೇಶನವಿದೆ. ಆದರೆ ಸರ್ಕಾರ ಒಳಮೀಸಲಿನಲ್ಲಿ ಮತ್ತೇ ಒಳಮೀಸಲು ಮಾಡಿರುವುದು ಭೋವಿ, ಬಂಜಾರ, ಕೊರಮ, ಕೊರಚ ಸಮುದಾಯಗಳಿಗೆ ಸರ್ಕಾರ ಮಾಡಿದ ಅನ್ಯಾಯವಾಗಿದೆ ಹಾಗಾಗಿ ಕರ್ನಾಟಕ ಅಧಿಸೂಚಿತ ಜಾತಿಗಳ (ಉಪ-ವರ್ಗೀಕರಣ) ವಿಧೇಯಕ 2025 ನ್ನು ಹಿಂಪಡೆಯಲು ಒತ್ತಾಯಿಸುತ್ತೇನೆ ಎಂದು ಭೋವಿ ಗುರುಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.

 

ಕರ್ನಾಟಕ ಅಧಿಸೂಚಿತ ಜಾತಿಗಳ (ಉಪ-ವರ್ಗೀಕರಣ) ವಿಧೇಯಕ 2025 ರಲ್ಲಿ ಅಸಂಬದ್ಧವಾಗಿ ವರ್ಗಿಕರಿಸಿರುವ ಉಪ ವರ್ಗಿಕರಣವನ್ನು ಈ ಕೂಡಲೇ ಹಿಂಪಡೆಯಬೇಕು.
ಒಳ ಮೀಸಲಾತಿಯನ್ನು ಕಲ್ಪಿಸುವ ಸರ್ಕಾರದ ಉದ್ದೇಶ ಈಡೇರಬೇಕಾದರೆ ಜಾತಿವಾರು ಉಪ ವರ್ಗಿಕರಣವನ್ನು ಜನಸಂಖ್ಯೆಗೆ ಅನುಗುಣವಾಗಿ ಮಾಡಬೇಕಾಗಿತ್ತು, ಆದರೆ ಜನಸಂಖ್ಯೆಗನುಗುಣವಾಗಿ ಮಾಡುವಲ್ಲಿ, ಸರ್ಕಾರದಿಂದ ಲೋಪವಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯರವರಿಗೆ ಮನವಿ ಮೂಲಕ ತಿಳಿಸಲಾಗಿತ್ತು. ಆದರೆ, ಸರ್ಕಾರ ನಾವು ತಿಳಿಸಿದ ಲೋಪಗಳನ್ನು ಸರಿಪಡಿಸಲಿಲ್ಲ ಮತ್ತು ಕರ್ನಾಟಕ ಅನುಸೂಚಿತ ಜಾತಿಗಳ ವಿಧೇಯಕ 2025 ರಲ್ಲಿ ಮತ್ತೊಮ್ಮೆ ಅಸಂಬದ್ಧವಾಗಿ ಪ್ರವರ್ಗ-ಸಿ ಯನ್ನು ವಿಂಗಡಿಸಿರುವುದನ್ನು ಖಂಡಿಸುತ್ತೇವೆ.

 

ವಿಧೇಯಕ 2025 ರ ಪುಟ 7 ರಲ್ಲಿ ಪರಂತು ಅನುಸೂಚಿತ ಜಾತಿಗಳ ಪ್ರವರ್ಗ-ಸಿ ಪಟ್ಟಿಯ ಸಂದರ್ಭದಲ್ಲಿ ಮೇಲಿನ ಕೋಷ್ಠಕದ ಕ್ರಮ ಸಂಖ್ಯೆ:10, 15, 36, 37 ನಮೂದಿಸಲಾದ (ಅಂದರೆ ಜಾತಿ ಸಂಕೇತ 17, 23, 53 ಮತ್ತು 54) ಇವುಗಳನ್ನು ಹೊರತುಪಡಿಸಿ 59 ಜಾತಿಗಳಿಗಾಗಿ ಪ್ರತಿ ಐದು ಹುದ್ದೆಗಳು ಅಥವಾ ಸ್ಥಾನಗಳ ಪೈಕಿ ಕನಿಷ್ಠ ಒಂದನ್ನು ಪ್ರವರ್ಗ-ಸಿ ಯೊಳಗೆ ಮೀಸಲಿರಿಸತಕ್ಕದ್ದು ಎಂದು ಅಂಗೀಕರಿಸಲಾಗಿದೆ. ಇದನ್ನು ಮಾರ್ಪಡಿಸಿ ಭೋವಿ ಸಂಬಂಧಿತ ಜಾತಿಗಳು, ಲಂಬಾಣಿ ಸಂಬಂಧಿತ ಜಾತಿಗಳು, ಕೊರಚ ಸಂಬಂಧಿತ ಜಾತಿಗಳು, ಕೊರಮ ಸಂಬಂಧಿತ ಜಾತಿಗಳಿಗೆ ನೀಡಿರುವ ಸಿ-ವರ್ಗದ 5%ರಷ್ಟು ಮೀಸಲಾತಿಯನ್ನು ಮುಂದುವರೆಸಬೇಕು.

 

ಭೋವಿ ಬಂಜಾರ ಕೊರಮ ಕೊರಚ ಜಾತಿಗಳು ಶೇಖಡ 5% ಮತ್ತು ಅಲೆಮಾರಿಗಳು 1% ಜನಸಂಖ್ಯೆ ಇರುವುದರಿಂದ, ರಾಜ್ಯದ ಜನಸಂಖ್ಯೆಯ 6 ಕೋಟಿ ಜನಸಂಖ್ಯೆಯಲ್ಲಿ 1 ಕೋಟಿ 8 ಲಕ್ಷ ಜನಸಂಖ್ಯೆ ಅರ್ಥಾತ್ ಶೇ 18% ಪರಿಶಿಷ್ಟ ಜಾತಿ ಜನಸಂಖ್ಯೆ ಇದೆ. ಜನಸಂಖ್ಯಾ ಅನುಗುಣವಾಗಿ ಶೇಖಡ 17% ಬದಲು ಶೇಖಡ 18% ಹೆಚ್ಚಿಸಬೇಕು.ಪರಿಶಿಷ್ಟ ಜಾತಿ ಜನಸಂಖ್ಯಾವಾರು ಶೇಖಡ 18% ಹೆಚ್ಚಿಸಿ ಪರಿಶಿಷ್ಚಜಾತಿಯ ಸಿ ಗುಂಪಿನಲ್ಲಿರುವ ಭೋವಿ, ಬಂಜಾರ, ಕೋರಮ, ಕೊರಚ ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು.

 

ಅವಶ್ಯಕತೆ ಹಾಗೂ ಬೇಡಿಕೆ ಬಂದಲ್ಲಿ ಬರುವ ದಿನಗಳಲ್ಲಿ SC-C ಗುಂಪಿನಲ್ಲಿ ಜನಸಂಖ್ಯಾವಾರು ಪ್ರತ್ಯೆಕ ಗುಂಪು ರಚಿಸಲು ಅವಕಾಶ ಕಲ್ಪಿಸಿ. ನ್ಯಾ.ನಾಗಮೋಹನ ದಾಸ ವರದಿಯಲ್ಲಿ ನೀಡಿರುವ ಸಮೀಕ್ಷೆ ವರದಿ ಪ್ರಕಾರ ಭೋವಿ ಸಮುದಾಯವೇ ಹೆಚ್ಚಿನ ಮೀಸಲಾತಿ ವಂಚಿತ ಸಮುದಾಯ ಎಂದು ಗುರುತಿಸಿರುವುದನ್ನು ಪರಿಗಣಿಸಿ ವಿಶೇಷ ಸೌಲಭ್ಯ ಒದಗಿಸಲು ಸರ್ಕಾರ ಕ್ರಮವಯಿಸಬೇಕು.

Share This Article
Enable Notifications OK No thanks