Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಕೆ: ಹಾವೇರಿ ಗ್ರಾಪಂ ಸದಸ್ಯೆಗೆ 7 ವರ್ಷ ಜೈಲು..!

Facebook
Twitter
Telegram
WhatsApp

 

ಹಾವೇರಿ : ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ ಆರೋಪದ ಮೇಲೆ ಹಾವೇರಿ ಗ್ರಾಮ ಪಂಚಾಯತ್ ಸದಸ್ಯೆಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಮುಕ್ತಬಾಯಿ ಬೀಸೆಗೆ ಏಳು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಚುನಾವಣೆಗಳಲ್ಲಿ ಮೀಸಲಾತಿ ಕ್ಷೇತ್ರಗಳು ಇರುತ್ತವೆ. ಆ ಮೀಸಲಾತಿಯನ್ನು ಪಡೆಯಲು ಸುಳ್ಳು ಪ್ರಮಾಣ ಪತ್ರ ಸೃಷ್ಟಿಸಿ, ಈಗ ಅಧಿಕಾರವೂ ಇಲ್ಲ, ಆಡಳಿತವೂ ಇಲ್ಲದಂತೆ ಜೈಲು ಸೇರುವಂತೆ ಆಗಿದೆ.

ಜಿಲ್ಲೆಯ ಗುತ್ತಲ ಬಾಯಿ ಗ್ರಾಮ ಪಂಚಾಯತಿಯಲ್ಲಿ ಈ ಘಟನೆ ನಡೆದಿದೆ. ಇದೇ ಗ್ರಾಮ ಪಂಚಾಯತಿ ಸದಸ್ಯೆ ಮುಕ್ತಬಾಯಿ ಬೀಸೆ ಎಂಬಾಕೆ ಹಿಂದೂ ಗೊಂದಳಿ ಸಮುದಾಯದವರಾಗಿದ್ದಾರೆ. ಆದರೆ ಗ್ರಾಮ ಪಂಚಾಯ್ತಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದಂತೆ ಸುಳ್ಳು ಪ್ರಮಾಣ ಪತ್ರ ಮಾಡಿಸಿ, ಸಲ್ಲಿಕೆ ಮಾಡಿದ್ದಾರೆ. ತಹಶಿಲ್ದಾರರಿಗೆ ಈ ಸುಳ್ಳು ಪ್ರಮಾಣ‌ಪತ್ರವನ್ನು ಸಲ್ಲಿಸಿದ್ದರು. ಇದೀಗ ಸತ್ಯಾಂಶ ಬೆಳಕಿಗೆ ಬಂದಿದ್ದು, 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.

ಅಷ್ಟೇ ಅಲ್ಲ ಸುಳ್ಳು ಪ್ರಮಾಣ ಪತ್ರ ನೀಡಿದವರಿಗೂ ಈ ವೇಳೆ ಶಿಕ್ಷೆ ಹಾಗೂ ವಿಧಿಸಲಾಗಿದೆ. ಮಾರುತಿ ಕಿಳ್ಳಿಕ್ಯಾತರ್ ಸುಳ್ಳು ಜಾತಿ ಪ್ರಮಾಣ ಸೃಷ್ಟಿಸಲು ಸಹಾಯ ಮಾಡಿದ್ದಾರೆ. ಹೀಗಾಗಿ ಮಾರುತಿಗೂ ಏಳು ವರ್ಷಗಳ ಶಿಕ್ಷೆಯ ಜೊತೆಗೆ 37 ಸಾವಿರ ದಂಡ ವಿಧಿಸಲಾಗಿದೆ. ಮೀಸಲಾತಿಗೋಸ್ಕರ ಈ ರೀತಿ ಸುಳ್ಳು ಜಾತಿ ಪ್ರಮಾಣ ಪತ್ರ ಸೃಷ್ಟಿಸಿ, ಮೋಸ ಮಾಡಿರುವುದು ಗೊತ್ಗಾದ ಬಳಿಕ ಶಿಕ್ಷೆ ವಿಧಿಸಲಾಗಿದೆ. ಈ ನಕಲಿ ಪತ್ರದಿಂದಾಗಿ, ನಿಜವಾದ ಮೀಸಲಾತಿ ಇರುವವರಿಗೆ ಸಿಗಬೇಕಾದ ಸೌಕರ್ಯ ಪಡೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!