Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗೆ ಎಐಡಿಎಸ್ಓ ವತಿಯಿಂದ ಪ್ರಣಾಳಿಕೆ ಸಲ್ಲಿಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ದುಡಿಯುವ ಜನರ ಹೋರಾಟದ ಧ್ವನಿಯಾಗಿರುವ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುಜಾತ.ಡಿ ಅವರಿಗೆ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಯ ಪ್ರಣಾಳಿಕೆಯನ್ನು ಸಲ್ಲಿಸಲಾಯಿತು.

ಸ್ವಾತಂತ್ರ್ಯ ಬಂದು 76ವರ್ಷಗಳು ಕಳೆದರೂ, ಎಲ್ಲಾ ಪಕ್ಷಗಳು ಅಧಿಕಾರದ ಚುಕ್ಕಾಣಿ ಹಿಡಿದಿರೂ ಕೂಡ ವಿದ್ಯಾರ್ಥಿಗಳು ಸಮಸ್ಯೆಗಳು ಕೊನೆಗಾಣುತ್ತಿಲ್ಲ. ಎಲ್ಲಾ ಪಕ್ಷಗಳು ಕೂಡ ಶಿಕ್ಷಣವನ್ನು ಖಾಸಗೀಕರಣ ಮಾಡಿ ಬಡವರಿಗೆ ಶಿಕ್ಷಣ ಇಲ್ಲ ಅನ್ನುವಂತೆ ಆಗಿದೆ.

ಆದ್ದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಕೇಂದ್ರ ಬಜೆಟ್ ನಲ್ಲಿ 10% ಮತ್ತು ರಾಜ್ಯ ಬಜೆಟ್ 30%ರಷ್ಟು ಮೀಸಲಿಡಬೇಕು, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ದೊರೆಯಬೇಕು.  ವಿದ್ಯಾರ್ಥಿ ವೇತನ ಸರಿಯಾದ ಸಮಯಕ್ಕೆ ನೀಡಬೇಕು ಮತ್ತು ಮುಖ್ಯವಾಗಿ ಬಡವರಿಂದ ಶಿಕ್ಷಣ ಕಸಿದುಕೊಳ್ಳುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್.ಇ.ಪಿ-2020) ಅನ್ನು ಹಿಂಪಡೆಯಬೇಕು ಎಂದು ಎಐಡಿಎಸ್ಓ ಜಿಲ್ಲಾ ಮುಖಂಡರು ಕೆ.ಈರಣ್ಣ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಎಐಡಿಎಸ್ಓ ಸದಸ್ಯರು ಮಂಜುನಾಥ, ಎಂ.ಶಾಂತಿ, ಅಭಿಲಾಷ, ನಾಗರಾಜ್.ಹೆಚ್.ಎಮ್ ಮತ್ತು ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...