ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ದುಡಿಯುವ ಜನರ ಹೋರಾಟದ ಧ್ವನಿಯಾಗಿರುವ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುಜಾತ.ಡಿ ಅವರಿಗೆ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಯ ಪ್ರಣಾಳಿಕೆಯನ್ನು ಸಲ್ಲಿಸಲಾಯಿತು.
ಸ್ವಾತಂತ್ರ್ಯ ಬಂದು 76ವರ್ಷಗಳು ಕಳೆದರೂ, ಎಲ್ಲಾ ಪಕ್ಷಗಳು ಅಧಿಕಾರದ ಚುಕ್ಕಾಣಿ ಹಿಡಿದಿರೂ ಕೂಡ ವಿದ್ಯಾರ್ಥಿಗಳು ಸಮಸ್ಯೆಗಳು ಕೊನೆಗಾಣುತ್ತಿಲ್ಲ. ಎಲ್ಲಾ ಪಕ್ಷಗಳು ಕೂಡ ಶಿಕ್ಷಣವನ್ನು ಖಾಸಗೀಕರಣ ಮಾಡಿ ಬಡವರಿಗೆ ಶಿಕ್ಷಣ ಇಲ್ಲ ಅನ್ನುವಂತೆ ಆಗಿದೆ.
ಆದ್ದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಕೇಂದ್ರ ಬಜೆಟ್ ನಲ್ಲಿ 10% ಮತ್ತು ರಾಜ್ಯ ಬಜೆಟ್ 30%ರಷ್ಟು ಮೀಸಲಿಡಬೇಕು, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ದೊರೆಯಬೇಕು. ವಿದ್ಯಾರ್ಥಿ ವೇತನ ಸರಿಯಾದ ಸಮಯಕ್ಕೆ ನೀಡಬೇಕು ಮತ್ತು ಮುಖ್ಯವಾಗಿ ಬಡವರಿಂದ ಶಿಕ್ಷಣ ಕಸಿದುಕೊಳ್ಳುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್.ಇ.ಪಿ-2020) ಅನ್ನು ಹಿಂಪಡೆಯಬೇಕು ಎಂದು ಎಐಡಿಎಸ್ಓ ಜಿಲ್ಲಾ ಮುಖಂಡರು ಕೆ.ಈರಣ್ಣ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಐಡಿಎಸ್ಓ ಸದಸ್ಯರು ಮಂಜುನಾಥ, ಎಂ.ಶಾಂತಿ, ಅಭಿಲಾಷ, ನಾಗರಾಜ್.ಹೆಚ್.ಎಮ್ ಮತ್ತು ಇತರರು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










