Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಆಸಕ್ತಿ ಮತ್ತು ಶ್ರದ್ಧೆಯಿಂದ ಕೆಲಸ ಮಾಡಿದರೆ ಉದ್ಯೋಗದಲ್ಲಿ ಯಶಸ್ಸು ಸಾಧ್ಯ : ಡಾ. ರಂಗಸ್ವಾಮಿ

---Advertisement---

 

ವರದಿ ಮತ್ತು ಫೋಟೋ ಕೃಪೆ
                         ಸುರೇಶ್ ಪಟ್ಟಣ್,                         
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜ. 12 :  ಯಾವುದೇ ಕೆಲಸವನ್ನು ಆಸಕ್ತಿ ಮತ್ತು ಶ್ರದ್ಧೆಯಿಂದ ಮಾಡಿದರೆ ಉದ್ಯೋಗದಲ್ಲಿ ಯಶಸ್ಸನ್ನು ಪಡೆಯಬಹುದು ಎಂದು ಜಿಲ್ಲಾ ಪಂಚಾಯತ್‍ನ ಯೋಜನಾ ನಿರ್ದೇಶಕರಾದ ಡಾ. ರಂಗಸ್ವಾಮಿ ಕರೆ ನೀಡಿದರು.

ರುಡ್‍ಸೆಟ್ ಸಂಸ್ಥೆಯು ಜಿಲ್ಲಾ ಪಂಚಾಯತ, ಚಿತ್ರದುರ್ಗ ಇವರ ಪ್ರಾಯೋಜಿಕತ್ವದಲ್ಲಿ ಎನ್‍ಆರ್‍ಎಲ್‍ಎಂ ಯೋಜನೆ ಯಡಿಯಲ್ಲಿ ಗ್ರಾಮೀಣ ಮಹಿಳೆಯರಿಗೆ ಉದ್ಯಮಶೀಲತಾಭಿವೃದ್ಧಿ (ಇ.ಡಿ.ಪಿ.)ಲಘು ವಾಹನ ಚಾಲನಾ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ  ಭಾಗವಹಿಸಿ ಶಿಬಿರಾರ್ಥಿಗಳಿಗೆ  ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಮನಸ್ಸಿದರೆ ಮಾರ್ಗ ಎನ್ನುವಂತೆ ಯಾವುದೇ ಕೆಲಸವನ್ನು ಆಸಕ್ತಿ ಮತ್ತು ಶ್ರದ್ಧೆಯಿಂದ ಮಾಡಿದರೆ ಉದ್ಯೋಗದಲ್ಲಿ ಯಶಸ್ಸನ್ನು ಪಡೆಯಬಹುದು. ಈ ಚಾಲನಾ ವೃತ್ತಿಯು ಮಹತ್ವಪೂರ್ಣವಾದದ್ದು. ಈ ವೃತ್ತಿಯಲ್ಲಿ ಯಾವುದೇ ತಪ್ಪನ್ನು ಎಸಗಿದರು ಅಪಾಯಕಾರಿ, ಆದ್ದರಿಂದ ಜಾಗರುಕತೆಯಿಂದ ಚಾಲನೆಯನ್ನು ಮಾಡಿ. ರಸ್ತೆ ನಿಯಮಗಳನ್ನು ಸಾರಿಗೆ ನಿಯಮಗಳನ್ನು ಸಂಪೂರ್ಣವಾಗಿ ಪಾಲಿಸಿರಿ. ಗ್ರಾಮೀಣ ಮಹಿಳೆಯರ ಸ್ವಾವಲಂಬನೆ ಬದುಕು ಸಾಧಿಸಲು ಸರ್ಕಾರಗಳು ಅನೇಕ ಕಾರ್ಯಕ್ರಮಗಳನ್ನು ಜಾರಿಗೊಲಿಸಿದೆ. ಅದರ ಬಾಗವಾಗಿ ಘನ ತ್ಯಾಜ್ಯವಸ್ತುಗಳ ಸಂಗ್ರಹ ಮತ್ತು ವಿಲೇವಾರಿಯ ನಿರ್ವಹಣೆ ಮತ್ತು ಜವಾಬ್ದಾರಿಯನ್ನು ಪ್ರತಿ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಒಕ್ಕೂಟಗಳಿಗೆ ನೀಡಲಾಗುತ್ತದೆ ಎಂದು ತಿಳಿಸಿದರು.

ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ರಾಧಮ್ಮ ಹೆಚ್.ಆರ್. ಶಿಬಿರಾರ್ಥಿಗಳಿಗೆ ನೀವು ಪಡೆದ ತರಬೇತಿಯನ್ನು ಸದುಪಯೋಗ ಪಡೆಸಿಕೊಂಡು ಸ್ವ ಉದ್ಯೋಗಿಗಳಾಗಿ ಹಾಗೂ ಉತ್ತಮ ಜೀವನ ನಡೆಸಿ ನಿಮ್ಮ ಗ್ರಾಮದಲ್ಲಿರುವ ಇತರ ನಿರುದ್ಯೋಗಿ ಯುವಕ ಯುವತಿಯರಿಗೆ ಸಂಸ್ಥೆಯ ಬಗ್ಗೆ ತಿಳಿಸಿ ಹಾಗೂ ಅವರಿಗೂ ತರಬೇತಿ ಪಡೆದು ಸ್ವ ಉದ್ಯೋಗ ಮಾಡುವ ಅವಕಾಶ ಕಲ್ಪಿಸಲು ಸಹಕರಿಸಿ ಎಂದರು.

ಕಾರ್ಯಕ್ರಮದಲ್ಲಿ ಎನ್‍ಆರ್‍ಎಲ್‍ಎಂ,ನ ಕಾರ್ಯಕ್ರಮ ವ್ಯವಸ್ಥಾಪಕ ರಮೇಶ ನಾಯ್ಕ್, ಮತ್ತು ಅತಿಥಿ ಉಪನ್ಯಾಸಕರಾದ ಮಹಮ್ಮದ ತಾಜ್‍ಬಾóಷಾ, ಉಪಸ್ಥಿತರಿದ್ದರು ಸಂಸ್ಥೆಯ ಉಪನ್ಯಾಸಕರಾದ  ತೋಟಪ್ಪ ಎಸ್. ಗಾಣಿಗೇರ ಕಾರ್ಯಕ್ರಮ ನಿರೂಪಿಸಿದರು ವಂದಿಸಿದರು. ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...