Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಇಚ್ಛಾಶಕ್ತಿ ಮತ್ತು ಧನಾತ್ಮಕ ಆಲೋಚನೆಗಳು ಇದ್ದರೆ ಮಾತ್ರ ಉದ್ಯೋಗದಲ್ಲಿ ಯಶಸ್ವಿ ಸಾಧ್ಯ : ಶ್ರೀಮತಿ ಟಿ.ಆರ್. ಶಶಿಕಲಾ

---Advertisement---

 

ಸುದ್ದಿಒನ್, ಚಿತ್ರದುರ್ಗ, (ಜೂ.16) : ಮನಸ್ಸಿದರೆ ಮಾರ್ಗ ಎನ್ನುವಂತೆ  ಯಾವುದೇ ಕೆಲಸವನ್ನು ಮಾಡಬೇಕಾದರೆ ಇಚ್ಛಾಶಕ್ತಿಯೊಂದಿಗೆ ಧನಾತ್ಮಕ ಆಲೋಚನೆಗಳು ಇದ್ದರೆ ಮಾತ್ರ ಉದ್ಯೋಗದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ಉಪ ನಿರ್ದೇಶಕಿ ಶ್ರೀಮತಿ ಟಿ.ಆರ್. ಶಶಿಕಲಾ ಹೇಳಿದರು.

ರುಡ್‌ಸೆಟ್ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉದ್ಯಮಶೀಲತಾಭಿವೃದ್ಧಿ – ವಸ್ತ್ರ ಚಿತ್ರಕಲಾ ಉದ್ಯಮಿ  (ಎಂಬ್ರಾಯಿಡರಿ ಮತ್ತು ಪೆಬ್ರಿಕ್ ಪೇಟಿಂಗ್) ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಮುಂದುವರಿದು ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಎಂಬ್ರಾಯಿಡರಿ ಮತ್ತು ಪೆಬ್ರಿಕ್ ಪೇಟಿಂಗ್ ಮಾಡುವುದು ಉತ್ತಮ ಆದಾಯತರುವಂತಹ ಬೇಡಿಕೆಯುತ ಉದ್ಯಮವಾಗಿದೆ. ಈ ಉದ್ಯಮದಲ್ಲಿ ಸಮಯಪಾಲನೆ ಮತ್ತು ಬದ್ಧತೆಯೊಂದಿಗೆ ಕೆಲಸ ಅತ್ಯಂತ ಅವಶ್ಯಕವಾಗಿದೆ. ಆಧುನಿಕ ಜೀವನ ಶೈಲಿಗನುಗುಣವಾಗಿ ನಿಮ್ಮ ಉದ್ಯಮದಲ್ಲಿ ಹೊಸಹೊಸ ವಿನ್ಯಾಸಗಳನ್ನು ಅಳವಡಿಸಿಕೊಳ್ಳುತ್ತಾಸಾಗಬೇಕು.

ಹೊಸದು ನಿರಂತರ ಪ್ರಕ್ರಿಯೆಯಾದಾಗ ನೂತನ ಬದಲಾವಣೆಗೆ ನಾಂದಿಯಾಗುತ್ತದೆ. ಅಂದರೆ ಮಾತ್ರ ತಾಂತ್ರಿಕವಾಗಿ ಬದಲಾಗುತ್ತಿರುವ ಉದ್ಯಮದಲ್ಲಿ ಮುಂದುವರಿಯಲು ಸಾದ್ಯವಾಗುತ್ತದೆ. ಒಂದಿಷ್ಟು ನಗು, ಸಹನೆ ಮತ್ತು ಹೊಂದಾಣಿಕೆಯಿಂದ ವೃತ್ತಿ ಬದುಕನ್ನು ಸಧೃಡವಾಗಿ ಕಟ್ಟಿಕೊಳ್ಳಿರಿ ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಸಕಾರಾತ್ಮಕ ಮನೋಭಾವದೊಂದಿಗಿನ ಕೆಲಸ ಮತ್ತು ನಗು ಮುಖದ ಸೇವೆ ಇವು ಯಶಸ್ವಿ ಉದ್ಯೋಗಿಗಳ ಗುಟ್ಟು ಎಂದು ತಿಳಿಸುತ್ತಾ ಮಾಡುವ ವೃತ್ತಿಯನ್ನು ಪ್ರೀತಿಯಿಂದ ಹಾಗೂ ಶ್ರದ್ಧೆಯಿಂದ ಮಾಡಿ  ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ರಾಧಮ್ಮ ಎಚ್.ಆರ್ ಮಾತನಾಡಿ, ತರಬೇತಿಯ ಅವಧಿಯಲ್ಲಿ ಕಲಿಸಲಾಗಿರುವ ಮೃದು ಕೌಶಲ್ಯಗಳು ಉದ್ಯಮಶೀಲತ ಗುಣಗಳು, ಸಂವಹನ ಕಲೆ, ಸಮಯಪಾಲನೆ, ಮಾರುಕಟ್ಟೆಯ ವಿಷಯಗಳ ಕುರಿತಂತೆ ತಿಳಿದುಕೊಂಡಿರುವ ಅಂಶಗಳನ್ನು ಉದ್ಯೋಗದ ಜೊತೆಗೆ ಜೀವನದಲ್ಲಿ ಅಳವಡಿಸಿಕೊಳ್ಳಿರಿ ಎಂದು ಸಲಹೆ ನೀಡಿದರು.

ತರಬೇತಿಯ ನಂತರವು ಸಂಸ್ಥೆಯಿಂದ ನಿಮ್ಮನ್ನು ಎರಡು ವರ್ಷಗಳ ಕಾಲ ಅವಲೋಕನ ಮಾಡಲಾಗುತ್ತದೆ, ನಿಮ್ಮ ಉದ್ಯೋಗದ ಆಗುಹೋಗುಗಳ ಬಗ್ಗೆ ವಿಚಾರಿಸುತ್ತಾ ಉದ್ಯಮ ಕಟ್ಟುವ ಪ್ರಕ್ರಿಯೆಯಲ್ಲಿ ಸಂಸ್ಥೆ ನಿಮ್ಮೊಂದಿಗಿರುತ್ತದೆ  ಎಂದು ಭರವಸೆ ನೀಡಿದರು.

ಸಂಸ್ಥೆಯ ಉಪನ್ಯಾಸಕರಾದ ತೋಟಪ್ಪ ಎಸ್. ಗಾಣಿಗೇರ ರವರು ಕಾರ್ಯಕ್ರಮ ನಿರೂಪಿಸಿದರು ಮತ್ತು ಉದಯಕುಮಾರ, ಹಿರಿಯ ಉಪನ್ಯಾಸಕರು ಇವರು ವಂದನಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾದ ಶ್ರೀಮತಿ ಶೋಭಾ, ಉಪಸ್ಥಿತರಿದ್ದರು. ಒಟ್ಟು ಕಾರ್ಯಕ್ರಮದಲ್ಲಿ 35 ಶಿಬಿರಾರ್ಥಿಗಳು ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...