Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉತ್ತಮ ಸಂಸ್ಕಾರ ರೂಢಿಸಿಕೊಂಡರೆ ಯಶಸ್ಸು ಸಾಧ್ಯ : ಜಿಲ್ಲಾಧಿಕಾರಿ ಶ್ರೀಮತಿ ದಿವ್ಯಪ್ರಭು ಜಿ ಆರ್ ಜೆ

Facebook
Twitter
Telegram
WhatsApp

ಚಿತ್ರದುರ್ಗ, (ಫೆ.09) :  ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ರೂಡಿಸಿಕೊಳ್ಳುವುದರಿಂದ ಉನ್ನತ ಶಿಕ್ಷಣ ಪಡೆಯುವ ಜೊತೆಗೆ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ಶ್ರೀಮತಿ ದಿವ್ಯಪ್ರಭು ಜಿ ಆರ್ ಜೆ ಹೇಳಿದರು.

ನಗರದ ಶಿಕ್ಷಣ ಸಂಸ್ಥೆಯಾದ ಎಸ್.ಆರ್.ಎಸ್ ಹೆರಿಟೇಜ್ ಶಾಲೆಯಲ್ಲಿ ಸಿ.ಬಿ.ಎಸ್.ಇ. 10 ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ  ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ 10 ವರ್ಷ ಕಷ್ಟಪಟ್ಟರೆ ಇಡೀ ಜೀವನ ಸುಖಮಯವಾಗಿರುತ್ತದೆ. ಪೌರಾಣಿಕ ಆದರಿಸಿದ ವಶಿಷ್ಠ ಮಹರ್ಷಿಗಳ ಕಥೆ ಹೇಳುವುದರೊಂದಿಗೆ ಕ್ರಮಬದ್ಧ ಅಭ್ಯಾಸ ಜೊತೆ ಜೊತೆ ಶಿಸ್ತುಬದ್ಧವಾದ ಜೀವನ ನಡೆಸಬೇಕು. ವಿದ್ಯಾರ್ಥಿಯು ಹೆಚ್ಚು ಅಂಕ ಪಡೆದು ಸಂಸ್ಕಾರ, ಮಾನವೀಯತೆ ಮರೆತರೆ ಅದು ವ್ಯರ್ಥ ಮೊದಲು ಮಾನವಗುಣವನ್ನು ಪಡೆದು ಮನುಷ್ಯರಾಗಿ ಬಾಳಬೇಕು ಎಂದರು.

ತೇಜಸ್ವಿ ಹೆಚ್. ಟಿ. ಸಹ ಪ್ರಾಧ್ಯಾಪಕರು, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ತಮ್ಮ ಜೀವನ ಅನುಭವದ ನುಡಿಮುತ್ತು ಹೇಳುವುದರೊಂದಿಗೆ ಮಕ್ಕಳಿಗೆ  ಸ್ಪೂರ್ತಿಧಾಯಕ ಮಾತುಗಳು ಮತ್ತು ವಿದ್ಯಾರ್ಥಿ ಜೀವನದ  ಗುರಿ ಮತ್ತು ಜವಬ್ಧಾರಿ ಕುರಿತು ತಮ್ಮ ಅನುಭವದ ನುಡಿಮುತ್ತುಗಳನ್ನು ತಿಳಿಸಿದರು.

ಎಸ್ ಆರ್ ಎಸ್ ಶಿಕ್ಷಣ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಬಿ ಎ ಲಿಂಗಾರೆಡ್ಡಿ ಮಾತನಾಡಿ, ವಿದ್ಯಾರ್ಥಿ ಜೀವನ ಹೇಗಿರಬೇಕೆಂದು ಹಾಗೂ ಸಮಾಜದಲ್ಲಿ ತಮ್ಮನ್ನು ತಾವು ಹೇಗೆ ಗುರುತಿಸಿಕೊಳ್ಳಬೇಕೆನ್ನುವುದರ ಜೊತೆ ಪೋಷಕರ ಕರ್ತವ್ಯ ಕುರಿತು ಮಾತನಾಡಿದರು. ಹಾಗೂ ವಿದ್ಯಾರ್ಥಿಗಳ ಮುಂದಿನ ಪರೀಕ್ಷೆಗೆ ಶುಭಹಾರೈಸಿದರು.

ಕಾರ್ಯಕ್ರಮಕ್ಕೆ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಾಧ್ಯಾಕ್ಷರು ಅಮೋಘ್ ಬಿ. ಎಲ್. ಡಾ|| ರವಿ ಟಿ.ಎಸ್. ಸಂಸ್ಥೆಯ ಆಡಳಿತಾಧಿಕಾರಿಗಳು, ಪ್ರಭಾಕರ್‍ಎಂ. ಎಸ್ ಪ್ರಾಂಶುಪಾಲರು ಹಾಗೂ ಶಾಲೆಯ ಶೈಕ್ಷಣಿಕ ಸಂಯೋಜಕರು, ರಾಕೇಶ್ ಬಿ. ವಿ.
ಬೋಧಕವರ್ಗ, ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸುವುದರೊಂದಿಗೆ  ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ತುಂಬು ಹೃದಯದಿಂದ ಶುಭಕೋರಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!