ಸುದ್ದಿಒನ್, ಚಿತ್ರದುರ್ಗ, ಸೆ.01 : ಭಾರತದ ಚೊಚ್ಚಲ ಸೂರ್ಯಯಾನ ಮಿಷನ್ ಆದಿತ್ಯ ಎಲ್-1 ಯಶಸ್ವಿ ಉಡಾವಣೆಯಾಗಿರುವ ಹಿನ್ನೆಲೆ ಕ.ರಾ.ವಿ.ಪ.ರಾಜ್ಯ ಸಮಿತಿ ಸದಸ್ಯ ಎಚ್.ಎಸ್.ಟಿ.ಸ್ವಾಮಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಸೂರ್ಯಯಾನ ಮಿಷನ್ ಆದಿತ್ಯ ಎಲ್-1 ಯಶಸ್ವಿ ಉಡಾವಣೆ : ಎಚ್.ಎಸ್.ಟಿ.ಸ್ವಾಮಿ ಅಭಿನಂದನೆ pic.twitter.com/WwsM8fPkWJ
— suddione-kannada News (@suddione) September 2, 2023
ಭೂಮಿಯಿಂದ ಸುಮಾರು 15 ಕೋಟಿ ಕಿ.ಮೀ. ದೂರದ ಸೂರ್ಯನನ್ನು ಅದರ ಅತ್ಯಂತ ಹೊರ ವಲಯ ಕರೋನ, ಸೌರಜ್ವಾಲೆ, ಸೂರ್ಯನ ವಾತಾವರಣ, ಸೂರ್ಯನ ತಾಪ, ಸೂರ್ಯನ ಕಿರಣಗಳ ಬಗ್ಗೆ ಅಧ್ಯಯನ ನಡೆಸಿ ನಿಖರವಾದ ಮಾಹಿತಿಯನ್ನು ಪಡೆದು ಭೂಮಿಗೆ ಕಳುಹಿಸಲಿದೆ.
ಈ ಯೋಜನೆಯನ್ನು ಯಶಸ್ವಿ ಗೊಳಿಸಿದ ಇಸ್ರೋ ವಿಜ್ಞಾನಿಗಳಿಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಮತ್ತು ಚಿತ್ರದುರ್ಗ ಜಿಲ್ಲೆಯ ಜನರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.













