Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂಥಹ ಕೆಟ್ಟ ವರ್ತನೆ ಅಪರಾಧ : ರೋಹಿಣಿ – ರೂಪಾ ಜಗಳಕ್ಕೆ ಗೃಹ ಸಚಿವರ ರಿಯಾಕ್ಷನ್..!

Facebook
Twitter
Telegram
WhatsApp

 

ಬೆಂಗಳೂರು: ನಿನ್ನೆಯಿಂದ ಐಪಿಎಸ್ ಅಧಿಕಾರಿ ಡಿ ರೂಪಾ ಸೋಷಿಯಲ್ ಮೀಡಿಯಾದಲ್ಲಿ ಹರಿಹಾಯುತ್ತಿದ್ದಾರೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಒಂದೊಂದೆ ಒಂದೊಂದೆ ದಾಖಲೆಗಳನ್ನು ರಿಲೀಸ್ ಮಾಡುತ್ತಿದ್ದಾರೆ. ಮೊದಲಿಗೆ ಹಲವು ಹಗರಣಗಳು, ಡಿಕೆ ರವಿ ಜೀವನದ ಬಗ್ಗೆ ಮಾತನಾಡಿದ್ದ ಡಿ ರೂಪಾ, ಬಳಿಕ ಖಾಸಗಿ ಫೋಟೋಗಳನ್ನು ಕಳುಹಿಸಿ ಉತ್ತೇಜನ ನೀಡುತ್ತಿದ್ದ ಬಗ್ಗೆ ತಿಳಿಸಿದ್ದರು. ಆ ಫೋಟೋಗಳನ್ನು ರಿಲೀಸ್ ಮಾಡಿದ್ದರು. ಉನ್ನತ ಹುದ್ದೆಯಲ್ಲಿರುವವರೇ ಈ ರೀತಿ ಸೋಷಿಯಲ್ ಮೀಡಿಯಾದಲ್ಲಿ ವರ್ತಿಸಿದ್ದನ್ನು ಕಂಡು ಜನ ಆಶ್ಚರ್ಯವಾಗಿದ್ದರು. ಇದೀಗ ಈ ಪ್ರಕರಣಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಎಂಟ್ರಿಯಾಗಿದ್ದಾರೆ.

ಈ ಬಗ್ಗೆ ಮಾತನಾಡಿದ ಆರಗ ಜ್ಞಾನೇಂದ್ರ ಅವರು, ಸರ್ಕಾರ ಕಣ್ಮುಚ್ಚಿ ಕುಳಿತಿಲ್ಲ. ಅವರಿಬ್ಬರ ಮೇಲೂ ಕ್ರಮ ಕೈಗೊಳ್ಳುತ್ತದೆ. ಇಂತಹ ಕೆಟ್ಟ ವರ್ತನೆ ನಿಜಕ್ಕೂ ದೊಡ್ಡ ಅಪರಾಧವಾಗಿದೆ. ಖಾಸಗಿ ವಿಚಾರವನ್ನು ಬೀದಿಗೆ ತರುತ್ತಿದ್ದಾರೆ. ಮೀಡಿಯಾ ಮುಂದೆ ಬಂದು ಈ ರೀತಿ ವರ್ತಿಸುತ್ತಿದ್ದಾರೆ.

ಇವರಿಂದ ಒಳ್ಳೆಯ ಅಧಿಕಾರಿಗಳಿಗೆ ಅವಮಾನವಾಗುತ್ತದೆ. ಇಬ್ಬರ ನಡವಳಿಕೆ ನೋಡ್ತಾ ಇದ್ರೆ ಭಯವಾಗುತ್ತೆ. ಈ ಬಗ್ಗೆ ಡಿಜಿ, ಮುಖ್ಯಮಂತ್ರಿ ಬಳಿ ಮಾತನಾಡಿದ್ದೇನೆ. ಈ ರೀತಿ ಮಾತನಾಡುವುದು ತಪ್ಪು. ಈಗ ನಾನು ಮಾತನಾಡಲ್ಲ. ಮುಖ್ಯಮಂತ್ರಿಗೆ ಎಲ್ಲಾ ಗೊತ್ತು. ಅವರು ಖಂಡಿತ ಕ್ರಮ ಕೈಗೊಳ್ಳುತ್ತಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ-ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ | ಓರ್ವ ಮೃತ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಂಜುನಾಥ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊಳಲ್ಕೆರೆ ಹೆದ್ದಾರಿಯ ಕಣಿವೆ ಬಳಿ ಶನಿವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೋದಿ ಅಬ್ಬರ : ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ‌. ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ ಅಭ್ಯರ್ಥಿಗಳ ಪರವಾವಿ ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಂಚಾರ ನಡೆಸಿ, ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ

error: Content is protected !!