ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.01 : ನಗರದಲ್ಲಿ ಫಿಲ್ಟರ್ ನೀರಿನ ಬೆಲೆಯನ್ನು ದಿಢೀರನೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಜೈಹಿಂದ್ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಹಿಂದೆ ಹಿರಿಯೂರಿನ ವಾಣಿವಿಲಾಸಸಾಗರ ಹಾಗೂ ಶಾಂತಿಸಾಗರದಿಂದ ನಗರಕ್ಕೆ ಕುಡಿಯುವ ನೀರು ಸರಬರಾಜಾಗುತ್ತಿದ್ದು, ಕೆಲವೊಮ್ಮೆ ಕಲುಷಿತ ನೀರು ಕುಡಿದು ಜನ ಜ್ವರ, ಕೆಮ್ಮ, ನೆಗಡಿಯಿಂದ ಬಳಲುತ್ತಿದ್ದುದನ್ನು ಗಮನಿಸಿ ಪ್ರತಿಯೊಬ್ಬರಿಗೂ ಶುದ್ದ ಕುಡಿಯುವ ನೀರು ಸಿಗಲಿ ಎನ್ನುವ ಉದ್ದೇಶದಿಂದ ಐದು ರೂ.ಗಳಿಗೆ ಇಪ್ಪತ್ತು ಲೀಟರ್ ಫಿಲ್ಟರ್ ನೀರು ಪೂರೈಕೆಯಾಗುತ್ತಿದ್ದುದು ಈಗ ಇಪ್ಪತ್ತು ಲೀಟರ್ಗೆ ಹತ್ತು ರೂ.ಗಳನ್ನು ನಿಗಧಿಪಡಿಸಿರುವುದು ಯಾವ ನ್ಯಾಯ? ಎಂದು ಜೈಹಿಂದ್ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರಶ್ನಿಸಿದರು.
ಫಿಲ್ಟರ್ ನೀರಿಗೆ ಬೆಲೆ ಏರಿಕೆ ಮಾಡಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಯವರಲ್ಲಿ ಜೈಹಿಂದ್ ರಕ್ಷಣಾ ವೇದಿಕೆ ಅಧ್ಯಕ್ಷ ಸೈಯದ್ ಅಖ್ತರ್ ಆಗ್ರಹಿಸಿದರು.
ಚಂದ್ರಪ್ಪ, ರಹಮತ್, ಜಬೀವುಲ್ಲಾ, ಬರ್ಕತ್, ಮುಹೀಬ್ ಈ ಸಂದರ್ಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












