Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಗ್ ಬಾಸ್ ಗೆ ಸುದೀಪ್ ಗುಡ್ ಬೈ : ತಂದೆಯ ನಿರ್ಧಾರಕ್ಕೆ ಸಾನ್ವಿ ಹೇಳಿದ್ದೇನು..?

Facebook
Twitter
Telegram
WhatsApp

ಬಿಗ್ ಬಾಸ್ 11 ವರ್ಷದ ಜರ್ನಿ. ಈ ಹತ್ತು ಸೀಸನ್ ಅನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದ ಕಿಚ್ಚ ಸುದೀಪ್ ಅವರೇ 11ನೇ ಸೀಸನ್ ಅನ್ನು ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಅದ್ಯಾಕೋ ಏನೋ ಬಿಗ್ ಬಾಸ್ ಜರ್ನಿಗೆ ಕಿಚ್ಚ ಸುದೀಪ್ ವಿದಾಯ ಘೋಷಿಸಿದ್ದಾರೆ. ಇದು ನನ್ನ ಕಡೆಯ ಬಿಗ್ ಬಾಸ್ ಜರ್ನಿ ಎಂದೇ ಹೇಳಿದ್ದಾರೆ. ಇದು ಬಿಗ್ ಬಾಸ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಆಗಿದೆ.

 

ನಿನ್ನೆ ರಾತ್ರಿಯೇ ಕಿಚ್ಚ ಸುದೀಪ್ ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಇದೀಗ ತಂದೆಯ ನಿರ್ಧಾರದ ಬಗ್ಗೆ ಮಗಳು ಸಾನ್ವಿ ಕೂಡ ಪೋಸ್ಟ್ ಹಾಕಿದ್ದಾರೆ. ತಂದೆಯ ನಿರ್ಧಾರವನ್ನು ಗೌರವಿಸುವುದಾಗಿ ತಿಳಿಸಿದ್ದಾರೆ.

‘ಅಪ್ಪ.. ಬಿಗ್ ಬಾಸ್ ಶೋನಲ್ಲಿ ನಿಮಗೆ ಬೇರೆ ಯಾರೂ ಸರಿಸಾಟಿಯೇ ಇಲ್ಲ. ಇಲ್ಲಿವರೆಗೂ ಬಿಗ್ ಬಾಸ್ ಶೋಗೆ ನೀವೂ ನೀಡಿದ ಕೊಡುಗೆಯನ್ನು ನಾನು ಗೌರವಿಸುತ್ತೇನೆ. ಅಪ್ಪ ನಿಮ್ಮ ಬಿಗ್ ಬಾಸ್ ಜರ್ನಿ ಅತ್ಯಂತ ಹೆಮ್ಮೆ ಪಡುವಂಥದ್ದು. ಬೇರೆ ಯಾರೂ ಕೂಡ ನಿಮ್ಮ ರೀತಿ ಮಾಡುವುದಕ್ಕೆ ಸಾಧ್ಯವೇ ಇಲ್ಲ. ಬಿಗ್ ಬಾಸ್ ವೇದಿಕೆ ಮೇಲೆ ನೀವೂ ಅಮೋಘವಾಗಿ ಕಾಣಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳುತ್ತೀರಿ. ಆದರೆ ಬಿಗ್ ಬಾಸ್ ಜರ್ನಿಯಲ್ಲಿ ನಿಮ್ಮನ್ನು ನೋಡಿದ್ದು, ನನಗೆ ಅತ್ಯಂತ ಸಂತೋಷವನ್ನು ತಂದಿದೆ. ಬಿಗ್ ಬಾಸ್ ಶೋಗಾಗಿ ನೀವೂ ಹಾಕಿದ ಪರಿಶ್ರಮಕ್ಕೆ ಸಾಟಿಯೇ ಇಲ್ಲ’ ಎಂದು ಸಾನ್ವಿ ಸುದೀಪ್ ಅವರು ತಂದೆಯ ಪೋಸ್ಟರ್ ಗೆ ರಿಪ್ಲೆ ಮಾಡಿದ್ದಾರೆ.

ವಾಹಿನಿ ಮತ್ತೆ ಏನಾದರೂ ಸುದೀಪ್ ಅವರನ್ನು ಮನವಿ ಮಾಡಿ ಮತ್ತೆ ನಿರೂಪಣೆಗೆ ಮುಂದುವರೆಸುತ್ತಾರೆ ಎಂಬ ನಂಬಿಕೆ ಇತ್ತು. ಆದರೆ ಈಗ ಸಾನ್ವಿ ಅವರು ಕೂಡ ಅಪ್ಪನ ನಿರ್ಧಾರ ಗೌರವಿಸುತ್ತೇನೆ ಎಂಬ ಪೋಸ್ಟ್ ಹಾಕಿರುವುದು, ಸುದೀಪ್ ಅವರು ಮತ್ತೆ ವಾಪಾಸ್ ಬರುವುದು ಅನುಮಾನವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

ಚಿತ್ರದುರ್ಗ | ಮೂವರು ಮಹಿಳೆಯರು ಕಾಣೆ : ಪತ್ತೆಗೆ ಮನವಿ

ಚಿತ್ರದುರ್ಗ. ಅ.18: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರು ಕಾಣೆಯಾದ ಕುರಿತು ಮೂರು  ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮದ ರೇಣುಕಮ್ಮ ಗಂಡ ಕರಿಯಪ್ಪ

ಜೈಲಿನಿಂದ ಬಿಡುಗಡೆಯಾದ ನಾಗೇಂದ್ರರಿಗೆ ಹೊಸ ಟಾಸ್ಕ್ ನೀಡಿದ ಸಿಎಂ ಸಿದ್ದರಾಮಯ್ಯ..!

  ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಬಂಧಿಯಾಗಿದ್ದ ಬಿ.ನಾಗೇಂದ್ರ ಅವರು ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಜಮೀರ್ ಅಹ್ಮದ್ ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ

error: Content is protected !!