Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುದೀಪ್ ರಾಜಕೀಯಕ್ಕೆ..? ಸಿದ್ದರಾಮಯ್ಯ ಅವರ ಬಗ್ಗೆ ಕಿಚ್ಚ ಹೇಳಿದ್ದೇನು..?

---Advertisement---

ಬೆಂಗಳೂರು: ಕಿಚ್ಚ ಸುದೀಪ್ ಅವರಿಗೆ ನಾಳೆ ಹುಟ್ಟುಹಬ್ಬದ ಸಂಭ್ರಮ. ಅಮ್ಮನಿಲ್ಲದ ನೋವು ಕಿಚ್ಚನಿಗೆ ಕಾಡುತ್ತಿದೆ. ಆದರೂ ಅಭಿಮಾನಿಗಳಿಗೋಸ್ಕರ ಇಂದು ರಾತ್ರಿಯಿಡೀ ಅಭಿಮಾನಿಗಳೊಟ್ಟಿಗೆ ಇರುತ್ತಾರೆ. ಈ ಬಗ್ಗೆ ಒಂದು ಮಾಧ್ಯಮ ಸಂವಾದವನ್ನು ನಡೆಸಿದ್ದಾರೆ. ಈ ವೇಳೆ ರಾಜಕೀಯಕ್ಕೆ ಬರುವ ವಿಚಾರಕ್ಕೆ ಸಂಬಂಧಿಸಿದಂತೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.

ಜೊತೆಗೆ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸುದೀಪ್ ಅವರು ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಮಾತನಾಡಿದರು. ಇದು ಕುತೂಹಲಕಾರಿಯಾಗಿತ್ತು. ಆ ಚರ್ಚೆಯ ಬಗ್ಗೆಯೂ ಮಾತನಾಡಿದ ಸುದೀಪ್ ಅವರು, ಸಿದ್ದರಾಮಯ್ಯ ಅವರು ಪಾಪ ಅವರಿಗೆ ಅವರದ್ದೇ ತಲೆನೋವು ತುಂಬಾನೆ ಇದೆ. ನನ್ನನ್ನ ಯಾಕೆ ಅದಕ್ಕೆಲ್ಲ ಸೇರಿಸಿಕೊಳ್ಳಬೇಕು. ಸಿದ್ದರಾಮಯ್ಯ ಅವರಿಗೆ ನಾನು ಮೊದಲೇ ಹೇಳಿದ್ದೇನೆ. ನನಗೆ ಅವರ ಮೇಲೆ ಅಪಾರವಾದಂತ ಗೌರವ ಇದೆ. ಕಾರಣ ಏನು ಅಂದ್ರೆ ನಾನು ಬೇರೆ ಯಾವ ಕೆಲಸಕ್ಕೂ ಅವರ ಬಳಿ ಹೋಗಿಲ್ಲ. ಯಾವುದೇ ಚಿಕ್ಕ ಕಾರ್ಯಕ್ರಮ ಇರಲಿ, ಅದನ್ನು ಮಾಡಲು ನಿಂತಾಗ ಅಲ್ಲಿಗೆ ಬಂದು ಫ್ಲಾಗ್ ಹಾಸ್ಟ್ ಮಾಡಿಕೊಡುತ್ತಾರೆ. ಯಾವಾಗ ಅವರ ಮನೆಗೆ ಹೋದಾಗಲು, ಕರೆದು ಗೌರವ ಕೊಟ್ಟು ಮಾತನ್ನಾಡಿಸುತ್ತಾರೆ. ಹೀಗಾಗಿ ಆ ವ್ಯಕ್ತಿಯ ಮೇಲೆ ನನಗೆ ಗೌರವ ಇದೆ. ನನಗೆ ಅವರು ವೈಯಕ್ತಿಕವಾಗಿ ಕೆಲಸ ಮಾಡಿಕೊಡುತ್ತಾರೆ. ಸಿಕ್ಕಾಗ ತುಂಬಾ ಪ್ರೀತಿಯಿಂದ ಮಾತನ್ನಾಡಿಸುತ್ತಾರೆ ಎಂದಿದ್ದಾರೆ.

ರಾಜಕಾರಣಕ್ಕೆ ಬರ್ತೀರಾ ಎಂಬ ಪ್ರಶ್ನೆಗೆ, ರಾಜಕಾರಣಕ್ಕೆ ಬರಬೇಕು ಅಂತೇನು ಇಲ್ಲ. ಕೆಲವೊಬ್ಬರು ಬರುವ ಥರ ಮಾಡುತ್ತಿದ್ದಾರೆ. ನೋಡೋಣಾ ಮುಂದೆ. ಹೇಗೆ, ಏನು ಎಂಬುದನ್ನ ಎಂದು ಹೇಳಿದ್ದಾರೆ. ಈ ಮೂಲಕ ರಾಜಕಾರಣಕ್ಕೆ ಬರುವ ವಿಚಾರಕ್ಕೆ ಅಡ್ಡಗೋಡೆ ಮೇಲೆ ದೀಪವಿಟ್ಟಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment