Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಮೀಕ್ಷೆ ನಿರಾಕರಿಸಿದ ಸುಧಾಮೂರ್ತಿ : ಸಿಎಂ ಫಸ್ಟ್ ರಿಯಾಕ್ಷನ್

---Advertisement---

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಇನ್ಫೋಸಿಸ್ ಸಂಸ್ಥಾಪಕರಾದ ಸುಧಾಮೂರ್ತಿ ದಂಪತಿ ನಿರಾಕರಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದು ಹಿಂದುಳಿದವರ ಸಮೀಕ್ಷೆ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸುಧಾಮೂರ್ತಿ ದಂಪತಿ ತಪ್ಪು ತಿಳಿದುಕೊಂಡಿದ್ದಾರೆ. ಹಿಂದುಳಿದವರ ಸಮೀಕ್ಷೆ ಎಂದುಕೊಂಡಿದ್ದಾರೆ ಅದೇ ತಪ್ಪು. ಅವರಿಗೆ ಅರ್ಥವಾಗದೆ ಇದ್ದರೆ ನಾವೇನು ಮಾಡೋದು. ಇದು ಹಿಂದುಳಿದವರ ಸಮೀಕ್ಷೆ ಅಲ್ಲ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ. ಹಾಗಾದ್ರೆ ನಾವೂ ಶಕ್ರಿ ಯೋಜನೆಯನ್ನ ಮಾಡಿದ್ದೀವಿ ಮೇಲ್ಜಾತಿ ಅವರು ಹೋಗಲ್ವಾ, ಗೃಹಲಕ್ಷ್ಮೀ ಯೋಜನೆ ಮಾಡಿದ್ದೀವಿ. ಹಾಗಾದ್ರೆ ಮೇಲ್ಜಾತಿ ಅವರು ತೆಗೆದುಕೊಳ್ಳಲ್ವಾ. ತಪ್ಪು ಮಾಹಿತಿ ಹೋಗಿದೆ ಅನ್ಸುತ್ತೆ. ಪದೇ ಪದೇ ನಾನು ಹೇಳ್ತಾ ಇರೋದು ಇದೇ ಕಾರಣಕ್ಕೆ. ನಾರಾಯಣ ಮೂರ್ತಿ ಅಂಥವರಿಗೆ, ಸುಧಾಮೂರ್ತಿ ಅಂಥವರಿಗೆ ಇದು ಹಿಂದುಳಿದ ಸಮೀಕ್ಷೆ ಅನ್ನಿಸಿರುವುದೇ ಆಶ್ಚರ್ಯ. ಕೇಂದ್ರ ಸರ್ಕಾರ ಜಾತಿಗಣತಿ ಮಾಡುತ್ತೆ ಆಗ ಏನು ಹೇಳ್ತಾರಪ್ಪ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಸಂಬಂಧ ಬಿಕೆ ಹರಿಪ್ರಸಾದ್ ಕೂಡ ಪ್ರತಿಕ್ರಿಯೆ ನೀಡಿದ್ದು, ಸಮೀಕ್ಷೆಯಲ್ಲಿ ಭಾಗವಹಿಸದವರು ದೇಶದ್ರೋಹಿಗಳು, ಸಂವಿಧಾನ ದ್ರೋಹಿಗಳು. ಮೇಲ್ಜಾತಿಯವರಿಗೆ ಹಿಂದುಳಿದವರ ಸಮೀಕ್ಚೆ ಬೇಕಾಗಿಲ್ಲ. ಏನೋ ಸಿಎಂ ಸಿದ್ದರಾಮಯ್ಯ ಅವರು ರಿಸ್ಕ್ ತೆಗೆದುಕೊಂಡು ಈ ಕೆಲಸ ಮಾಡ್ತಾ ಇದ್ದಾರೆ. ಅವರೆಲ್ಲ ತಂತ್ರಜ್ಞಾನದ ದಿಗ್ಗಜರು ಎನಿಸಿಕೊಂಡವರು, ಸರ್ಕಾರದಿಂದ ಒಂದು ರೂಪಾಯಿಗೆ ಭೂಮಿ ಪಡೆದುಕೊಂಡವರು, 35 ಸಾವಿರ ಕೋಟಿ ತೆರಿಗೆ ಕಟ್ಟುವವರು, ಸಿಂಪಲ್ ಸುಧಾಮೂರ್ತಿ ಅಂತ ಹೆಸರು ಪಡೆದುಕಿಂಡವರು,‌ ಮಾಹಿತಿ ತಂತ್ರಜ್ಞಾನದಲ್ಲಿ ಹೆಸರು ಮಾಡಿ ಮಾಹಿತಿಯನ್ನೇ ತಿಳಿದುಕೊಳ್ಳುವುದಿಲ್ಲ ಅಂದ್ರೆ ಹಾಸ್ಯಾಸ್ಪದ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now