ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕನಕಪುರ: ಸಚಿವ ಸುಧಾಕರ್ ಅದ್ಯಾವಾಗ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಮೇಲೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಲೆ ಇರುತ್ತಾರೆ. ಆದ್ರೆ ಇದೀಗ ಡಿಕೆ ಬ್ರದರ್ಸ್ ಜೊತೆಗೆ ಒಂದೇ ವೇದಿಕೆ ಹಂಚಿಕೊಂಡಿದ್ದ ಸಚಿವ ಸುಧಾಕರ್, ಹೊಗಳಿಕೆಯ ಮಾತನ್ನು ಆಡಿದ್ದಾರೆ.
ಕನಕಪುರದಲ್ಲಿ ತಾಯಿ – ಮಕ್ಕಳ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಸುಧಾಕರ್, ಡಿಕೆ ಶಿವಕುಮಾರ್, ಡಿಕೆ ಸುರೇಶ್ ಅತಿಥಿಗಳಾಗಿ ಆಗಮಿಸಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಸಚಿವ ಸುಧಾಕರ್, ಡಿಕೆ ಶಿವಕುಮಾರ್ ಹೇಗೆ ಕನಕಪುರದಲ್ಲಿ ಗೆಲುವು ಕಾಣುತ್ತಾರೆ ಎಂಬುದು ಗೊತ್ತಿದೆ ಎಂದಿದ್ದಾರೆ.
ನಾನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಮೊದಲಿಗೆ ಚುನಾವಣೆಯಲ್ಲಿ ಕಡಿಮೆ ಮತಗಳಿಂದ ಗೆಲುವು ಸಾಧಿಸುತ್ತಿದ್ದರು. ಆದರೆ ಈಗ ಸುಮಾರು 75 ಸಾವಿರ ಅಂತರಗಳಿಂದ ಗೆಲ್ಲುತ್ತಿದ್ದಾರೆ. ನರೇಗಾದಲ್ಲಿ ಡಿಕೆಶಿ ಕ್ರಾಂತಿಯನ್ನೇ ಮಾಡಿದ್ದಾರೆ. ಒಳ್ಳೆಯದ್ದನ್ನು ಮಾಡಿದಾಗ ವಿರೋಧ ಪಕ್ಷದವರೇ ಆದರೂ ಹೊಗಳಬೇಕು. ಕನಕಪುರಕ್ಕೆ ಮೂರು ಕಣ್ಣುಗಳಿವೆ. ಡಿಕೆ ಶಿವಕುಮಾರ್, ಡಿಕೆ ಸುರೇಶ್ ಮತ್ತು ಎಂಎಲ್ಸಿ ರವಿ. ಇನ್ನು ಡಿಕೆ ಸುರೇಶ್ ಅದ್ಯಾವಾಗ ನಿದ್ದೆ ಮಾಡುತ್ತಾರೋ ಗೊತ್ತಿಲ್ಲ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್