ಸುಹಾಸ್ ಶೆಟ್ಟಿಕೊಲೆ ಪ್ರಕರಣ ; ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಜಗದೀಶ್ ಶೆಟ್ಟರ್

suddionenews
1 Min Read

ಹುಬ್ಬಳ್ಳಿ; ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ರಾಜ್ಯಾದ್ಯಂತ ಶಾಕ್ ಆಗಿದೆ. ಈ ಸಂಬಂಧ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ರೀತಿ ಕೊಲೆಗಳು ಹೆಚ್ಚಾಗುತ್ತಿವೆ ಎಂದಿದ್ದಾರೆ.

 

ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ದುರ್ದೈವ ದ ಸಂಗತಿ. ಸುಹಾಸ್ ಶೆಟ್ಟಿ ಕೊಲೆಯನ್ನ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಸುಹಾಸ್ ಶೆಟ್ಟಿ ಕೊಲೆಯೇ ಇದಕ್ಕೆ ಉದಾಹರಣೆ. ಇಷ್ಟೆಲ್ಲ ಘಟನೆಯಾದ ಬಳಿಕವೂ ಸರ್ಕಾರ ಕಠಿಣ ಕ್ರಮವನ್ನು ತೆಗೆದುಕೊಂಡಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಆಡಳಿತ ವ್ಯವಸ್ಥೆ ಹಾಳಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣವಾಗಿ ವಿಫಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ತುಷ್ಠಿಕರಣಕ್ಕೆ ಯಾವುದೇ ಮಟ್ಟಕ್ಕೆ ಹೋಗಲು ತಯಾರಿದ್ದಾರೆ. ಮುಸ್ಲಿಂ ತುಷ್ಟಿಕರಣ ಹೆಚ್ಚಾದ ಕಾರಣದಿಂದಾನೇ ಇಂದು ಹಾಡ ಹಗಲೇ ಕೊಲೆಗಳು ಹೆಚ್ಚಾಗಿರುವುದು.

ಹೀಗಾಗಿಯೇ ರಾಜ್ಯದಲ್ಲಿ ಇಂದು ಏನೇ ಮಾಡಿದರು ಏನು ಮಾಡಲು ಸಾಧ್ಯವಿಲ್ಲ ಎಂಬ ಗಟ್ಟಿ ಧೈರ್ಯ ಮುಸ್ಲಿಮರಿಗೆ. ಶಿವಮೊಗ್ಗದಲ್ಲೂ ಕೆಲವು ಕಡೆ ಹಾಕಿದ ಕೇಸ್ ಗಳನ್ನ ವಾಪಸ್ ಪಡೆದಿದ್ದಾರೆ. ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಅಟ್ಯಾಕ್ ಆದ ಪ್ರಕರಣವನ್ನು ಹಿಂತೆಗೆದುಕೊಂಡಿದ್ದಾರೆ. ಇನ್ನು ಮುಂತಾದ ಕಡೆಗಳಲ್ಲಿ ಹಲವು ಕೇಸ್ ಕೇಸ್ ಗಳನ್ನ ತೆಗೆದುಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಅಂತಾರೆ. ಇದರಿಂದ ಮುಸ್ಲಿಂ ಸಮುದಾಯಕ್ಕೆ ಇನ್ನಷ್ಟು ಸಪೋರ್ಟ್ ಸಿಕ್ಕಂತೆ ಆಗಿದೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *