ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ದಾವಣೆಗೆರೆ ಜಿಲ್ಲೆಯ ಸೂಳೆಕೆರೆ ಏಷ್ಯಾದ ಎರಡನೇ ದೊಡ್ಡ ಕೆರೆ. ಈ ಕೆರೆಯ ನೀರನ್ನು ಸುಮಾರು ಹಳ್ಳಿಗಳಿಗೆ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಇದೀಗ ನೀರು ಕುಡಿಯಲು ಯೋಗ್ಯವಲ್ಲದ ಕಾರಣದಿಂದಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ಈ ಕೆರೆಯಲ್ಲಿ ನಾಲ್ಕು ಲಕ್ಷ ಲೀಟರ್ ನೀರು ಶೇಖರಣೆ ಮಾಡುವ ಸಾಮರ್ಥ್ಯ ಹೊಂದಿದೆ.

ಶುದ್ಧೀಕರಣ ಘಟಕದಲ್ಲಿರುವ ಫಿಲ್ಟರ್ ಹಾಳಾಗಿತ್ತು. ಈ ಹಿನ್ನೆಲೆ ಒಮ್ಮೊಮ್ಮೆ ನೀಲಿ, ಕೆಂಪು ಹೀಗೆ ಬೇರೆ ಬೇರೆ ಬಣ್ಣಕ್ಕೆ ನೀರು ತಿರುಗಿತ್ತು. ಜನ ಕೂಡ ಇದರ ಬಗ್ಗೆ ಸಾಕಷ್ಟು ಸಲ ದೂರು ನೀಡಿದ್ದರು. ಈಗ ಆ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸದ್ಯಕ್ಕೆ ಈ ನೀರು ಕುಡಿಯಲು ಯೋಗ್ಯವಲ್ಲ ಎಂಬ ವರದಿ ಬಂದಿದೆ. ಹೀಗಾಗಿ ಸರಬರಾಜು ಮಾಡುವುದನ್ನು ನಿಲ್ಲಿಸಲಾಗಿದೆ.
ಮೂರು ತಿಂಗಳ ಕಾಲ ನೀರನ್ನು ಸರಬರಾಜು ಮಾಡುವುದನ್ನು ನಿಲ್ಲಿಸಲಾಗಿದೆ. ದುರಸ್ಥಿಗೊಳಿಸಿದ ಬಳಿಕ ಮತ್ತೆ ಪ್ರಯೋಗಾಲಯಕ್ಕೆ ನೀರು ಕಳುಹಿಸಲಾಗುತ್ತದೆ. ಆ ಬಳಿಕ ಬರುವ ವರದಿಯ ಮೇಲೆ ಮತ್ತೆ ನೀರನ್ನು ಸರಬರಾಜು ಮಾಡಲಾಗುತ್ತದೆ. ಹೊಳಲ್ಕೆರೆ, ಜಗಳೂರು, ಚಿತ್ರದುರ್ಗಕ್ಕೆ ಪೂರೈಕೆಯಾಗುತ್ತಿತ್ತು. ಈ ಸಂಬಂಧ ದಾವಣಗೆರೆ ಜಿಲ್ಲಾ ಆರೋಗ್ಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್