Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಸೇರಿದಂತೆ ಹಲವು ಗ್ರಾಮಗಳಿಗೆ ಸರಬರಾಜು ಆಗುತ್ತಿದ್ದ ಸೂಳೆಕೆರೆ ನೀರು ಸ್ಥಗಿತ..!

Facebook
Twitter
Telegram
WhatsApp

 

 

ದಾವಣೆಗೆರೆ ಜಿಲ್ಲೆಯ ಸೂಳೆಕೆರೆ ಏಷ್ಯಾದ ಎರಡನೇ ದೊಡ್ಡ ಕೆರೆ. ಈ ಕೆರೆಯ ನೀರನ್ನು ಸುಮಾರು ಹಳ್ಳಿಗಳಿಗೆ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಇದೀಗ ನೀರು ಕುಡಿಯಲು ಯೋಗ್ಯವಲ್ಲದ ಕಾರಣದಿಂದಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ಈ ಕೆರೆಯಲ್ಲಿ ನಾಲ್ಕು ಲಕ್ಷ ಲೀಟರ್ ನೀರು ಶೇಖರಣೆ ಮಾಡುವ ಸಾಮರ್ಥ್ಯ ಹೊಂದಿದೆ.

ಶುದ್ಧೀಕರಣ ಘಟಕದಲ್ಲಿರುವ ಫಿಲ್ಟರ್ ಹಾಳಾಗಿತ್ತು. ಈ ಹಿನ್ನೆಲೆ ಒಮ್ಮೊಮ್ಮೆ ನೀಲಿ, ಕೆಂಪು ಹೀಗೆ ಬೇರೆ ಬೇರೆ ಬಣ್ಣಕ್ಕೆ ನೀರು ತಿರುಗಿತ್ತು. ಜನ ಕೂಡ ಇದರ ಬಗ್ಗೆ ಸಾಕಷ್ಟು ಸಲ ದೂರು ನೀಡಿದ್ದರು. ಈಗ ಆ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸದ್ಯಕ್ಕೆ ಈ ನೀರು ಕುಡಿಯಲು ಯೋಗ್ಯವಲ್ಲ ಎಂಬ ವರದಿ ಬಂದಿದೆ. ಹೀಗಾಗಿ ಸರಬರಾಜು ಮಾಡುವುದನ್ನು ನಿಲ್ಲಿಸಲಾಗಿದೆ.

ಮೂರು ತಿಂಗಳ ಕಾಲ ನೀರನ್ನು ಸರಬರಾಜು‌ ಮಾಡುವುದನ್ನು ನಿಲ್ಲಿಸಲಾಗಿದೆ. ದುರಸ್ಥಿಗೊಳಿಸಿದ ಬಳಿಕ ಮತ್ತೆ ಪ್ರಯೋಗಾಲಯಕ್ಕೆ ನೀರು ಕಳುಹಿಸಲಾಗುತ್ತದೆ. ಆ ಬಳಿಕ ಬರುವ ವರದಿಯ ಮೇಲೆ ಮತ್ತೆ ನೀರನ್ನು ಸರಬರಾಜು ಮಾಡಲಾಗುತ್ತದೆ. ಹೊಳಲ್ಕೆರೆ, ಜಗಳೂರು, ಚಿತ್ರದುರ್ಗಕ್ಕೆ ಪೂರೈಕೆಯಾಗುತ್ತಿತ್ತು. ಈ ಸಂಬಂಧ ದಾವಣಗೆರೆ ಜಿಲ್ಲಾ ಆರೋಗ್ಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!